ಸಾಂದರ್ಭಿಕ ಚಿತ್ರ 
ದೇಶ

ಲಡಾಖ್‌: ಸೇನಾ ವಾಹನದ ಮೇಲೆ ಬಂಡೆ ಬಿದ್ದು ಇಬ್ಬರು ಯೋಧರು ಹುತಾತ್ಮ

ಮೃತರನ್ನು ಲೆಫ್ಟಿನೆಂಟ್ ಕರ್ನಲ್ ಭಾನು ಪ್ರತಾಪ್ ಸಿಂಗ್ ಮಂಕೋಟಿಯಾ ಮತ್ತು ಲ್ಯಾನ್ಸ್ ದಫದಾರ್ ದಲ್ಜಿತ್ ಸಿಂಗ್(14 ಸಿಂಧ್ ಹಾರ್ಸ್) ಎಂದು ಸೇನೆ ಗುರುತಿಸಿದೆ.

ಲಡಾಖ್‌: ಜಮ್ಮು ಮತ್ತು ಕಾಶ್ಮೀರದ ಪೂರ್ವ ಲಡಾಖ್‌ನಲ್ಲಿ ಬುಧವಾರ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ವಾಹನದ ಮೇಲೆ ಬಂಡೆಯೊಂದು ಬಿದ್ದು, ಲೆಫ್ಟಿನೆಂಟ್ ಕರ್ನಲ್ ಸೇರಿದಂತೆ ಇಬ್ಬರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಮೂವರು ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೇಹ್‌ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಗಾಲ್ವಾನ್‌ನ ಡರ್ಬುಕ್ ಬಳಿಯ ಚಾರ್‌ಬಾಗ್‌ನಲ್ಲಿ ಇಂದು ಬೆಳಗ್ಗೆ 11.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ಮೃತರನ್ನು ಲೆಫ್ಟಿನೆಂಟ್ ಕರ್ನಲ್ ಭಾನು ಪ್ರತಾಪ್ ಸಿಂಗ್ ಮಂಕೋಟಿಯಾ ಮತ್ತು ಲ್ಯಾನ್ಸ್ ದಫದಾರ್ ದಲ್ಜಿತ್ ಸಿಂಗ್(14 ಸಿಂಧ್ ಹಾರ್ಸ್) ಎಂದು ಸೇನೆ ಗುರುತಿಸಿದೆ.

ಮೇಜರ್ ಮಾಯಾಂಕ್ ಶುಭಮ್(14 ಸಿಂಧ್ ಹಾರ್ಸ್), ಮೇಜರ್ ಅಮಿತ್ ದೀಕ್ಷಿತ್ ಮತ್ತು ಕ್ಯಾಪ್ಟನ್ ಗೌರವ್(60 ಆರ್ಮ್ಡ್) ಅವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಲೆಫ್ಟಿನೆಂಟ್ ಜನರಲ್ ಪ್ರತೀಕ್ ಶರ್ಮಾ, ಸೇನಾ ಮುಖ್ಯಸ್ಥರು ಮತ್ತು ಉತ್ತರ ಕಮಾಂಡ್‌ನ ಎಲ್ಲಾ ಶ್ರೇಣಿಗಳು, ಕರ್ತವ್ಯದ ವೇಳೆ ಪ್ರಾಣ ತ್ಯಾಗ ಮಾಡಿದ ಧೈರ್ಯಶಾಲಿಗಳಾದ ಲೆಫ್ಟಿನೆಂಟ್ ಕರ್ನಲ್ ಭಾನು ಪ್ರತಾಪ್ ಸಿಂಗ್ ಮಂಕೋಟಿಯಾ ಮತ್ತು ಲ್ಯಾನ್ಸ್ ದಫದಾರ್ ದಲ್ಜಿತ್ ಸಿಂಗ್ ಅವರಿಗೆ ಗೌರವ ಸಲ್ಲಿಸುತ್ತವೆ.

"ಈ ದುಃಖದ ಸಮಯದಲ್ಲಿ ನಾರ್ದರ್ನ್ ಕಮಾಂಡ್ ದುಃಖಿತ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ" ಎಂದು ನಾರ್ದರ್ನ್ ಕಮಾಂಡ್ X ನಲ್ಲಿ ಪೋಸ್ಟ್‌ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರು ಎಟಿಎಂ ದರೋಡೆ: ಮತ್ತೋರ್ವ ಪ್ರಮುಖ ಆರೋಪಿ Xavier ತಮಿಳುನಾಡಿನಲ್ಲಿ ಬಂಧನ!

New Labour Codes- ಕೇಂದ್ರ ಸರ್ಕಾರದಿಂದ ಐತಿಹಾಸಿಕ 4 ಕಾರ್ಮಿಕ ಸಂಹಿತೆ ಜಾರಿ, ಯೂನಿಯನ್‌ ಗಳ ವಿರೋಧ, ಎಚ್ಚರಿಕೆ ಹೆಜ್ಜೆಯಿಡಲು ಕಂಪೆನಿಗಳ ನಿರ್ಧಾರ

ಮತ್ತೆ ಶಾಕ್ ಕೊಟ್ಟ Amazon, ಅಕ್ಟೋಬರ್‌ನಲ್ಲಿ 1800ಕ್ಕೂ ಅಧಿಕ ಎಂಜಿನಿಯರ್ ಗಳ ಉದ್ಯೋಗ ಕಡಿತ, ಒಟ್ಟಾರೆ 14 ಸಾವಿರ ಮಂದಿ ವಜಾ!

ಬಿಹಾರ ವಿಧಾನಸಭೆ ಸ್ಪೀಕರ್ ಹುದ್ದೆಗೆ ತೀವ್ರಗೊಂಡ ಲಾಬಿ; ಬಿಜೆಪಿ, ಜೆಡಿಯು ನಡುವೆ ಪೈಪೋಟಿ!

ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ: ದೆಹಲಿಯಲ್ಲಿ ಡಿಕೆ ಶಿವಕುಮಾರ್ ಬಣದ ಮೇಲಾಟ; ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹೋರಾಟ!

SCROLL FOR NEXT