ದೇಶ

ಒಂಟಿಯಾಗಿದ್ದ ಯುವತಿಗೆ 18 ಬಾರಿ ಸ್ಕ್ರೂಡ್ರೈವರ್​ನಿಂದ ಚುಚ್ಚಿ ಕೊಂದ; ಆರೋಪಿ ರಫಿ ಬಂಧನಕ್ಕೆ ಕಾರಣವಾಯ್ತು ಒಂದು Missed Call!

ಮೊರಾದಾಬಾದ್ ಜಿಲ್ಲೆಯ ಮಿಲಾಕ್ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಸ್ಕ್ರೂಡ್ರೈವರ್​ನಿಂದ 18 ಬಾರಿ ಇರಿದು ಕೊಂದಿರುವ ಭೀಕರ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊರಾದಾಬಾದ್: ಮೊರಾದಾಬಾದ್ ಜಿಲ್ಲೆಯ ಮಿಲಾಕ್ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಸ್ಕ್ರೂಡ್ರೈವರ್​ನಿಂದ 18 ಬಾರಿ ಇರಿದು ಕೊಂದಿರುವ ಭೀಕರ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

20 ವರ್ಷದ ಯುವತಿ ಹೊಲಕ್ಕೆ ಹೋಗಿದ್ದು ಆದರೆ ಹಿಂತಿರುಗಲಿಲ್ಲ. ಆದರೆ ಭಾನುವಾರ, ಆಕೆಯ ಶವ ಹೊಲದಲ್ಲಿ ಚಾಕುವಿನಿಂದ ಇರಿದ ಗುರುತುಗಳೊಂದಿಗೆ ಪತ್ತೆಯಾಗಿತ್ತು. ಆರಿಫ್ ತನ್ನ ಮಗಳನ್ನು ಹಿಂಬಾಲಿಸಿ ಮಾತನಾಡುವಂತೆ ಒತ್ತಾಯಿಸುತ್ತಿದ್ದ ಎಂದು ಯುವತಿಯ ತಾಯಿ, ಆರೋಪಿ ಮೊಹಮ್ಮದ್ ರಫಿ ಅಲಿಯಾಸ್ ಆರಿಫ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಗಳು ಸಯಿರಾಗೆ ಆರಿಫ್ ಜೊತೆ ಮಾತನಾಡಲು ಇಷ್ಟವಿರಲಿಲ್ಲ ಆದರೆ ಅವನು ಬಹಳ ಸಮಯದಿಂದ ಅವಳನ್ನು ಹಿಂಬಾಲಿಸುತ್ತಿದ್ದನು ಎಂದು ಮೃತ ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ತೀವ್ರ ವಿಚಾರಣೆ ನಡೆಸಿದ್ದಾರೆ. ಆರೋಪಿಯು ತನಗೆ ಯುವತಿಯ ಪರಿಚಯವಿದ್ದು ಇಬ್ಬರೂ ಫೋನ್‌ನಲ್ಲಿ ಮಾತನಾಡುತ್ತಿದ್ದೆವು ಎಂದು ಹೇಳಿಕೊಂಡಿದ್ದಾನೆ. ಮೇ 31ರಂದು ಯುವತಿ ಆರೋಪಿಗೆ ಕರೆ ಮಾಡಿ ತನ್ನನ್ನು ಭೇಟಿಯಾಗಲು ಕೇಳಿಕೊಂಡಿದ್ದಳು. ಸಂಜೆ ಆರೋಪಿ ಯುವತಿಯನ್ನು ಭೇಟಿಯಾಗಲು ಬಂದಾಗ, ಆಕೆ ಮೆಕ್ಕೆಜೋಳದ ಹೊಲದಲ್ಲಿ ಹುಲ್ಲು ಕತ್ತರಿಸುತ್ತಿದ್ದಳು.

ರಫಿಯನ್ನು ನೋಡಿದ ಸಯಿರಾ ಆತನ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ. ಇದರಿಂದ ಕೋಪಗೊಂಡ ಮೊಹಮ್ಮದ್ ರಫಿ ಯುವತಿಯನ್ನು ಮೊದಲಿಗೆ ದುಪ್ಪಟ್ಟದಿಂದ ಕತ್ತು ಹಿಸುಕಿದ್ದಾನೆ. ಇದರಿಂದಾಗಿ ಆಕೆ ಮೂರ್ಛೆ ಹೋಗಿದ್ದಾಳೆ. ನಂತರ ಆಕೆಯ ಮೇಲೆ ಸ್ಕ್ರೂಡ್ರೈವರ್‌ನಿಂದ 18 ಬಾರಿ ಇರಿದು ಆಕೆಯನ್ನು ಅಲ್ಲಿಯೇ ಬಿಟ್ಟು ಓಡಿಹೋಗಿದ್ದಾನೆ. ಆರೋಪಿಯು ಹುಡುಗಿಯ ಖಾಸಗಿ ಭಾಗಗಳು ಸೇರಿದಂತೆ ಇಡೀ ದೇಹದ ಮೇಲೆ ಎರಡು ಡಜನ್‌ಗೂ ಹೆಚ್ಚು ಬಾರಿ ಸ್ಕ್ರೂಡ್ರೈವರ್‌ನಿಂದ ಹಲ್ಲೆ ಮಾಡಿದ್ದಾನೆ. ಪೊಲೀಸರು ಆರೋಪಿಯಿಂದ ಸ್ಕ್ರೂಡ್ರೈವರ್ ಮತ್ತು ಯುವತಿಯ ಫೋನ್ ಅನ್ನು ವಶಪಡಿಸಿಕೊಂಡಿದ್ದು ಅವನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT