ವಿಜಯ್ ರೂಪಾನಿ ವಾಹನಗಳ ಸಂಖ್ಯೆ 
ದೇಶ

ಕೈಕೊಟ್ಟ ಅದೃಷ್ಟ: ಲಕ್ಕಿ ನಂಬರ್ ದಿನವೇ ಪ್ರಾಣ ಬಿಟ್ಟ ವಿಜಯ್ ರೂಪಾನಿ; ವಾಹನದಿಂದ ಅಂತಿಮ ಯಾತ್ರೆವರೆಗೆ ಫೇವರಿಟ್ ಸಂಖ್ಯೆ ಕಹಾನಿ!

ವಿಜಯ್ ರೂಪಾನಿ ಅವರ ಸಾವಿನ ದಿನಾಂಕದ ಬಗ್ಗೆ ಅಚ್ಚರಿಯ ಅಂಶವೊಂದು ಬೆಳಕಿಗೆ ಬಂದಿದೆ. ಜೀವನದುದ್ದಕ್ಕೂ ಅದೃಷ್ಟ ಎಂದೇ ಅವರು ಭಾವಿಸಿಕೊಂಡು ಬಂದಿದ್ದ ಆ ಸಂಖ್ಯೆಯೇ ಸಾವಿನ ದಿನಾಂಕವಾಗಿ ಮಾರ್ಪಟ್ಟಿದೆ.

ಗಾಂಧಿನಗರ: ಅಹಮದಾಬಾದ್ ವಿಮಾನ ಪತನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮೃತ ಪಟ್ಟಿದ್ದಾರೆ. ಅವರು ಪತ್ನಿ ಅಂಜಲಿ ಮತ್ತು ಮಗಳನ್ನು ಭೇಟಿಯಾಗಲು ಲಂಡನ್​ಗೆ ತೆರಳುತ್ತಿದ್ದರು.

ವಿಜಯ್ ರೂಪಾನಿ ಅವರ ಸಾವಿನ ದಿನಾಂಕದ ಬಗ್ಗೆ ಇದೀಗ ಅಚ್ಚರಿಯ ಅಂಶವೊಂದು ಬೆಳಕಿಗೆ ಬಂದಿದೆ. ಜೀವನದುದ್ದಕ್ಕೂ ಅದೃಷ್ಟ ಎಂದೇ ಅವರು ಭಾವಿಸಿಕೊಂಡು ಬಂದಿದ್ದ ಆ ಸಂಖ್ಯೆಯೇ ಅವರ ಸಾವಿನ ದಿನಾಂಕವಾಗಿ ಮಾರ್ಪಟ್ಟಿದೆ. ವಿಜಯ್ ರೂಪಾನಿಗೆ 1206 ಎಂಬುದು ಕೇವಲ ಒಂದು ಸಂಖ್ಯೆಯಾಗಿರಲಿಲ್ಲ. ಬದಲಿಗೆ, ನಂಬಿಕೆಯ ಸಂಕೇತವಾಗಿತ್ತು. ಅದನ್ನು ಅವರು ಅದೃಷ್ಟವೆಂದೇ ಭಾವಿಸಿದ್ದರು. ವಿಜಯ್ ರೂಪಾನಿ ಈ ಸಂಖ್ಯೆಯನ್ನು ಎಷ್ಟರ ಮಟ್ಟಿಗೆ ಅದೃಷ್ಟವೆಂದು ಪರಿಗಣಿಸಿದ್ದರು.

ಮಾಜಿ ಸಿಎಂ ವಿಜಯ್ ರೂಪಾನಿಯ ಲಕ್ಕಿ ನಂಬರ್ ಸಾವಿನಲ್ಲೂ ಜೊತೆಯಾಗಿದೆ. 1206 ಮಾಜಿ ಸಿಎಂ ವಿಜಯ್​ ರೂಪಾನಿಯವರ ಲಕ್ಕಿ ನಂಬರ್​.. ಅವರ ಎಲ್ಲ ಕಾರುಗಳ ರಿಜಿಸ್ಟರ್​ ನಂಬರ್​ 1206.. ರಾಜಕೀಯ ಆರಂಭಿಕ ದಿನಗಳಲ್ಲಿ ಅವರು ಬಳಸಿದ್ದ ಸ್ಕೂಟರ್​ನ ರಿಜಿಸ್ಟರ್​ ನಂಬರ್​ ಕೂಡ 1206.. ಈ ಸಂಖ್ಯೆ ವಿಜಯ್​ ರೂಪಾನಿಗೆ ರಾಜಕೀಯವಾಗಿಯೂ ಯಶಸ್ಸು ತಂದು ಕೊಟ್ಟಿದೆ. ನಿನ್ನೆ ಅವರು ಲಂಡನ್​ಗೆ ತೆರಳಲು ಏರ್​ಪೋರ್ಟ್​ನಲ್ಲಿ ಬೋರ್ಡಿಂಗ್​ ಆದ ಸಮಯ.. 12 ಗಂಟೆ 10 ನಿಮಿಷ.. ಅವರ ಸೀಟ್​ ನಂಬರ್​ ಕೂಡ 12 ಆಗಿತ್ತು. ಇದೀಗ ಕೊನೆಯ ಪ್ರಯಾಣದ ದಿನಾಂಕ ಜೂನ್ 12, ಅಂದರೆ 12-06.. ಹೀಗೆ ಲಕ್ಕಿ ನಂಬರ್ ದಿನವೇ ವಿಜಯ್ ರೂಪಾನಿ ಬದುಕು ಅಂತ್ಯವಾಗಿದ್ದು ನಿಜಕ್ಕೂ ಅಚ್ಚರಿ..

ಇದೇ ವಿಮಾನದ 11ಎ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕ ಬದುಕುಳಿದಿದ್ದಾನೆ. ಈ ವಿಮಾನದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕ ಈತ. ಇತ್ತ ವಿಜಯ್ ರೂಪಾನಿ ಸೀಟು ಸಂಖ್ಯೆ 12ರ ಪ್ರಯಾಣ 30 ಸೆಕೆಂಡ್ ಕೂಡ ಪೂರ್ಣಗೊಳಿಸಲಿಲ್ಲ. ಅದರೊಳಗೆ ವಿಮಾನ ದುರಂತಕ್ಕೀಡಾಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ವಿಜಯ್ ರೂಪಾನಿ ಅವರ ಸ್ಕೂಟರ್ ಮತ್ತು ಮೊದಲ ಕಾರು 1206 ನೋಂದಣಿ ಸಂಖ್ಯೆಯನ್ನು ಹೊಂದಿವೆ. ಈ ಕಾರು ಮತ್ತು ಸ್ಕೂಟರ್ ಈಗಲೂ ಅವರ ಮನೆಯ ಪಾರ್ಕಿಂಗ್ ಜಾಗದಲ್ಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್