ಆಪರೇಷನ್ ಸಿಂಧೂರ  
ದೇಶ

ಆಪರೇಷನ್ ಸಿಂಧೂರ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿದ ರಕ್ಷಣಾ ಸಚಿವಾಲಯ; ವಿಜೇತರಿಗೆ ನಗದು ಬಹುಮಾನ

ಜೂನ್ 1 ರಿಂದ 30ರವರೆಗೆ ಸ್ಪರ್ಧೆ ನಡೆಯಲಿದೆ. ಯಾವುದೇ ವ್ಯಕ್ತಿ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಬಂಧ ಬರೆಯಬಹುದಾಗಿದೆ ಎಂದು ಅದು ಹೇಳಿದೆ.

ನವದೆಹಲಿ: ಜೂನ್ 1 ರಿಂದ 30ರವರೆಗೆ 'ಆಪರೇಷನ್ ಸಿಂಧೂರ' ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ರಕ್ಷಣಾ ಸಚಿವಾಲಯ ಭಾನುವಾರ ಪ್ರಕಟಿಸಿದೆ.

X ನಲ್ಲಿನ ಪೋಸ್ಟ್‌ನಲ್ಲಿ ಸಚಿವಾಲಯವು, ಅಗ್ರ ಮೂರು ವಿಜೇತರಿಗೆ ತಲಾ 10,000 ರೂ. ನಗದು ಬಹುಮಾನ ನೀಡಲಾಗುವುದು ಮತ್ತು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ವಿಶೇಷ ಅವಕಾಶ ಪಡೆಯುತ್ತಾರೆ ಎಂದು ತಿಳಿಸಿದೆ.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾಗಿದ್ದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲಗಳನ್ನು ಗುರಿಯಾಗಿಸಿ ಮೇ 7ರಂದು ಆಪರೇಷನ್ ಸಿಂಧೂರವನ್ನು ಪ್ರಾರಂಭಿಸಲಾಯಿತು.

ಭಯೋತ್ಪಾದನೆಯ ವಿರುದ್ಧ ಭಾರತ 'ಹೊಸ ಕೆಂಪು ರೇಖೆ'ಯನ್ನು ಎಳೆದಿದೆ ಎಂದು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹೇಳಿದೆ. ಭಯೋತ್ಪಾದನೆಗೆ, ವಿಶೇಷವಾಗಿ ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರಲ್ಲಿ ಆಪರೇಷನ್ ಸಿಂಧೂರ ಇದೀಗ ಉದಾಹರಣೆಯಾಗಿದೆ ಎಂದು ಪ್ರತಿಪಾದಿಸಿದೆ.

'ರಕ್ಷಣಾ ಸಚಿವಾಲಯವು ತಮ್ಮ ಧ್ವನಿಯನ್ನು ಕೇಳುವಂತೆ ಮಾಡಲು ಯುವ ಮನಸ್ಸುಗಳನ್ನು ಆಹ್ವಾನಿಸುತ್ತದೆ! 'ಆಪರೇಷನ್ ಸಿಂಧೂರ - ಭಯೋತ್ಪಾದನೆಯ ವಿರುದ್ಧ ಭಾರತದ ನೀತಿಯನ್ನು ಮರು ವ್ಯಾಖ್ಯಾನಿಸುವುದು' ಎಂಬ ವಿಷಯ ಕುರಿತು ರಕ್ಷಣಾ ಸಚಿವಾಲಯ ಮತ್ತು ಭಾರತ ಸರ್ಕಾರದ ದ್ವಿಭಾಷಾ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ' ಎಂದು ಸಚಿವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜೂನ್ 1 ರಿಂದ 30ರವರೆಗೆ ಸ್ಪರ್ಧೆ ನಡೆಯಲಿದೆ. ಯಾವುದೇ ವ್ಯಕ್ತಿ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಬಂಧ ಬರೆಯಬಹುದಾಗಿದೆ ಎಂದು ಅದು ಹೇಳಿದೆ. ಸ್ಪರ್ಧೆಯ ಬಗ್ಗೆ ವಿವರಗಳು ಮತ್ತು ಆಪರೇಷನ್ ಸಿಂಧೂರದ ಲೋಗೋ ಹೊಂದಿರುವ ಪೋಸ್ಟರ್ ಅನ್ನು ಸಹ ಹಂಚಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT