ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಹಿರಿಯ ನಕ್ಸಲ್ ನಾಯಕ ಬಲಿ

ಗುಂಡಿನ ಚಕಮಕಿಯಲ್ಲಿ ಮಾವೋವಾದಿಗಳ ಕೇಂದ್ರ ಸಮಿತಿ ಸದಸ್ಯ ಗೌತಮ್ ಅಲಿಯಾಸ್ ಸುಧಾಕರ್ ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ತಲೆಗೆ 40 ಲಕ್ಷ ರೂ. ಬಹುಮಾನ ಹೊಂದಿದ್ದ ಹಿರಿಯ ಮಾವೋವಾದಿ ನಾಯಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಬಸ್ತಾರ್ ಪ್ರದೇಶದಲ್ಲಿ ಸಿಪಿಐ(ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು ಅವರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ ಕೆಲವು ದಿನಗಳ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಮಾವೋವಾದಿಗಳ ಕೇಂದ್ರ ಸಮಿತಿ ಸದಸ್ಯ ಗೌತಮ್ ಅಲಿಯಾಸ್ ಸುಧಾಕರ್ ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದು ನಕ್ಸಲರಿಗೆ ದೊಡ್ಡ ಹೊಡೆತ ನೀಡಿದೆ.

ಆದಾಗ್ಯೂ, ಸುಧಾಕರ್ ಅವರ ಸಾವನ್ನು ಇನ್ನೂ ಅಧಿಕೃತವಾಗಿ ಘೋಷಿಸಲಾಗಿಲ್ಲ.

ಹಿರಿಯ ನಕ್ಸಲ್ ನಾಯಕನ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ಕಾರ್ಯಾಚರಣೆಗೆ ಹೊರಟಿದ್ದಾಗ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಕಾಡಿನಲ್ಲಿ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ ರೇಂಜ್‌ನಲ್ಲಿ ನಿಯೋಜಿಸಲಾದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ವಿಶೇಷ ಕಾರ್ಯಪಡೆ, ಜಿಲ್ಲಾ ಮೀಸಲು ಪಡೆ, ಛತ್ತೀಸ್‌ಗಢ ಪೊಲೀಸರ ಎರಡೂ ಘಟಕಗಳು ಮತ್ತು ಕೋಬ್ರಾ ಪಡೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಅವರು ಹೇಳಿದ್ದಾರೆ.

ಮಾವೋವಾದಿ ನಾಯಕ ಸುಧಾಕರ್, ತೆಲಂಗಾಣ ರಾಜ್ಯ ಸಮಿತಿ ಸದಸ್ಯ ಬಂಡಿ ಪ್ರಕಾಶ್, ದಂಡಕಾರಣ್ಯ ವಿಶೇಷ ವಲಯ ಸಮಿತಿ(ಡಿಕೆಎಸ್‌ಜೆಡ್‌ಸಿ) ಸದಸ್ಯ ಪಪ್ಪಾ ರಾವ್ ಮತ್ತು ಇತರ ಕೆಲವು ನಕ್ಸಲರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ದಾಳಿ ನಡೆಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026 Final: RCB vs GT, ಮರುಕಳಿಸುತ್ತಾ ಪಿಚ್ ನಂ 6 ಕರಾಳತೆ, ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ

ನೊಂದವರ ಗಾಯದ ಮೇಲೆ ಉಪ್ಪು ಸುರಿದಂತೆ: ಜಾಮೀನು ಸಿಕ್ಕಿದ್ದಕ್ಕೆ ಕೊಲೆ ಆರೋಪಿ ಕುಟುಂಬಸ್ಥರ ಪಾರ್ಟಿ, ನಟ ವಿಶಾಲ್ ಆಕ್ರೋಶ, Video!

IPL 2026 Final: RCB vs GT ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ, ಮ್ಯಾಚ್ ರದ್ದಾದರೆ ಯಾರು ಚಾಂಪಿಯನ್?

ಕೇಸರಿ ಉಡುಪಿನಲ್ಲಿರುವ ತಿರುವಳ್ಳುವರ್ ಫೋಟೋಗೆ ಗೌರವ ಸಲ್ಲಿಸಿದ ರಾಜ್ಯಪಾಲರ ವಿರುದ್ಧ TVK, DMK ಕಿಡಿ

ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ: ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ, 5 ಮಂದಿ ಸಾವು

SCROLL FOR NEXT