ಸಾಂದರ್ಭಿಕ ಚಿತ್ರ 
ದೇಶ

Encounter: ಛತ್ತೀಸ್‌ಗಢದ ಬಿಜಾಪುರದಲ್ಲಿ ಮತ್ತೆ ಎನ್‌ಕೌಂಟರ್‌, ಇಬ್ಬರು ನಕ್ಸಲೀಯರ ಹತ್ಯೆ

ಶುಕ್ರವಾರ ರಾತ್ರಿಯಿಂದ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ.

ಕೊತಗುಡೆಂ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರನ್ನು ಹೊಡೆದುರುಳಿಸಿದ್ದಾರೆ.

ಶುಕ್ರವಾರ ರಾತ್ರಿಯಿಂದ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ. ಇದರೊಂದಿಗೆ ಕಳೆದ ಮೂರು ದಿನಗಳಲ್ಲಿ ನಾಲ್ವರು ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ.

ರಾಷ್ಟ್ರೀಯ ಉದ್ಯಾನದಲ್ಲಿ ಹಿರಿಯ ನಕ್ಸಲ್ ನಾಯಕರೊಬ್ಬರು ಅಡಗಿರುವ ಮಾಹಿತಿ ಪಡೆದುಕೊಂಡ ಬಳಿಕ ಜಿಲ್ಲಾ ಮೀಸಲು ಪಡೆ (DRG)ಕೋಬ್ರಾ (ಕಮಾಂಡೋ ಬೆಟಾಲಿಯನ್ )ಮತ್ತು ವಿಶೇಷ ಕಾರ್ಯಪಡೆ (STF)ಒಳಗೊಂಡ ಜಂಟಿ ತಂಡ ಗುರುವಾರದಿಂದ ಶೋಧ ಕಾರ್ಯಾಚರಣೆ ನಡೆಸುತಿತ್ತು.

ಕಳೆದೆರಡು ದಿನಗಳಲ್ಲಿ ಭದ್ರತಾ ಪಡೆಗಳು ತೆಲಂಗಾಣ ರಾಜ್ಯ ಸಮಿತಿ ಸದಸ್ಯ ಮೈಲಾರಪು ಅಡೆಲು ಅಲಿಯಾಸ್ ಭಾಸ್ಕರ್ ಮತ್ತು ಸಿಪಿಐ (ಮಾವೋವಾದಿ) ಕೇಂದ್ರ ಸಮಿತಿ ಸದಸ್ಯ ಮತ್ತು ಕ್ರಾಂತಿಕಾರಿ ರಾಜಕೀಯ ಶಾಲೆ (RePoS) ಉಸ್ತುವಾರಿ ತೆಂಟು ಲಕ್ಷ್ಮೀನರಸಿಂಹ ಚಲಂ ಅಲಿಯಾಸ್ ಗೌತಮ್ ಮತ್ತು ಎಂಬ ಇಬ್ಬರು ಪ್ರಮುಖ ನಕ್ಸಲ್ ನಾಯಕರನ್ನು ಹೊಡೆದುರುಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026 Final: RCB vs GT, ಮರುಕಳಿಸುತ್ತಾ ಪಿಚ್ ನಂ 6 ಕರಾಳತೆ, ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ

IPL 2026 Final: RCB vs GT ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ, ಮ್ಯಾಚ್ ರದ್ದಾದರೆ ಯಾರು ಚಾಂಪಿಯನ್?

ಡಿ.ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ರಚನೆಗೆ ಇನ್ನೂ ಪ್ರಸ್ತಾವನೆ ಬಂದಿಲ್ಲ: ಮಲ್ಲಿಕಾರ್ಜುನ ಖರ್ಗೆ

T-20 ಮ್ಯಾಚ್ ನಂತೆ ಹೊಸ ಸರ್ಕಾರ: ಡಿಕೆ ಶಿವಕುಮಾರ್ ಆಕ್ಷನ್-ಪ್ಯಾಕ್ ಇನ್ನಿಂಗ್ಸ್; 'ಬಂಡೆ' 'ಪವರ್ ಪ್ಲೇ'- ಆಕ್ರಮಣಕಾರಿ ಬ್ಯಾಟಿಂಗ್!

ಪಶ್ಚಿಮ ಬಂಗಾಳದಲ್ಲಿ ಮುಂದುವರಿದ ರಾಜಕೀಯ ಹಿಂಸಾಚಾರ: ಅಭಿಷೇಕ್ ಬೆನ್ನಲ್ಲೇ ಕಲ್ಯಾಣ್ ಬ್ಯಾನರ್ಜಿ ಮೇಲೂ ದಾಳಿ, BJP ವಿರುದ್ಧ ಆರೋಪ..!

SCROLL FOR NEXT