ನಟ ಪ್ರಕಾಶ್ ರಾಜ್ 
ದೇಶ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇ.ಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ನಟ ಪ್ರಕಾಶ್ ರಾಜ್ ಹಾಜರು

ಪ್ರಕಾಶ್ ರಾಜ್ ಜೊತೆಗೆ ನಟರಾದ ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ ಮತ್ತು ಲಕ್ಷ್ಮಿ ಮಂಚು ಅವರಿಗೂ ಇ.ಡಿ ವಿಚಾರಣೆಗೆ ಸಮನ್ಸ್ ನೀಡಿತ್ತು.

ಹೈದರಾಬಾದ್: ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಮತ್ತು ಜೂಜಾಟಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಬುಧವಾರ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ತೆಲುಗು, ಕನ್ನಡ ಮತ್ತು ಇತರ ದಕ್ಷಿಣ ಭಾರತದ ಜನಪ್ರಿಯ ನಟ, ಇಲ್ಲಿನ ವಲಯ ಕಚೇರಿಯಲ್ಲಿ ತನಿಖಾ ಸಂಸ್ಥೆಯ ಅಧಿಕಾರಿಗಳ ಮುಂದೆ ಹಾಜರಾದರು.

ಪ್ರಕಾಶ್ ರಾಜ್ ಜೊತೆಗೆ ನಟರಾದ ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ ಮತ್ತು ಲಕ್ಷ್ಮಿ ಮಂಚು ಅವರಿಗೂ ಇ.ಡಿ ವಿಚಾರಣೆಗೆ ಸಮನ್ಸ್ ನೀಡಿತ್ತು. ಆಗಸ್ಟ್ 6 ರಂದು ವಿಜಯ್ ದೇವರಕೊಂಡ (36) ಮತ್ತು ಆಗಸ್ಟ್ 13 ರಂದು ಲಕ್ಷ್ಮಿ ಮಂಚು (47) ಅವರನ್ನು ಇಲ್ಲಿನ ವಲಯ ಕಚೇರಿಗೆ ಹಾಜರಾಗುವಂತೆ ತನಿಖಾ ಸಂಸ್ಥೆ ತಿಳಿಸಿದೆ.

ಅಕ್ರಮವಾಗಿ ಹಣ ಸಂಪಾದಿಸುವಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಲಾದ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜುಲೈ 23 ರಂದು ರಾಣಾ ದಗ್ಗುಬಾಟಿ (40) ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ, ವಿಚಾರಣೆಗೆ ಹಾಜರಾಗಲು ವಿಫಲವಾದ ನಂತರ ದಗ್ಗುಬಾಟಿ ಅವರಿಗೆ ಇ.ಡಿ ಆಗಸ್ಟ್ 11 ರಂದು ಹಾಜರಾಗುವಂತೆ ಸೂಚಿಸಿದೆ.

ಈ ನಟರು ಮತ್ತು ಹಲವಾರು ಇತರ ಸೆಲೆಬ್ರಿಟಿಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ಆಧಾರದ ಮೇಲೆ ಇ.ಡಿ ವಿಶೇಷ ತನಿಖೆಯನ್ನು ಪ್ರಾರಂಭಿಸಿದೆ.

ಈ ವ್ಯಕ್ತಿಗಳು ಜಂಗ್ಲೀ ರಮ್ಮಿ, ಜೀಟ್‌ವಿನ್, ಲೋಟಸ್ 365 ಇತ್ಯಾದಿ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಲಾಗಿದ್ದು, ಇದರಿಂದಾಗಿ ಹಲವಾರು ಯುವಕರು ಹಣ ಕಳೆದುಕೊಂಡಿದ್ದಾರೆ. ಈ ಪ್ಲಾಟ್‌ಫಾರ್ಮ್‌ಗಳು ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟದ ಮೂಲಕ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಹಣವನ್ನು ಗಳಿಸಿವೆ ಎಂದು ಆರೋಪಿಸಿರುವುದಾಗಿ ಇ.ಡಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!