ಏಕನಾಥ್ ಶಿಂಧೆ  
ದೇಶ

ಶಿಫ್ಟ್​​ ಮುಗಿಯಿತೆಂದು ಬಿಟ್ಟು ಹೋದ ಪೈಲಟ್: ವಿಮಾನ ನಿಲ್ಗಾಣದಲ್ಲೇ ಗಂಟೆಗಟ್ಟಲೇ ಕಾದು ಕುಳಿತ DCM ಶಿಂಧೆ

ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವೈಯಕ್ತಿಕ ವಿಮಾನದ ಪೈಲಟ್ ತಮ್ಮ ಕರ್ತವ್ಯದ ಸಮಯ ಮುಗಿದಿದೆ ಎಂದು ಮುಖ್ಯಮಂತ್ರಿಗಳನ್ನು ಅರ್ಧದಲ್ಲೇ ಬಿಟ್ಟು ಹೋಗಿದ್ದಾರೆ.

ಮುಂಬಯಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶುಕ್ರವಾರ ಜಲಗಾಂವ್‌ನಿಂದ ಮುಂಬೈಗೆ ವಿಮಾನದಲ್ಲಿ ಪ್ರಯಾಣ ಮಾಡಬೇಕಿತ್ತು. ಆದರೆ ಈ ಹಾರಾಟ ಸುಮಾರು ಒಂದು ಗಂಟೆ ವಿಳಂಬವಾಯಿತು.

ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವೈಯಕ್ತಿಕ ವಿಮಾನದ ಪೈಲಟ್ ತಮ್ಮ ಕರ್ತವ್ಯದ ಸಮಯ ಮುಗಿದಿದೆ ಎಂದು ಮುಖ್ಯಮಂತ್ರಿಗಳನ್ನು ಅರ್ಧದಲ್ಲೇ ಬಿಟ್ಟು ಹೋಗಿದ್ದಾರೆ. ಮೂಲಗಳ ಪ್ರಕಾರ ಏಕನಾಥ್ ಶಿಂಧೆ ಜಲಗಾಂವ್‌ನಿಂದ ಹೊರಡಲು ಸಿದ್ಧತೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಮಧ್ಯಾಹ್ನ 3.45 ಕ್ಕೆ ಜಲಗಾಂವ್‌ಗೆ ಆಗಮಿಸಬೇಕಿತ್ತು ಆದರೆ ತಾಂತ್ರಿಕ ಕಾರಣಗಳಿಂದ ಸುಮಾರು ಎರಡೂವರೆ ಗಂಟೆಗಳ ಕಾಲ ವಿಳಂಬವಾಯಿತು. ನಂತರ ವಿಮಾನ ಪ್ರಯಾಣವನ್ನು ಮೊಟಕುಗೊಳಿಸಿ ರಸ್ತೆ ಮೂಲಕ ಮುಕ್ತೈನಗರಕ್ಕೆ ಪ್ರಯಾಣ ಬೆಳೆಸಿದರು.

ಪಾಲ್ಖಿ ಯಾತ್ರೆಯಲ್ಲಿ ಭಾಗವಹಿಸಿ ಸಂತ ಮುಕ್ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿಂದ ಶಿಂಧೆ ಮತ್ತು ಅವರ ತಂಡವು ರಾತ್ರಿ 9.15 ಕ್ಕೆ ಜಲಗಾಂವ್ ವಿಮಾನ ನಿಲ್ದಾಣಕ್ಕೆ ಮರಳಿತು. ಆದರೆ ಪೈಲಟ್ ತನ್ನ ಕೆಲಸದ ಸಮಯ ಮುಗಿದಿದೆ ಎಂದು ವಿಮಾನಯಾಣಕ್ಕೆ ನಿರಾಕರಿಸಿದ್ದಾರೆ.

ತನ್ನ ಕರ್ತವ್ಯದ ಸಮಯ ಮುಗಿದಿರುವುದರಿಂದ, ಹಾರಾಟ ನಡೆಸಲು ಹೊಸ ಅನುಮತಿ ಪಡೆಯಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಮೂಲಗಳು ಹೇಳುವಂತೆ, ಪೈಲಟ್ ಟೇಕಾಫ್ ಮಾಡಲು ನಿರಾಕರಿಸಿದ್ದಕ್ಕೆ ಅನಾರೋಗ್ಯದ ಕಾರಣವೂ ಇದೆ ಎಂದು ಹೇಳಿದ್ದಾರೆ.

ಆದರೆ ಈ ವೇಳೆ ಉಪಮುಖ್ಯಮಂತ್ರಿ ಜತೆಗಿದ್ದ ಮಹಾಜನ್, ಪಾಟೀಲ್ ಮತ್ತು ಜೊತೆಗಿದ್ದ ಇತರ ಅಧಿಕಾರಿಗಳು ಪೈಲಟ್‌ನ ಮನವೊಲಿಸಲು ಪ್ರಯತ್ನಿಸಿದರು. 45 ನಿಮಿಷಗಳ ಚರ್ಚೆಯ ನಂತರ ಅವರನ್ನು ಹಾರಲು ಮನವೊಲಿಸುವಲ್ಲಿ ಯಶಸ್ವಿಯಾದರು ಎಂದು ಹೇಳಲಾಗಿದೆ.

ನಿರ್ಗಮನಕ್ಕೆ ಅನುಮತಿ ನೀಡುವ ಬಗ್ಗೆ ಮಹಾಜನ್ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ ನಂತರ ವಿಮಾನ ಮುಂಬೈಗೆ ಹೊರಟಿತು. ಪೈಲಟ್‌ಗೆ ಆರೋಗ್ಯಕ್ಕೆ ಸಂಬಂಧಿಸಿದ ಕಾಳಜಿ ಮತ್ತು ಸಮಯದ ಸಮಸ್ಯೆ ಇತ್ತು. ಕೆಲವು ತಾಂತ್ರಿಕ ತೊಂದರೆಗಳೂ ಇದ್ದವು. ನಾವು ವಿಮಾನಯಾನ ಕಂಪನಿಯೊಂದಿಗೆ ಮಾತನಾಡಿದೆವು, ಮತ್ತು ಅವರು ಪೈಲಟ್‌ಗೆ ತಮ್ಮದೇ ಆದ ರೀತಿಯಲ್ಲಿ ಪರಿಸ್ಥಿತಿಯನ್ನು ವಿವರಿಸಿದರು. ಇದು ಒಂದು ಸಣ್ಣ ಸಮಸ್ಯೆಯಾಗಿತ್ತು ಎಂದು ಮಹಾಜನ್ ಹೇಳಿದ್ದಾರೆ.

ಶಿಂದೆ ತೀವು ವಾಪಸಾಗುವ ವೇಳೆ ವಿಮಾನದಲ್ಲಿ, ಶಿಂಧೆ ಮತ್ತು ಅವರ ತಂಡವು ಮುಂಬೈನಲ್ಲಿ ತುರ್ತಾಗಿ ಮೂತ್ರಪಿಂಡ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾದ ಮಹಿಳೆಯೊಬ್ಬರ ರಕ್ಷಣೆಗೆ ಬಂದರು. ಶೀತಲ್ ಪಾಟೀಲ್ ಎಂಬ ಮಹಿಳೆ ತನ್ನ ಪತಿಯೊಂದಿಗೆ ಮುಂಬೈಗೆ ಪ್ರಯಾಣಿಸಬೇಕಿತ್ತು, ಆದರೆ ದಂಪತಿ ತಮ್ಮ ಫ್ಲೈಟ್ ಮಿಸ್ ಮಾಡಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ಮಹಿಳೆಯ ಸ್ಥಿತಿಯ ಬಗ್ಗೆ ತಿಳಿದ ಶಿಂಧೆ ಅವರು ತಮ್ಮ ಹೆಲಿಕಾಪ್ಟರ್ ನಲ್ಲಿ ದಂಪತಿಯನ್ನು ಮುಂಬೈಗೆ ಕರೆದೊಯ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಛತ್ತೀಸ್‌ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

SCROLL FOR NEXT