ದೇವಾಲಯ ಆವರಣದೊಳಗೆ ಮಾಂಸ ಆಹಾರ ಸೇವಿಸಿದ ವ್ಯಕ್ತಿ 
ದೇಶ

ತಮಿಳುನಾಡು: ಪ್ರಸಿದ್ಧ ಅಣ್ಣಾಮಲೈ ದೇವಾಲಯ ಆವರಣದೊಳಗೆ ಮಾಂಸಾಹಾರ ಸೇವನೆ, ಉದ್ವಿಗ್ನತೆ, ಭಕ್ತರ ಆಕ್ರೋಶ!

ದೇವಸ್ಥಾನದ ಹೊರ ಪ್ರಾಂಗಣದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಆಹಾರ ಸೇವಿಸುತ್ತಿರುವುದನ್ನು ಗಮನಿಸಿದ ಭಕ್ತರು ಕೂಡಲೇ ದೇವಸ್ಥಾನದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ತಿರುವಣ್ಣಾಮಲೈ: ತಮಿಳುನಾಡಿನ ಪ್ರಸಿದ್ಧ ಪ್ರಸಿದ್ಧ ಅಣ್ಣಾಮಲೈ ದೇವಾಲಯ ಆವರಣದೊಳಗೆ ವ್ಯಕ್ತಿಯೋರ್ವ ಮಾಂಸಾಹಾರ ಸೇವಿಸಿದ ನಂತರ ತಿರುವಣ್ಣಾಮಲೈನಲ್ಲಿ ಕೆಲ ಕಾಲ ಉದ್ವಿಗ್ನತೆ ಉಂಟಾಗಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಯಿತು.

ದೇವಸ್ಥಾನದ ಹೊರ ಪ್ರಾಂಗಣದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಆಹಾರ ಸೇವಿಸುತ್ತಿರುವುದನ್ನು ಗಮನಿಸಿದ ಭಕ್ತರು ಕೂಡಲೇ ದೇವಸ್ಥಾನದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ನಂತರ ಅಲ್ಲಿಗೆ ಬಂದು ಏನು ಸೇವಿಸುತ್ತಿದ್ದಾರೆ ಎಂದು ಪ್ರಶ್ನಿಸಿದಾಗ, ತಾನು ಕುಸ್ಕಾಕ್ಕೆ (ಸಾದಾ ಬಿರಿಯಾನಿ) ಆರ್ಡರ್ ಮಾಡಿದ್ದೆ. ಆದರೆ ಅದರೊಂದಿಗೆ ತಪ್ಪಾಗಿ ಚಿಕನ್ ತುಂಡನ್ನು ಪ್ಯಾಕ್ ಮಾಡಲಾಗಿದೆ ಎಂದು ವ್ಯಕ್ತಿ ಹೇಳಿಕೊಂಡಿದ್ದಾನೆ. ಆಹಾರವನ್ನು ಪ್ಯಾಕಪ್ ಮಾಡುವಂತೆ ಸೂಚಿಸಿದ ಅಧಿಕಾರಿಗಳು, ಜಿಲ್ಲಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರಣೆಗಾಗಿ ಆ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಜನವರಿಯಲ್ಲಿ ಇದೇ ರೀತಿಯ ಘಟನೆಯಲ್ಲಿ ಮಧುರೈನ ಪವಿತ್ರ ತಿರುಪರಂಕುಂದ್ರಂ ಸುಬ್ರಹ್ಮಣ್ಯ ಸ್ವಾಮಿ ಬೆಟ್ಟದಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನಾಯಕ ಮತ್ತು ರಾಮನಾಥಪುರಂ ಸಂಸದ ನವಾಸ್ ಕಣಿ ಮಾಂಸ ಆಹಾರ ಸೇವನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅದನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ.ಅಣ್ಣಾಮಲೈ ಖಂಡಿಸಿದ್ದರು.

ಈ ಕೃತ್ಯವನ್ನು ಅತ್ಯಂತ ದುರದೃಷ್ಟಕರ ಎಂದು ಬಣ್ಣಿಸಿದ ಅಣ್ಣಾಮಲೈ, ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, "ಹಿಂದೂಗಳು ಶಾಂತಿಪ್ರಿಯ ಸಮುದಾಯ. ಈ ಸಂಸದ ಬೆಟ್ಟಕ್ಕೆ ಹೋಗಿ ಮಾಂಸಾಹಾರ ಸೇವಿಸಿದ್ದಾರೆ. ಇದು ಅತ್ಯಂತ ದುರದೃಷ್ಟಕರ. ತುಷ್ಟೀಕರಣ ರಾಜಕಾರಣ ನಡೆದಿದೆ" ಎಂದು ಹೇಳಿದ್ದಾರೆ. ಕಣಿ ಅವರನ್ನು ನೇರವಾಗಿ ಹೆಸರಿಸದೆ ಇಂಡಿಯಾ ಟುಡೇ ಅವರು ಅಂದು, "ಈ ಸಂಸದರನ್ನು ವಜಾಗೊಳಿಸಬೇಕು. ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸಿದ್ದಾರೆ. ತೀವ್ರ ದುರದೃಷ್ಟಕರ" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT