ಹರ್ ಪ್ರೀತ್ ಹೊರಾ  
ದೇಶ

Air India crash: ಪತಿಗೆ 'ಬರ್ತ್ ಡೇ ಸರ್ ಪ್ರೈಸ್' ನೀಡಲು ಲಂಡನ್ ಗೆ ತೆರಳುತ್ತಿದ್ದ ಇಂದೋರ್ ಮೂಲದ ಬೆಂಗಳೂರಿನ ಟೆಕ್ಕಿ ಸಾವು!

ಜೂನ್ 16 ರಂದು ಲಂಡನ್ ನಲ್ಲಿ ಕೆಲಸ ಮಾಡುತ್ತಿರುವ ಆಕೆಯ ಪತಿ ರಾಬಿ ಸಿಂಗ್ ಹೊರಾ ಅವರ ಹುಟ್ಟುಹಬ್ಬ ಇತ್ತು.

ಭೋಪಾಲ್: ಗುರುವಾರ ಮಧ್ಯಾಹ್ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಘೋರ ವಿಮಾನ ದುರಂತದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಟೆಕ್ಕಿಯೊಬ್ಬರು ಸಾವನ್ನಪ್ಪಿರುವುದು ಖಚಿತವಾಗಿದೆ. 29 ವರ್ಷದ ಸೊಸೆ ಹರ್ ಪ್ರೀತ್ ಹೊರಾ ಅವರನ್ನು ಕಳೆದುಕೊಂಡ ಇಂಧೋರ್ ನ ರಾಜ್ ಮೊಹಲ್ಲಾದಲ್ಲಿ ನೆಲೆಸಿರುವ ಸಿಖ್ ಕುಟುಂಬ, ದು:ಖದ ಮಡುವಿನಲ್ಲಿ ಮುಳುಗಿದೆ.

ಜೂನ್ 16 ರಂದು ಲಂಡನ್ ನಲ್ಲಿ ಕೆಲಸ ಮಾಡುತ್ತಿರುವ ಆಕೆಯ ಪತಿ ರಾಬಿ ಸಿಂಗ್ ಹೊರಾ ಅವರ ಹುಟ್ಟುಹಬ್ಬ ಇತ್ತು. ಅದಕ್ಕೆ ಜೂನ್ 19 ರ ಬದಲಿಗೆ ಜೂನ್ 12 ರಂದೇ ತೆರಳುವ ಮೂಲಕ ತನ್ನ ಪತಿಗೆ ಅಚ್ಚರಿ ನೀಡಲು ಬಯಸಿದ್ದ ಹರ್ ಪ್ರೀತ್ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ.

ಈ ಹಿಂದೆ ಜೂನ್ 19 ರಂದು ಲಂಡನ್ ಗೆ ತೆರಳಲು ಆಕೆ ಯೋಜಿಸಿದ್ದರು. ಆದರೆ, ಪತಿಯ ಜನ್ಮ ದಿನವನ್ನು ಅವಿಸ್ಮರಣೀಯವಾಗಿಸುವ ಬಯಕೆಯಿಂದ ದಿನಾಂಕ ಬದಲಿಸಿದ್ದರು ಎಂದು ಅವರ ಮಾವನ ಸಹೋದರ ರಾಜೇಂದ್ರ ಸಿಂಗ್ ಹೂರಾ ತಿಳಿಸಿದ್ದಾರೆ.

ಅಹಮದಾಬಾದ್ ಮೂಲದ ಹರ್‌ಪ್ರೀತ್ ಅವರು 2020 ರಲ್ಲಿ ರಾಬಿಯನ್ನು ವಿವಾಹವಾಗಿದ್ದರು. ರಾಬಿ ಅವರು 2-3 ವರ್ಷಗಳಿಂದ ಲಂಡನ್ ನಲ್ಲಿ ಪ್ರತಿಷ್ಟಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಹರ್ ಪ್ರೀತ್ ಕೂಡಾ ಈ ಹಿಂದೆ ಕೆಲವು ದಿನ ಲಂಡನ್ ನಲ್ಲಿ ಕೆಲಸ ಮಾಡಿದ್ದರು.

ಬೆಂಗಳೂರಿನ ಕಂಪನಿಯು ಮನೆಯಿಂದಲೇ ಕೆಲಸ ಮಾಡಲು ಆಕೆಗೆ ಅನುಮತಿ ನೀಡಿತ್ತು. ನಂತರ ಆಕೆ ಲಂಡನ್‌ನಿಂದ ಕೆಲಸ ಮಾಡಲು ಯೋಜಿಸಿದ್ದಳು ಎಂದು ಅವರ ಇಂದೋರ್ ಮೂಲಕ ಸಂಬಂಧಿ ದರ್ಶಿತ್ ಹೊರಾ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT