ರಾಹುಲ್ ಗಾಂಧಿ 
ದೇಶ

ಭಾರತೀಯರಿಗೆ ಮಾಡಿದ 'ನಾಚಿಕೆಗೇಡಿನ ಅವಮಾನ': ಟ್ರಂಪ್ ಹೇಳಿಕೆ ಬೆಂಬಲಿಸಿದ್ದ Rahul Gandhi ವಿರುದ್ಧ BJP ಟೀಕೆ!

ಭಾರತದ್ದು ಸತ್ತ ಆರ್ಥಿಕತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದು ಇದನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಂಬಲಿಸಿದ್ದು ಇದಕ್ಕೆ ಬಿಜೆಪಿ ಕಟುವಾಗಿ ಟೀಕಿಸಿದೆ.

ಭಾರತದ್ದು ಸತ್ತ ಆರ್ಥಿಕತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದು ಇದನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಂಬಲಿಸಿದ್ದು ಇದಕ್ಕೆ ಬಿಜೆಪಿ ಕಟುವಾಗಿ ಟೀಕಿಸಿದೆ. ಇದು ದೇಶದ ಜನರ ಆಕಾಂಕ್ಷೆಗಳು, ಸಾಧನೆಗಳಿಗೆ 'ನಾಚಿಕೆಗೇಡಿನ' ಅವಮಾನ ಎಂದು ಕರೆದಿದೆ. ದೇಶವನ್ನು ದುರ್ಬಲಗೊಳಿಸುವ ವಿದೇಶಿ ಪ್ರಚಾರವನ್ನು ನೀವು ಏಕೆ ಪುನರಾವರ್ತಿಸುತ್ತೀರಿ ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೊರತುಪಡಿಸಿ ಎಲ್ಲರಿಗೂ ಭಾರತದ ಆರ್ಥಿಕತೆ 'ಸತ್ತಿದೆ' ಎಂದು ತಿಳಿದಿದೆ ಎಂದು ಗಾಂಧಿ ಹೇಳಿದ್ದರು. ಬಿಜೆಪಿ ನೇತೃತ್ವದ ಸರ್ಕಾರವು ದೇಶದ ಆರ್ಥಿಕ, ರಕ್ಷಣಾ ಮತ್ತು ವಿದೇಶಾಂಗ ನೀತಿಗಳನ್ನು ನಾಶಪಡಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಭಾರತವು ರಷ್ಯಾದೊಂದಿಗೆ ಏನು ಮಾಡುತ್ತದೆ ಎಂಬುದು ನನಗೆ ಮುಖ್ಯವಲ್ಲ. ರಷ್ಯಾ ಮತ್ತು ಭಾರತ ಏನು ಮಾಡಲಿವೆ ಎಂಬುದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿರುವ ಡೊನಾಲ್ಡ್‌ ಟ್ರಂಪ್‌, ಎರಡೂ ರಾಷ್ಟ್ರಗಳು ತಮ್ಮ ಸತ್ತ ಆರ್ಥಿಕತೆಗಳನ್ನು ಒಟ್ಟಿಗೆ ಹೂಳಲಿ ಎಂದು ವ್ಯಂಗ್ಯವಾಡಿದ ಬೆನ್ನಲ್ಲೇ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು.

ರಾಹುಲ್ ಗಾಂಧಿ ಹೇಳಿಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಭಾರತೀಯ ಜನತಾ ಪಕ್ಷದ (BJP) ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ, ರಾಹುಲ್ ಗಾಂಧಿ 'ಸತ್ತ ಆರ್ಥಿಕತೆ' ಎಂಬ ಅಪಹಾಸ್ಯವನ್ನು ಬೆಂಬಲಿಸುವ ಮೂಲಕ ಕೆಳಮಟ್ಟಕ್ಕೆ ಇಳಿದಿದ್ದಾರೆ. ಇದು ಭಾರತೀಯ ಜನರ ಆಕಾಂಕ್ಷೆಗಳು, ಸಾಧನೆಗಳು ಮತ್ತು ಯೋಗಕ್ಷೇಮಕ್ಕೆ ನಾಚಿಕೆಗೇಡಿನ ಅವಮಾನ. ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಇಲ್ಲಿ ನಿಜವಾಗಿಯೂ 'ಸತ್ತ' ಏಕೈಕ ವಿಷಯವೆಂದರೆ ಅದು ರಾಹುಲ್ ಗಾಂಧಿಯವರ ಸ್ವಂತ ರಾಜಕೀಯ ವಿಶ್ವಾಸಾರ್ಹತೆ ಮತ್ತು ಪರಂಪರೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿವಿಧ ವಲಯಗಳಲ್ಲಿನ ಬೆಳವಣಿಗೆಯನ್ನು ತೋರಿಸುವ ಡೇಟಾವನ್ನು ಉಲ್ಲೇಖಿಸಿದ ಬಿಜೆಪಿ ನಾಯಕರು, ಇದು ಸತ್ತ ಆರ್ಥಿಕತೆಯಲ್ಲ. ಇದು ಏರುತ್ತಿರುವ ಸ್ಥಿತಿಸ್ಥಾಪಕ ಭಾರತ ಎಂದು ಹೇಳಿದರು. ಜಾಗತಿಕ ಆರ್ಥಿಕ ಹಿಂಜರಿತದ ನಡುವೆಯೂ, ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ಮತ್ತು ವಿಶ್ವ ಬ್ಯಾಂಕ್ ದೇಶಕ್ಕಾಗಿ ತಮ್ಮ ಬೆಳವಣಿಗೆಯ ಮುನ್ಸೂಚನೆಗಳನ್ನು ಮೇಲ್ಮುಖವಾಗಿ ಪರಿಷ್ಕರಿಸುತ್ತಿರುವುದರಿಂದ, ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಉಳಿದಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

WPL 2026: 4 ಓವರ್, 1 ಮೇಡನ್.. ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್.. RCBಯ ಲೇಡಿ ಹೇಜಲ್ವುಡ್ Lauren Bell!

ಡಿ-ಕೋಡ್: ದ್ವೇಷ ಭಾಷಣ ಮಸೂದೆ ಎಂಬ ‘ಗರಗಸ’; DDT ಆಗುವತ್ತ ಕರ್ನಾಟಕ ಸರ್ಕಾರ

SCROLL FOR NEXT