ಸಾಂದರ್ಭಿಕ ಚಿತ್ರ 
ದೇಶ

ವಾಂಖೆಡೆ ಕ್ರೀಡಾಂಗಣದ BCCI ಕಚೇರಿಯಿಂದ 6.5 ಲಕ್ಷ ರೂ ಮೌಲ್ಯದ 261 ಜೆರ್ಸಿ ಕಳ್ಳತನ: ಓರ್ವನ ಬಂಧನ

ಜೂ.13ರಂದು ವಾಂಖೆಡೆ ಕ್ರೀಡಾಂಗಣದಲ್ಲಿರುವ ಬಿಸಿಸಿಐನ ಅಧಿಕೃತ ಮಳಿಗೆಗೆ ಅನುಮತಿಯಿಲ್ಲದೇ ಪ್ರವೇಶಿಸಿದ್ದರಿಂದ ಎಫ್‌ಐಆರ್ ದಾಖಲಾಗಿತ್ತು.

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಆರ್‌ಸಿಬಿ ಸೇರಿ ವಿವಿಧ ಫ್ರಾಂಚೈಸಿಗಳ 6.5 ಲಕ್ಷ ರೂ. ಮೌಲ್ಯದ 261 ಜೆರ್ಸಿ ಕಳ್ಳತನವಾಗಿದೆ. ಈ ಹಿನ್ನೆಲೆ ಮುಂಬೈ ಪೊಲೀಸರು ಕ್ರೀಡಾಂಗಣದ ಸೆಕ್ಯುರಿಟಿ ಗಾರ್ಡ್‌ನನ್ನು ಬಂಧಿಸಿದ್ದಾರೆ.

ಕ್ರೀಡಾಂಗಣದ ಸೆಕ್ಯುರಿಟಿ ಗಾರ್ಡ್ ಆಗಿರುವ ಪೂರ್ವ ಮೀರಾ ರಸ್ತೆಯ ನಿವಾಸಿ ಫಾರೂಕ್ ಅಸ್ಲಂ ಖಾನ್ (46) ಬಂಧಿತ ಆರೋಪಿ. ಜೂ.13ರಂದು ವಾಂಖೆಡೆ ಕ್ರೀಡಾಂಗಣದಲ್ಲಿರುವ ಬಿಸಿಸಿಐನ ಅಧಿಕೃತ ಮಳಿಗೆಗೆ ಅನುಮತಿಯಿಲ್ಲದೇ ಪ್ರವೇಶಿಸಿದ್ದರಿಂದ ಎಫ್‌ಐಆರ್ ದಾಖಲಾಗಿತ್ತು.

ಇತ್ತೀಚಿಗೆ ಬಿಸಿಸಿಐ ನಡೆಸುತ್ತಿದ್ದ ಲೆಕ್ಕಪರಿಶೋಧನೆ ವೇಳೆ ಸ್ಟಾಕ್ ಕಡಿಮೆಯಿರುವುದು ಪತ್ತೆಯಾಗಿದೆ. ಬಳಿಕ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಭದ್ರತಾ ಸಿಬ್ಬಂದಿ ಪೆಟ್ಟಿಗೆಯೊಂದನ್ನು ಹೊತ್ತೊಯ್ಯುತ್ತಿರುವುದು ಬೆಳಕಿಗೆ ಬಂದಿದೆ. ನಂತರ ಜು.17ರಂದು ಬಿಸಿಸಿಐ ಉದ್ಯೋಗಿ ಹೇಮಾಂಗ್ ಭರತ್ ಕುಮಾರ್ ಅಮೀನ್ ಅವರು ಮೆರೈನ್ ಡ್ರೈವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ ಕ್ಯಾಪಿಟಲ್ಸ್ ಸೇರಿ ಇತರ ಐಪಿಎಲ್ ಫ್ರ್ಯಾಂಚೈಸಿಗಳ ಜೆರ್ಸಿಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು, 6.52 ಲಕ್ಷ ರೂ. ಮೌಲ್ಯದ 261 ಜೆರ್ಸಿಗಳನ್ನು ಕಳ್ಳತನ ಮಾಡಿರುವ ಆರೋಪದ ಮೇಲೆ 2023ರ ಬಿಎನ್‌ಎಸ್ ಸೆಕ್ಷನ್ 306ರ ಅಡಿಯಲ್ಲಿ ಸೆಕ್ಯುರಿಟಿ ಗಾರ್ಡ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ, ಬಿಸಿಸಿಐ ಕಚೇರಿಯಲ್ಲಿ ನವೀಕರಣ ಕಾರ್ಯ ನಡೆಯುತ್ತಿರುವುದರಿಂದ ಸ್ಟಾಕ್ ಕ್ಲಿಯೆರೆನ್ಸ್‌ಗಾಗಿ ಜೆರ್ಸಿಗಳು ಬಂದಿವೆ ಎಂದು ನನಗೆ ತಿಳಿಸಿದ್ದರು. ಜೊತೆಗೆ ಆನ್‌ಲೈನ್‌ನಲ್ಲಿ ಜೂಜಾಟದಿಂದಾಗಿ ಹಣವನ್ನೆಲ್ಲಾ ಕಳೆದುಕೊಂಡಿದ್ದೆ. ಇದೇ ಸಮಯದಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಹರಿಯಾಣ ಮೂಲದ ಡೀಲರ್‌ನ ಪರಿಚಯವಾಗಿತ್ತು.

ಹೀಗಾಗಿ ಹಣ ಬೇಕಿದ್ದರಿಂದ ಕೋರಿಯರ್ ಮೂಲಕ ಕಳುಹಿಸಿ ಜೆರ್ಸಿಗಳನ್ನು ಮಾರಾಟ ಮಾಡಿದೆ. ಜೊತೆಗೆ ಸ್ವಲ್ಪ ಚೌಕಾಸಿ ಮಾಡಿದ್ದೇನೆ ಎಂದು ತಿಳಿಸಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT