ದೇಶ

ಒಂಟಿಯಾಗಿದ್ದ ಯುವತಿಗೆ 18 ಬಾರಿ ಸ್ಕ್ರೂಡ್ರೈವರ್​ನಿಂದ ಚುಚ್ಚಿ ಕೊಂದ; ಆರೋಪಿ ರಫಿ ಬಂಧನಕ್ಕೆ ಕಾರಣವಾಯ್ತು ಒಂದು Missed Call!

ಮೊರಾದಾಬಾದ್ ಜಿಲ್ಲೆಯ ಮಿಲಾಕ್ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಸ್ಕ್ರೂಡ್ರೈವರ್​ನಿಂದ 18 ಬಾರಿ ಇರಿದು ಕೊಂದಿರುವ ಭೀಕರ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊರಾದಾಬಾದ್: ಮೊರಾದಾಬಾದ್ ಜಿಲ್ಲೆಯ ಮಿಲಾಕ್ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಸ್ಕ್ರೂಡ್ರೈವರ್​ನಿಂದ 18 ಬಾರಿ ಇರಿದು ಕೊಂದಿರುವ ಭೀಕರ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

20 ವರ್ಷದ ಯುವತಿ ಹೊಲಕ್ಕೆ ಹೋಗಿದ್ದು ಆದರೆ ಹಿಂತಿರುಗಲಿಲ್ಲ. ಆದರೆ ಭಾನುವಾರ, ಆಕೆಯ ಶವ ಹೊಲದಲ್ಲಿ ಚಾಕುವಿನಿಂದ ಇರಿದ ಗುರುತುಗಳೊಂದಿಗೆ ಪತ್ತೆಯಾಗಿತ್ತು. ಆರಿಫ್ ತನ್ನ ಮಗಳನ್ನು ಹಿಂಬಾಲಿಸಿ ಮಾತನಾಡುವಂತೆ ಒತ್ತಾಯಿಸುತ್ತಿದ್ದ ಎಂದು ಯುವತಿಯ ತಾಯಿ, ಆರೋಪಿ ಮೊಹಮ್ಮದ್ ರಫಿ ಅಲಿಯಾಸ್ ಆರಿಫ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಗಳು ಸಯಿರಾಗೆ ಆರಿಫ್ ಜೊತೆ ಮಾತನಾಡಲು ಇಷ್ಟವಿರಲಿಲ್ಲ ಆದರೆ ಅವನು ಬಹಳ ಸಮಯದಿಂದ ಅವಳನ್ನು ಹಿಂಬಾಲಿಸುತ್ತಿದ್ದನು ಎಂದು ಮೃತ ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ತೀವ್ರ ವಿಚಾರಣೆ ನಡೆಸಿದ್ದಾರೆ. ಆರೋಪಿಯು ತನಗೆ ಯುವತಿಯ ಪರಿಚಯವಿದ್ದು ಇಬ್ಬರೂ ಫೋನ್‌ನಲ್ಲಿ ಮಾತನಾಡುತ್ತಿದ್ದೆವು ಎಂದು ಹೇಳಿಕೊಂಡಿದ್ದಾನೆ. ಮೇ 31ರಂದು ಯುವತಿ ಆರೋಪಿಗೆ ಕರೆ ಮಾಡಿ ತನ್ನನ್ನು ಭೇಟಿಯಾಗಲು ಕೇಳಿಕೊಂಡಿದ್ದಳು. ಸಂಜೆ ಆರೋಪಿ ಯುವತಿಯನ್ನು ಭೇಟಿಯಾಗಲು ಬಂದಾಗ, ಆಕೆ ಮೆಕ್ಕೆಜೋಳದ ಹೊಲದಲ್ಲಿ ಹುಲ್ಲು ಕತ್ತರಿಸುತ್ತಿದ್ದಳು.

ರಫಿಯನ್ನು ನೋಡಿದ ಸಯಿರಾ ಆತನ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ. ಇದರಿಂದ ಕೋಪಗೊಂಡ ಮೊಹಮ್ಮದ್ ರಫಿ ಯುವತಿಯನ್ನು ಮೊದಲಿಗೆ ದುಪ್ಪಟ್ಟದಿಂದ ಕತ್ತು ಹಿಸುಕಿದ್ದಾನೆ. ಇದರಿಂದಾಗಿ ಆಕೆ ಮೂರ್ಛೆ ಹೋಗಿದ್ದಾಳೆ. ನಂತರ ಆಕೆಯ ಮೇಲೆ ಸ್ಕ್ರೂಡ್ರೈವರ್‌ನಿಂದ 18 ಬಾರಿ ಇರಿದು ಆಕೆಯನ್ನು ಅಲ್ಲಿಯೇ ಬಿಟ್ಟು ಓಡಿಹೋಗಿದ್ದಾನೆ. ಆರೋಪಿಯು ಹುಡುಗಿಯ ಖಾಸಗಿ ಭಾಗಗಳು ಸೇರಿದಂತೆ ಇಡೀ ದೇಹದ ಮೇಲೆ ಎರಡು ಡಜನ್‌ಗೂ ಹೆಚ್ಚು ಬಾರಿ ಸ್ಕ್ರೂಡ್ರೈವರ್‌ನಿಂದ ಹಲ್ಲೆ ಮಾಡಿದ್ದಾನೆ. ಪೊಲೀಸರು ಆರೋಪಿಯಿಂದ ಸ್ಕ್ರೂಡ್ರೈವರ್ ಮತ್ತು ಯುವತಿಯ ಫೋನ್ ಅನ್ನು ವಶಪಡಿಸಿಕೊಂಡಿದ್ದು ಅವನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ

2028ಕ್ಕೆ 75-80 ಕ್ಷೇತ್ರಗಳಲ್ಲಿ ಜೆಡಿಎಸ್ ಗೆದ್ದು, ಅಧಿಕಾರಕ್ಕೆ- ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸ! ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬೆಂಗಳೂರು: ಪೊಲೀಸರ ಭದ್ರತೆ ನಡುವೆ ನಿರಾಶ್ರಿತ ಕೇಂದ್ರದಿಂದ ನಾಲ್ವರು ವಿದೇಶಿ ಅಕ್ರಮ ಮಹಿಳಾ ವಲಸಿಗರು ಪರಾರಿ!

ಬೆಂಗಳೂರು: ಮಾಜಿ ಉಪ ಮೇಯರ್ ಸೊಸೆಯ ಕಾರನ್ನು ತಡೆದು ಕಿರುಕುಳ, ಆಕೆಯ ಪತಿ ಮೇಲೂ ಹಲ್ಲೆ!

ಬೇಲ್ ಫಸ್ಟ್ ಲುಕ್ ರಿಲೀಸ್ : ಸಾಲ್ಟ್ ಅಂಡ್‌ ಪೆಪ್ಪರ್ ಲುಕ್ ಶಿವಣ್ಣ, ವರಮಹಾಲಕ್ಷ್ಮಿ ಹಬ್ಬಕ್ಕೆ ಸಿನಿಮಾ ರಿಲೀಸ್ ! Video

SCROLL FOR NEXT