ಅಮಿತ್ ಶಾ 
ದೇಶ

TMC ಸರ್ಕಾರದಿಂದಾಗಿ ಬಾಂಗ್ಲಾದೇಶಿಗರು ಸುಲಭವಾಗಿ ಗಡಿ ಒಳನುಸುಳುತ್ತಿದ್ದಾರೆ: ಮಮತಾ ವಿರುದ್ಧ ಅಮಿತ್ ಶಾ ವಾಗ್ದಾಳಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಮುಸ್ಲಿಂ ಮತ ಬ್ಯಾಂಕ್ ಅನ್ನು ಮೆಚ್ಚಿಸಲು ಆಪರೇಷನ್ ಸಿಂಧೂರ್ ಮತ್ತು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಮುಸ್ಲಿಂ ಮತ ಬ್ಯಾಂಕ್ ಅನ್ನು ಮೆಚ್ಚಿಸಲು ಆಪರೇಷನ್ ಸಿಂಧೂರ್ ಮತ್ತು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ. ಹೀಗೆ ಮಾಡುವ ಮೂಲಕ ಮಮತಾ ದೇಶದ ತಾಯಂದಿರು ಮತ್ತು ಸಹೋದರಿಯರನ್ನು ಅವಮಾನಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 2026ರ ವಿಧಾನಸಭಾ ಚುನಾವಣೆಯಲ್ಲಿ, ರಾಜ್ಯದ ತಾಯಂದಿರು ಮತ್ತು ಸಹೋದರಿಯರು ಆಪರೇಷನ್ ಸಿಂಧೂರ್ ಅನ್ನು ಟೀಕಿಸಿದ್ದಕ್ಕಾಗಿ ಸಿಎಂ ಮಮತಾ ಮತ್ತು ಟಿಎಂಸಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು. ತಮ್ಮ ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದ ಮೊದಲ ದಿನದಂದು, ವಿಜಯ್ ಸಂಕಲ್ಪ ಕಾರ್ಯಕ್ರಮದಲ್ಲಿ ಶಾ ಮಾತನಾಡಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಂಗಾಳದ ಪ್ರವಾಸಿಗರು ಸಾವನ್ನಪ್ಪಿದಾಗ, ಮಮತಾ ಬ್ಯಾನರ್ಜಿ ಮೌನವಾಗಿದ್ದರು. ಮುರ್ಷಿದಾಬಾದ್ ಗಲಭೆಗಳು ರಾಜ್ಯ ಪ್ರಾಯೋಜಿತವಾಗಿದ್ದವು. ಗೃಹ ಸಚಿವಾಲಯ ಇಲ್ಲಿ ಬಿಎಸ್‌ಎಫ್ ಅನ್ನು ನಿಯೋಜಿಸುವ ಬಗ್ಗೆ ಮಾತನಾಡಿತ್ತು. ಆದರೆ ಮಮತಾ ಸರ್ಕಾರ ಅಡ್ಡಿಪಡಿಸಿತು. ಆದ್ದರಿಂದ ಹಿಂಸಾಚಾರ ನಡೆಯಿತು ಎಂದರು.

ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಮುರ್ಷಿದಾಬಾದ್‌ನಲ್ಲಿ ನಡೆದ ಗಲಭೆಯಲ್ಲಿ ಟಿಎಂಸಿಯ ಅನೇಕ ಹಿರಿಯ ನಾಯಕರು ಭಾಗಿಯಾಗಿದ್ದಾರೆ ಎಂದು ಶಾ ಹೇಳಿದರು. ಗಲಭೆಯಲ್ಲಿ ಮೂವರು ಸಾವನ್ನಪ್ಪಿದ್ದು ಅನೇಕರು ಗಾಯಗೊಂಡಿದ್ದರು. ಮಮತಾ ಬ್ಯಾನರ್ಜಿ ತುಷ್ಟೀಕರಣದ ರಾಜಕೀಯಕ್ಕಾಗಿ ಕಾನೂನಿಗೆ ವಿರುದ್ಧವಾಗಿದ್ದಾರೆ. ಟಿಎಂಸಿ ಬಾಂಗ್ಲಾದೇಶದಿಂದ ಅಕ್ರಮ ಒಳನುಸುಳುವಿಕೆಯನ್ನು ಉತ್ತೇಜಿಸುತ್ತಿದೆ ಎಂದು ಶಾ ಹೇಳಿದರು.

ಮಮತಾ ಬ್ಯಾನರ್ಜಿ ಬಾಂಗ್ಲಾದೇಶಿಗಳಿಗೆ ಬಂಗಾಳದ ಗಡಿಗಳನ್ನು ತೆರೆದಿದ್ದಾರೆ ಎಂದು ಅವರು ಹೇಳಿದರು. ಪಶ್ಚಿಮ ಬಂಗಾಳ ಸರ್ಕಾರ ಬಿಎಸ್‌ಎಫ್‌ಗೆ ಅಗತ್ಯವಾದ ಭೂಮಿಯನ್ನು ನೀಡಿಲ್ಲ. ಟಿಎಂಸಿ ಬಿಎಸ್‌ಎಫ್‌ಗೆ ಭೂಮಿ ನೀಡಿದರೆ, ನಾವು ಒಳನುಸುಳುವಿಕೆಯನ್ನು ತಡೆಯುತ್ತೇವೆ. ಆದರೆ ಟಿಎಂಸಿ ಹಾಗೆ ಮಾಡುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್