ಸಾಂದರ್ಭಿಕ ಚಿತ್ರ 
ದೇಶ

ವಾಂಖೆಡೆ ಕ್ರೀಡಾಂಗಣದ BCCI ಕಚೇರಿಯಿಂದ 6.5 ಲಕ್ಷ ರೂ ಮೌಲ್ಯದ 261 ಜೆರ್ಸಿ ಕಳ್ಳತನ: ಓರ್ವನ ಬಂಧನ

ಜೂ.13ರಂದು ವಾಂಖೆಡೆ ಕ್ರೀಡಾಂಗಣದಲ್ಲಿರುವ ಬಿಸಿಸಿಐನ ಅಧಿಕೃತ ಮಳಿಗೆಗೆ ಅನುಮತಿಯಿಲ್ಲದೇ ಪ್ರವೇಶಿಸಿದ್ದರಿಂದ ಎಫ್‌ಐಆರ್ ದಾಖಲಾಗಿತ್ತು.

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಆರ್‌ಸಿಬಿ ಸೇರಿ ವಿವಿಧ ಫ್ರಾಂಚೈಸಿಗಳ 6.5 ಲಕ್ಷ ರೂ. ಮೌಲ್ಯದ 261 ಜೆರ್ಸಿ ಕಳ್ಳತನವಾಗಿದೆ. ಈ ಹಿನ್ನೆಲೆ ಮುಂಬೈ ಪೊಲೀಸರು ಕ್ರೀಡಾಂಗಣದ ಸೆಕ್ಯುರಿಟಿ ಗಾರ್ಡ್‌ನನ್ನು ಬಂಧಿಸಿದ್ದಾರೆ.

ಕ್ರೀಡಾಂಗಣದ ಸೆಕ್ಯುರಿಟಿ ಗಾರ್ಡ್ ಆಗಿರುವ ಪೂರ್ವ ಮೀರಾ ರಸ್ತೆಯ ನಿವಾಸಿ ಫಾರೂಕ್ ಅಸ್ಲಂ ಖಾನ್ (46) ಬಂಧಿತ ಆರೋಪಿ. ಜೂ.13ರಂದು ವಾಂಖೆಡೆ ಕ್ರೀಡಾಂಗಣದಲ್ಲಿರುವ ಬಿಸಿಸಿಐನ ಅಧಿಕೃತ ಮಳಿಗೆಗೆ ಅನುಮತಿಯಿಲ್ಲದೇ ಪ್ರವೇಶಿಸಿದ್ದರಿಂದ ಎಫ್‌ಐಆರ್ ದಾಖಲಾಗಿತ್ತು.

ಇತ್ತೀಚಿಗೆ ಬಿಸಿಸಿಐ ನಡೆಸುತ್ತಿದ್ದ ಲೆಕ್ಕಪರಿಶೋಧನೆ ವೇಳೆ ಸ್ಟಾಕ್ ಕಡಿಮೆಯಿರುವುದು ಪತ್ತೆಯಾಗಿದೆ. ಬಳಿಕ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಭದ್ರತಾ ಸಿಬ್ಬಂದಿ ಪೆಟ್ಟಿಗೆಯೊಂದನ್ನು ಹೊತ್ತೊಯ್ಯುತ್ತಿರುವುದು ಬೆಳಕಿಗೆ ಬಂದಿದೆ. ನಂತರ ಜು.17ರಂದು ಬಿಸಿಸಿಐ ಉದ್ಯೋಗಿ ಹೇಮಾಂಗ್ ಭರತ್ ಕುಮಾರ್ ಅಮೀನ್ ಅವರು ಮೆರೈನ್ ಡ್ರೈವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ ಕ್ಯಾಪಿಟಲ್ಸ್ ಸೇರಿ ಇತರ ಐಪಿಎಲ್ ಫ್ರ್ಯಾಂಚೈಸಿಗಳ ಜೆರ್ಸಿಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು, 6.52 ಲಕ್ಷ ರೂ. ಮೌಲ್ಯದ 261 ಜೆರ್ಸಿಗಳನ್ನು ಕಳ್ಳತನ ಮಾಡಿರುವ ಆರೋಪದ ಮೇಲೆ 2023ರ ಬಿಎನ್‌ಎಸ್ ಸೆಕ್ಷನ್ 306ರ ಅಡಿಯಲ್ಲಿ ಸೆಕ್ಯುರಿಟಿ ಗಾರ್ಡ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ, ಬಿಸಿಸಿಐ ಕಚೇರಿಯಲ್ಲಿ ನವೀಕರಣ ಕಾರ್ಯ ನಡೆಯುತ್ತಿರುವುದರಿಂದ ಸ್ಟಾಕ್ ಕ್ಲಿಯೆರೆನ್ಸ್‌ಗಾಗಿ ಜೆರ್ಸಿಗಳು ಬಂದಿವೆ ಎಂದು ನನಗೆ ತಿಳಿಸಿದ್ದರು. ಜೊತೆಗೆ ಆನ್‌ಲೈನ್‌ನಲ್ಲಿ ಜೂಜಾಟದಿಂದಾಗಿ ಹಣವನ್ನೆಲ್ಲಾ ಕಳೆದುಕೊಂಡಿದ್ದೆ. ಇದೇ ಸಮಯದಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಹರಿಯಾಣ ಮೂಲದ ಡೀಲರ್‌ನ ಪರಿಚಯವಾಗಿತ್ತು.

ಹೀಗಾಗಿ ಹಣ ಬೇಕಿದ್ದರಿಂದ ಕೋರಿಯರ್ ಮೂಲಕ ಕಳುಹಿಸಿ ಜೆರ್ಸಿಗಳನ್ನು ಮಾರಾಟ ಮಾಡಿದೆ. ಜೊತೆಗೆ ಸ್ವಲ್ಪ ಚೌಕಾಸಿ ಮಾಡಿದ್ದೇನೆ ಎಂದು ತಿಳಿಸಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್