ಎಸ್ ಜೈಶಂಕರ್ 
ದೇಶ

ಭಯೋತ್ಪಾದನೆ ಬಗ್ಗೆ ಭಾರತ 'ಶೂನ್ಯ ಸಹಿಷ್ಣುತೆ' ಅನುಸರಿಸುತ್ತಿದೆ; ಇತರ ದೇಶಗಳು ಇದನ್ನು ಅರ್ಥಮಾಡಿಕೊಳ್ಳಬೇಕು: ಎಸ್ ಜೈಶಂಕರ್

ಇತ್ತೀಚೆಗೆ ಎರಡು ರಾಷ್ಟ್ರಗಳ ನಡುವಿನ ನಾಲ್ಕು ದಿನಗಳ ಘರ್ಷಣೆಗಳಿಗೆ ಕೆಲವು ದೇಶಗಳು ಭಾರತ ಮತ್ತು ಪಾಕಿಸ್ತಾನವನ್ನು ಸಮಾನವಾಗಿ ಪರಿಗಣಿಸಿರುವ ಕುರಿತು ಎದ್ದಿರುವ ಅಸಮಾಧಾನದ ನಡುವೆ ಈ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಭಾರತ ಭಯೋತ್ಪಾದನೆ ವಿರುದ್ಧ 'ಶೂನ್ಯ ಸಹಿಷ್ಣುತೆ' ನೀತಿಯನ್ನು ಪಾಲಿಸುತ್ತಿದೆ ಮತ್ತು ದುಷ್ಟ ಕೃತ್ಯ ಎಸಗುವವರನ್ನು ಎಂದಿಗೂ ಸಹಿಸುವುದಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಶನಿವಾರ ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರೊಂದಿಗಿನ ಮಾತುಕತೆಯ ಸಂದರ್ಭದಲ್ಲಿ ಹೇಳಿದರು.

ಇತ್ತೀಚೆಗೆ ಎರಡು ರಾಷ್ಟ್ರಗಳ ನಡುವಿನ ನಾಲ್ಕು ದಿನಗಳ ಘರ್ಷಣೆಗಳಿಗೆ ಕೆಲವು ದೇಶಗಳು ಭಾರತ ಮತ್ತು ಪಾಕಿಸ್ತಾನವನ್ನು ಸಮಾನವಾಗಿ ಪರಿಗಣಿಸಿರುವ ಕುರಿತು ಎದ್ದಿರುವ ಅಸಮಾಧಾನದ ನಡುವೆ ಈ ಹೇಳಿಕೆ ನೀಡಿದ್ದಾರೆ.

ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ವಿವಿಧ ಅಂಶಗಳನ್ನು ಪರಿಶೀಲಿಸಲು ಲ್ಯಾಮಿ ಇಂದು ಬೆಳಿಗ್ಗೆ ನವದೆಹಲಿಗೆ ಬಂದರು.

ತಮ್ಮ ಆರಂಭಿಕ ಭಾಷಣದಲ್ಲಿ ಜೈಶಂಕರ್, 'ಅನಾಗರಿಕ' ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಕ್ಕಾಗಿ ಮತ್ತು ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಭಾರತಕ್ಕೆ ನೀಡಿದ ಬೆಂಬಲಕ್ಕಾಗಿ ಯುಕೆಗೆ ಧನ್ಯವಾದಗಳನ್ನು ಅರ್ಪಿಸಿದರು.

'ನಾವು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸುತ್ತೇವೆ ಮತ್ತು ಇತರ ದೇಶಗಳು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಿರೀಕ್ಷಿಸುತ್ತೇವೆ. ದುಷ್ಟ ಕೃತ್ಯ ಎಸಗುವವರನ್ನು ಅವರ ಕೃತ್ಯಗಳಿಂದ ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರಿಗೆ ಸಮಾನವಾಗಿ ನೋಡುವುದನ್ನು ನಾವು ಎಂದಿಗೂ ಸಹಿಸುವುದಿಲ್ಲ' ಎಂದು ಅವರು ಹೇಳಿದರು.

ಇತ್ತೀಚೆಗೆ ಅಂತಿಮಗೊಳಿಸಲಾದ ಭಾರತ-ಯುಕೆ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಮತ್ತು ಡಬಲ್ ಕಾಂಟ್ರಿಬ್ಯೂಷನ್ ಸಮಾವೇಶವನ್ನು ಜೈಶಂಕರ್ 'ನಿಜವಾಗಿಯೂ ಒಂದು ಮೈಲಿಗಲ್ಲು' ಎಂದು ಬಣ್ಣಿಸಿದರು.

ಕಳೆದ ತಿಂಗಳು ತಮ್ಮ ಮಿಲಿಟರಿ ಸಂಘರ್ಷದ ಸಮಯದಲ್ಲಿ ತಮ್ಮ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡರೊಂದಿಗೂ ಸಂಪರ್ಕದಲ್ಲಿದ್ದ ದೇಶಗಳಲ್ಲಿ ಯುಕೆ ಕೂಡ ಸೇರಿತ್ತು.

ಮೇ 16 ರಿಂದ ಲ್ಯಾಮಿ ಇಸ್ಲಾಮಾಬಾದ್‌ಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಕ್ರಮಗಳನ್ನು ನಿಲ್ಲಿಸುವ ಒಪ್ಪಂದವನ್ನು ಸ್ವಾಗತಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT