ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ಹಡಗು 
ದೇಶ

ಕೇರಳ: ಸಮುದ್ರದ ಮಧ್ಯೆ ಅಗ್ನಿ ಅವಘಡ; ಉರಿಯುತ್ತಿದ್ದ ಹಡಗಿನಿಂದ 18 ಸಿಬ್ಬಂದಿ ರಕ್ಷಣೆ!

ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಕಂಟೈನರ್ ಹಡಗಿನಿಂದ 18 ಸಿಬ್ಬಂದಿಯನ್ನು ಭಾರತೀಯ ನೌಕಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿರುವುದಾಗಿ ರಕ್ಷಣಾ ಮೂಲಗಳು ತಿಳಿಸಿವೆ.

ಕೇರಳ: ಕೇರಳದ ಕರಾವಳಿಯಲ್ಲಿ ಸೋಮವಾರ ಬೆಳಗ್ಗೆ ಸಿಂಗಾಪುರ ಧ್ವಜ ಹೊಂದಿರುವ ಕಂಟೈನರ್ ಹಡಗು ಎಂವಿ ವಾನ್ ಹೈ 503ರಲ್ಲಿ (MVWanHai 503) ಸ್ಫೋಟವೊಂದು ಸಂಭವಿಸಿರುವುದಾಗಿ ರಕ್ಷಣಾ ಪಡೆ PRO ತಿಳಿಸಿದೆ.

ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಕಂಟೈನರ್ ಹಡಗಿನಿಂದ 18 ಸಿಬ್ಬಂದಿಯನ್ನು ಭಾರತೀಯ ನೌಕಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ರಕ್ಷಿಸಿರುವುದಾಗಿ ರಕ್ಷಣಾ ಮೂಲಗಳು ತಿಳಿಸಿವೆ.

ಬೆಳಗ್ಗೆ 10-30 ರ ಸುಮಾರಿನಲ್ಲಿ ಸ್ಫೋಟದ ಮೊದಲ ವರದಿಯನ್ನು ಮುಂಬೈನ ಕಡಲ ಕಾರ್ಯಾಚರಣೆ ಕೇಂದ್ರ ಕೊಚ್ಚಿಯಲ್ಲಿರುವ ಕಡಲ ಕಾರ್ಯಾಚರಣೆ ಕೇಂದ್ರಕ್ಕೆ ತಿಳಿಸಿದೆ. 270 ಮೀಟರ್ ಉದ್ದದ ಹಡಗು ಜೂನ್ 7 ರಂದು ಕೊಲಂಬೊದಿಂದ ಹೊರಟು ಮುಂಬೈಗೆ ತೆರಳುತ್ತಿತ್ತು, ಜೂನ್ 10 ರಂದು ಆಗಮಿಸುವ ನಿರೀಕ್ಷೆಯಿತ್ತು.

ಸಮುದ್ರ ಮಧ್ಯದಲ್ಲಿಎಂವಿ ವಾನ್ ಹೈ 503 ಹಡಗಿನಲ್ಲಿ ಸ್ಫೋಟ ಸಂಭವಿಸಿರುವ ಬಗ್ಗೆ ಜೂನ್ 9 ರಂದು ಬೆಳಗ್ಗೆ 10-30 ರ ಸುಮಾರಿನಲ್ಲಿ ಮುಂಬೈ ಕಡಲ ಕಾರ್ಯಾಚಾರಣೆ ಕೇಂದ್ರದಿಂದ ಮಾಹಿತಿ ಪಡೆಯಲಾಯಿತು. ಸಿಂಗಾಪುರ ಧ್ವಜ ಹೊಂದಿರುವ ಕಂಟೈನರ್ ಹಡಗು ಆಗಿದ್ದು, ಕೊಲೊಂಬೊದಿಂದ ಮುಂಬೈಗೆ ತೆರಳುತಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಭಾರತೀಯ ನೌಕ ಪಡೆ ಕೊಚ್ಚಿಯಲ್ಲಿ ನಿಲ್ಲಿಸಲು ನಿರ್ಧರಿಸಿದ್ದ ಐಎನ್‌ಎಸ್ ಸೂರತ್ ನ್ನು ನೆರವಿಗೆ ಕಳುಹಿಸಿದ್ದಾರೆ ಎಂದು ರಕ್ಷಣಾ ಪಡೆ PRO ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

ಎರಡೆರಡು ಅತ್ಯಾಚಾರ ಆರೋಪ: ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ವೇಗಿ ಯಶ್ ದಯಾಳ್!

ಕರ್ನಾಟಕ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ 4 ಫಲಿತಾಂಶ

T20 ವಿಶ್ವಕಪ್: ಸಂಜು ಸ್ಯಾಮ್ಸನ್ ಆರ್ಭಟಕ್ಕೆ "ದೇವರು" ಕಾರಣ; ಮದುವೆಯ ಭರಾಟೆಯಲ್ಲೂ ಟೀಂ ಇಂಡಿಯಾ ಮರೆಯದ God!

ಮಗುವಿನ ಪೋಷಣೆಗಾಗಿ ನಾನು ಯಾರ ಜೊತೆಗಾದರೂ ಮಲಗುತ್ತೇನೆ: ದೆಹಲಿಯ 'ವಡಾ ಪಾವ್ ಗರ್ಲ್' ಖ್ಯಾತಿಯ ಚಂದ್ರಿಕಾ ದೀಕ್ಷಿತ್

SCROLL FOR NEXT