ಮಣಿಪುರ 
ದೇಶ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಸ್ತರಣೆಗೆ ಲೋಕಸಭೆಯಲ್ಲಿ ನಿರ್ಣಯ ಮಂಡನೆ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಸ್ತರಿಸುವ ಶಾಸನಬದ್ಧ ನಿರ್ಣಯವನ್ನು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಇಂದು ಮಂಡಿಸಿದ್ದಾರೆ.

ನವದೆಹಲಿ: ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಆಗಸ್ಟ್ 13ರ ನಂತರ ಇನ್ನೂ ಆರು ತಿಂಗಳು ವಿಸ್ತರಿಸಲು ಅನುಮೋದನೆ ಕೋರಿ ಕೇಂದ್ರ ಸರ್ಕಾರ ಬುಧವಾರ ಲೋಕಸಭೆಯಲ್ಲಿ ನಿರ್ಣಯ ಮಂಡಿಸಿದೆ.

ಲೋಕಸಭೆಯಲ್ಲಿ ಚರ್ಚೆಗಾಗಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಸ್ತರಿಸುವ ಶಾಸನಬದ್ಧ ನಿರ್ಣಯವನ್ನು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಇಂದು ಮಂಡಿಸಿದ್ದಾರೆ.

ಮಣಿಪುರದಲ್ಲಿ ಕಳೆದ ಫೆಬ್ರವರಿ 13 ರಂದು ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದ್ದು, ಏಪ್ರಿಲ್ 2 ರಂದು ಸದನವು ಅದನ್ನು ಅಂಗೀಕರಿಸಿದೆ ಎಂದು ಸ್ಪೀಕರ್ ಓಂ ಬಿರ್ಲಾ ತಿಳಿಸಿದರು.

ಸಂಸತ್ತಿನಿಂದ ರಾಷ್ಟ್ರಪತಿ ಆಳ್ವಿಕೆಯ ಅನುಮೋದನೆಯು ಆರು ತಿಂಗಳವರೆಗೆ ಮಾನ್ಯವಾಗಿರುತ್ತದೆ.

"ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ ಆರು ತಿಂಗಳು ವಿಸ್ತರಿಸಬೇಕಾದರೆ, ಶಾಸನಬದ್ಧ ನಿರ್ಣಯವನ್ನು ಸಂಸತ್ತಿನ ಎರಡೂ ಸದನಗಳು ಅನುಮೋದಿಸಬೇಕಾಗುತ್ತದೆ" ಎಂದು ಬಿರ್ಲಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳ, ಯುಪಿ, ಇತರ ರಾಜ್ಯಗಳಲ್ಲಿ SIR ವಿರುದ್ಧ ಹೊಸ ಅರ್ಜಿ: EC ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

'ಕೈ ಇಟ್ಟಲೆಲ್ಲಾ ದುಡ್ಡೋ ದುಡ್ಡು..': ಕರ್ನಾಟಕದಿಂದ ಕೇರಳಕ್ಕೆ ಹಣ ಕಳ್ಳಸಾಗಣೆ, 3.15 ಕೋಟಿ ರೂ. ನಗದು ಕಸ್ಟಮ್ಸ್ ವಶಕ್ಕೆ! Video

ಕೇರಳ: ಮದುವೆ ದಿನವೇ ಅಪಘಾತ, ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವಧುವಿಗೆ ಆಸ್ಪತ್ರೆಯಲ್ಲಿಯೇ ತಾಳಿ ಕಟ್ಟಿದ ವರ!

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪನ: ಕನಿಷ್ಠ 6 ಸಾವು, ಕೋಲ್ಕತಾ ಸೇರಿ ಭಾರತದ ಹಲವೆಡೆ ಕಂಪಿಸಿದ ಭೂಮಿ, Video

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

SCROLL FOR NEXT