ಡೊನಾಲ್ಡ್ ಟ್ರಂಪ್ online desk
ದೇಶ

ಭಾರತದಂತಹ ಸ್ವತಂತ್ರ ದೇಶಗಳಿಗೆ ಅಮೆರಿಕ ಡಿಕ್ಟೇಟ್ ಮಾಡುತ್ತಿದೆ: ಇರಾನ್

ಅಮೆರಿಕದ ಈ ಬಲವಂತದ ತಾರತಮ್ಯದ ಕ್ರಮಗಳು ಅಂತರರಾಷ್ಟ್ರೀಯ ಕಾನೂನು ಮತ್ತು ರಾಷ್ಟ್ರೀಯ ಸಾರ್ವಭೌಮತ್ವದ ತತ್ವಗಳನ್ನು ಉಲ್ಲಂಘಿಸುತ್ತವೆ.

ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇ.25 ರಷ್ಟು ಸುಂಕ ವಿಧಿಸುವ ಘೋಷಣೆಯನ್ನು ಟೀಕಿಸಿದ ಭಾರತದಲ್ಲಿನ ಇರಾನ್ ರಾಯಭಾರ ಕಚೇರಿ, ಇರಾನ್ ಮತ್ತು ಭಾರತದಂತಹ ಸ್ವತಂತ್ರ ರಾಷ್ಟ್ರಗಳಿಗೆ ವಾಷಿಂಗ್ಟನ್ ಡಿಕ್ಟೇಟ್ ಮಾಡುತ್ತಿದೆ ಎಂದು ಗುರುವಾರ ಹೇಳಿದೆ.

ಅಮೆರಿಕವು "ಆರ್ಥಿಕತೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುವುದನ್ನು ಮತ್ತು ಇರಾನ್ ಹಾಗೂ ಭಾರತದಂತಹ ಸ್ವತಂತ್ರ ರಾಷ್ಟ್ರಗಳ ಮೇಲೆ ತನ್ನ ಇಚ್ಛೆಯನ್ನು ಡಿಕ್ಟೇಟ್ ಮಾಡಲು ನಿರ್ಬಂಧಗಳನ್ನು ಅಸ್ತ್ರವಾಗಿ ಬಳಸುವುದನ್ನು" ಮುಂದುವರೆಸಿದೆ. ಇದು ದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿದೆ ಎಂದು ಇರಾನ್ ಹೇಳಿದೆ.

ಯುನೈಟೆಡ್ ಸ್ಟೇಟ್ಸ್ ಆರ್ಥಿಕತೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುವುದನ್ನು ಮುಂದುವರೆಸಿದೆ ಮತ್ತು ಇರಾನ್ ಮತ್ತು ಭಾರತದಂತಹ ಸ್ವತಂತ್ರ ರಾಷ್ಟ್ರಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅಡ್ಡಿಪಡಿಸಲು ನಿರ್ಬಂಧಗಳನ್ನು ಅಸ್ತ್ರವಾಗಿ ಬಳಸುತ್ತಿದೆ.

ಅಮೆರಿಕದ ಈ ಬಲವಂತದ ತಾರತಮ್ಯದ ಕ್ರಮಗಳು ಅಂತರರಾಷ್ಟ್ರೀಯ ಕಾನೂನು ಮತ್ತು ರಾಷ್ಟ್ರೀಯ ಸಾರ್ವಭೌಮತ್ವದ ತತ್ವಗಳನ್ನು ಉಲ್ಲಂಘಿಸುತ್ತವೆ. ಇದು ಆಧುನಿಕ ರೂಪದ ಆರ್ಥಿಕ ಸಾಮ್ರಾಜ್ಯಶಾಹಿಯನ್ನು ಪ್ರತಿನಿಧಿಸುತ್ತದೆ ಎಂದು ಇರಾನ್ ರಾಯಭಾರ ಕಚೇರಿ X ನಲ್ಲಿ ಪೋಸ್ಟ್ ಮಾಡಿದೆ.

ಇರಾನ್ ವಿರುದ್ಧ ಹೇರಲಾಗಿರುವ ನಿರ್ಬಂಧಕ್ಕೆ ಸಂಬಂಧಿಸಿದಂತೆ ತನ್ನ ಇತ್ತೀಚಿನ ಕ್ರಮದ ಭಾಗವಾಗಿ ಅಮೆರಿಕವು ಆ ದೇಶದಿಂದ ತೈಲ ಮತ್ತು ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಖರೀದಿಸುವ ಎಂಟು ಭಾರತೀಯ ಕಂಪನಿಗಳು ಹಾಗೂ ಮುಹಮ್ಮದ್ ಹುಸೇನ್ ಶಮ್ಖಾನಿ ಅವರ ನಿಯಂತ್ರಣದಲ್ಲಿರುವ ಹಡಗು ಸಾಮ್ರಾಜ್ಯದ ಭಾಗವಾಗಿ ಗುರುತಿಸಿಕೊಂಡಿರುವ ಐವರು ಭಾರತೀಯ ಪ್ರಜೆಗಳ ವಿರುದ್ಧ ನಿರ್ಬಂಧಗಳನ್ನು ಹೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT