ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆ: IMD

ಮುಂಗಾರು ಋತುವಿನ ಮೊದಲಾರ್ಧದಲ್ಲಿ(ಜೂನ್ ಮತ್ತು ಜುಲೈ) ಭಾರತವು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಪಡೆದಿದೆ.

ನವದೆಹಲಿ: ಮುಂಗಾರು ಋತುವಿನ ದ್ವಿತೀಯಾರ್ಧದಲ್ಲೂ(ಆಗಸ್ಟ್ ಮತ್ತು ಸೆಪ್ಟೆಂಬರ್) ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಗುರುವಾರ ತಿಳಿಸಿದೆ.

ಪೂರ್ವ ಭಾರತದ ಈಶಾನ್ಯ ಮತ್ತು ಪಕ್ಕದ ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಆಗಸ್ಟ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಮಳೆ ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಮುಂಗಾರು ಋತುವಿನ ಮೊದಲಾರ್ಧದಲ್ಲಿ(ಜೂನ್ ಮತ್ತು ಜುಲೈ) ಭಾರತವು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಪಡೆದಿದೆ. ಕೆಲವು ರಾಜ್ಯಗಳು, ವಿಶೇಷವಾಗಿ ಹಿಮಾಚಲ ಪ್ರದೇಶವು ಹಠಾತ್ ಪ್ರವಾಹವನ್ನು ಅನುಭವಿಸಿತು.

"ಒಟ್ಟಾರೆಯಾಗಿ, ನೈಋತ್ಯ ಮಾನ್ಸೂನ್ ಋತುವಿನ ದ್ವಿತೀಯಾರ್ಧದಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ (ದೀರ್ಘಾವಧಿಯ ಸರಾಸರಿ 422.8 ಮಿಮೀ) ಬೀಳುವ ಸಾಧ್ಯತೆಯಿದೆ" ಎಂದು ಮೊಹಾಪಾತ್ರ ತಿಳಿಸಿದ್ದಾರೆ.

"ಭೌಗೋಳಿಕವಾಗಿ, ಈಶಾನ್ಯ ಮತ್ತು ಪೂರ್ವ ಭಾರತದ ಅನೇಕ ಭಾಗಗಳು, ಮಧ್ಯ ಭಾರತದ ಪ್ರತ್ಯೇಕ ಪ್ರದೇಶಗಳು ಮತ್ತು ಪರ್ಯಾಯ ದ್ವೀಪ ಪ್ರದೇಶದ ನೈಋತ್ಯ ಪ್ರದೇಶಗಳನ್ನು ಹೊರತುಪಡಿಸಿ, ಹೆಚ್ಚಿನ ಪ್ರದೇಶಗಳಲ್ಲಿ ಸಾಮಾನ್ಯ ಮತ್ತು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ" ಎಂದು ಅವರು ಹೇಳಿದ್ದಾರೆ.

ಜೂನ್ 1 ರಿಂದ ಜುಲೈ 31 ರವರೆಗೆ ದೇಶದಲ್ಲಿ ಸಾಮಾನ್ಯ 445.8 ಮಿಮೀ ಮಳೆಗೆ ಬದಲಾಗಿ 474.3 ಮಿಮೀ ಮಳೆಯಾಗಿದೆ, ಇದು ಶೇಕಡಾ ಆರು ರಷ್ಟು ಹೆಚ್ಚಳವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ