ಸಾಂದರ್ಭಿಕ ಚಿತ್ರ  
ದೇಶ

ಒಂದೇ ಶಿಫ್ಟ್ ನಲ್ಲಿ ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ: NEET-PG ಮುಂದೂಡಿಕೆ

ಸುಪ್ರೀಂ ಕೋರ್ಟ್ ಪರೀಕ್ಷೆ ನಡೆಸುವಿಕೆಯಲ್ಲಿ ಸಂಪೂರ್ಣ ಪಾರದರ್ಶಕತೆಯ ಅಗತ್ಯವನ್ನು ಒತ್ತಿಹೇಳಿದೆ ಮತ್ತು ಪರೀಕ್ಷೆಯನ್ನು ನ್ಯಾಯಯುತವಾಗಿ ನಡೆಸಲು ಸುರಕ್ಷಿತ ಕೇಂದ್ರಗಳನ್ನು ಗುರುತಿಸಬೇಕು ಎಂದು ಆದೇಶ ನೀಡಿದೆ.

ನವದೆಹಲಿ: ಜೂನ್ 15 ರಂದು ನಡೆಯಬೇಕಿದ್ದ ನೀಟ್ ಪಿಜಿ 2025 ಪರೀಕ್ಷೆ ಮುಂದೂಡುವುದಾಗಿ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನಗಳ ಪರೀಕ್ಷಾ ಮಂಡಳಿ (NBEMS) ಪ್ರಕಟಿಸಿದೆ.

ಮೇ 30 ರಂದು ಸುಪ್ರೀಂ ಕೋರ್ಟ್ ಪರೀಕ್ಷೆಯನ್ನು ಒಂದೇ ಶಿಫ್ಟ್‌ನಲ್ಲಿ ನಡೆಸಬೇಕೆಂದು ಆದೇಶಿಸಿದ ನಂತರ ರಾಷ್ಟ್ರೀಯ ಅರ್ಹತಾ-ಮತ್ತು-ಪ್ರವೇಶ ಸ್ನಾತಕೋತ್ತರ (NEET-PG) ಪರೀಕ್ಷೆಯನ್ನು ಮುಂದೂಡುವ ಘೋಷಣೆ ಹೊರಬಿದ್ದಿದೆ.

ಸುಪ್ರೀಂ ಕೋರ್ಟ್ ಪರೀಕ್ಷೆ ನಡೆಸುವಿಕೆಯಲ್ಲಿ ಸಂಪೂರ್ಣ ಪಾರದರ್ಶಕತೆಯ ಅಗತ್ಯವನ್ನು ಒತ್ತಿಹೇಳಿದೆ ಮತ್ತು ಪರೀಕ್ಷೆಯನ್ನು ನ್ಯಾಯಯುತವಾಗಿ ನಡೆಸಲು ಸುರಕ್ಷಿತ ಕೇಂದ್ರಗಳನ್ನು ಗುರುತಿಸಬೇಕು ಎಂದು ಆದೇಶ ನೀಡಿದೆ.

ಈ ಮುಂದೂಡಿಕೆಯು ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಸ್ವಲ್ಪ ಸಮಾಧಾನ ತಂದಿದೆ, ಆದರೆ ಅನೇಕರು ಸೋಷಿಯಲ್ ಮೀಡಿಯಾ ಮೂಲಕ NBEMS ಹೊಸ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವಂತೆ ಒತ್ತಾಯಿಸಿದರು.

ಎನ್ ಬಿಇಎಂಎಸ್ ಒಂದು ನೊಟೀಸ್ ನಲ್ಲಿ ಭಾರತದ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿದೆ, ಅದರಲ್ಲಿ NEET-PG 2025 ಪರೀಕ್ಷೆಯನ್ನು ಒಂದೇ ಶಿಫ್ಟ್‌ನಲ್ಲಿ ನಡೆಸಲು ಅಗತ್ಯವಾದ ವ್ಯವಸ್ಥೆಗಳನ್ನು ಮಾಡಲು ನಿರ್ದೇಶಿಸಲಾಗಿದೆ. NEET-PG 2025 ನಡೆಸುವ ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

FAIMAನ ರಾಷ್ಟ್ರೀಯ ಮುಖ್ಯಸ್ಥ ಡಾ. ರೋಹನ್ ಕೃಷ್ಣನ್, ಪರೀಕ್ಷೆಗಳನ್ನು ಒಂದೇ ಪಾಳಿಯಲ್ಲಿ ನಡೆಸುವುದು ಮುಖ್ಯ ಎಂದು ಹೇಳಿದರು.

TNIE ಜೊತೆ ಮಾತನಾಡಿದ ಡಾ. ಕೃಷ್ಣನ್, “ಎನ್ ಬಿಇಎಂಎಸ್ ಒಂದೇ ಪಾಳಿಯ ಪರವಾಗಿ ತೀರ್ಪು ಪಡೆಯಲು ನಾವು ನ್ಯಾಯಾಲಯಕ್ಕೆ ಎಳೆದುತರುತ್ತಿರುವುದು ಸ್ವಾಗತಾರ್ಹ. ಪರೀಕ್ಷೆಯನ್ನು ಸಮಯಕ್ಕೆ ಸರಿಯಾಗಿ ನಡೆಸಲಾಗುತ್ತಿತ್ತು. ಈಗ, ವಿದ್ಯಾರ್ಥಿಗಳು ತೊಂದರೆ ಅನುಭವಿಸದಂತೆ, ಅವರ ಸಿದ್ಧತೆಗಳಿಗೆ ತೊಂದರೆಯಾಗದಂತೆ ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸಬೇಕು ಎಂದರು.

NEET PG ದೇಶಾದ್ಯಂತ MD, MS ಮತ್ತು PG ಡಿಪ್ಲೊಮಾ ಕೋರ್ಸ್ ಗಳಿಗೆ ಪ್ರವೇಶ ಪರೀಕ್ಷೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ, ಇದು ನಾನು ನಿಲ್ಲಿಸಿದ 10 ನೇ ಯುದ್ಧ- ಟ್ರಂಪ್

ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: ಅಮಿತ್ ಶಾ ಹೇಳಿದ್ದಿಷ್ಟು...

ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್, Video

ದೇವಸ್ಥಾನಗಳಲ್ಲಿರುವ ಟನ್ ಗಟ್ಟಲೆ ಚಿನ್ನವನ್ನು ಹೊರತೆಗೆದು ಸಾರ್ವಜನಿಕ ಉದ್ದೇಶಕ್ಕೆ ಬಳಸಬೇಕು- ಫಾದರ್ ಪೌಲ್ ಥೆಲಕ್ಕಟ್

ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಸೇವಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ!

SCROLL FOR NEXT