ಸಾಂದರ್ಭಿಕ ಚಿತ್ರ 
ದೇಶ

ರೈಲು ಪ್ರಯಾಣಿಕರ ಗಮನಕ್ಕೆ: ಜುಲೈ 1 ರಿಂದ ತತ್ಕಾಲ್ ಟಿಕೆಟ್‌ ಬುಕ್ ಮಾಡಲು ಆಧಾರ್ ಕಡ್ಡಾಯ

ಇದಲ್ಲದೆ, ಜುಲೈ 15 ರಿಂದ ಆನ್‌ಲೈನ್‌ನಲ್ಲಿ ಮಾಡುವ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

ನವದೆಹಲಿ: ತತ್ಕಾಲ್ ಟಿಕೆಟ್‌ಗಳಿಗೆ ನ್ಯಾಯಯುತ ಮತ್ತು ಪಾರದರ್ಶಕ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ, ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಕೆಲವು ಪ್ರಮುಖ ಮಾರ್ಪಾಡುಗಳನ್ನು ಮಾಡಿದೆ.

ಜುಲೈ 1 ರಿಂದ ತತ್ಕಾಲ್ ಟಿಕೆಟ್‌ ಬುಕ್ ಮಾಡಲು ಆಧಾರ್ ಕಡ್ಡಾಯಗೊಳಿಸಿದ್ದು, ಆಧಾರ್ ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ಯೋಜನೆ ಅಡಿಯಲ್ಲಿ ರೈಲು ಟಿಕೆಟ್ ಬುಕ್ ಮಾಡಬಹುದು ಎಂದು ರೈಲ್ವೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

IRCTC ಯ ಅಧಿಕೃತ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಬುಕ್ ಮಾಡಲಾದ ತತ್ಕಾಲ್ ಟಿಕೆಟ್‌ಗಳು ಆಧಾರ್‌ನೊಂದಿಗೆ ದೃಢೀಕರಿಸಿದ ಬಳಕೆದಾರರಿಗೆ ಮಾತ್ರ ಲಭ್ಯವಿರುತ್ತವೆ ಎಂದು ರೈಲ್ವೆ ಸಚಿವಾಲಯ ಹೇಳಿದೆ.

ಇದಲ್ಲದೆ, ಜುಲೈ 15 ರಿಂದ ಆನ್‌ಲೈನ್‌ನಲ್ಲಿ ಮಾಡುವ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

ಗಣಕೀಕೃತ ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್ ಕೌಂಟರ್‌ಗಳಲ್ಲಿ ಮತ್ತು ಅಧಿಕೃತ ಏಜೆಂಟ್‌ಗಳ ಮೂಲಕ ಬುಕ್ ಮಾಡಲಾದ ತತ್ಕಾಲ್ ಟಿಕೆಟ್‌ಗಳು ಬುಕಿಂಗ್ ಸಮಯದಲ್ಲಿ ಬಳಕೆದಾರರು ಒದಗಿಸಿದ ಮೊಬೈಲ್ ಸಂಖ್ಯೆಗೆ OTP ದೃಢೀಕರಣವನ್ನು ಕಳುಹಿಸಬೇಕಾಗುತ್ತದೆ.

ತತ್ಕಾಲ್ ರೈಲು ಟಿಕೆಟ್ ಅನ್ನು ಭಾರತೀಯ ರೈಲ್ವೆ/ಅಧಿಕೃತ ಏಜೆಂಟ್‌ಗಳ ಗಣಿಕೀಕೃತ ಪಿಆರ್‌ಎಸ್(ಪ್ರಯಾಣಿಕರ ಕಾಯ್ದಿರಿಸುವ ವ್ಯವಸ್ಥೆ) ಕೌಂಟರ್ ಮೂಲಕ ಬುಕ್ ಮಾಡಲು ಲಭ್ಯವಿರುತ್ತದೆ. ಆದರೆ, ಟಿಕೆಟ್ ಬುಕ್ ಮಾಡುವ ಸಮಯದಲ್ಲಿ ಬಳಕೆದಾರರು ಒದಗಿಸಿದ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವ ಒಟಿಪಿಯನ್ನು ದೃಢೀಕರಿಸಿದ ಬಳಿಕ ಮಾತ್ರವೇ ಟಿಕೆಟ್ ಬುಕ್ ಮಾಡಲು ಸಾಧ್ಯ. ಇದನ್ನು ಜುಲೈ 15ರಿಂದ ಅನುಷ್ಠಾನಗೊಳಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT