ಮೃತರ ಸಂಬಂಧಿಕರು 
ದೇಶ

Air India Plane Crash: ಸಂತ್ರಸ್ತರಿಗೆ ಕ್ಲೈಮ್ ಸೆಟಲ್‌ಮೆಂಟ್ ಪ್ರಕ್ರಿಯೆ ಸಡಿಲಿಸಿದ LIC

ಭಾರತೀಯ ಜೀವ ವಿಮಾ ನಿಗಮ(LIC) ಶುಕ್ರವಾರ ಏರ್ ಇಂಡಿಯಾ ವಿಮಾನ ಅಪಘಾತ ಸಂತ್ರಸ್ತರಿಗೆ ಕ್ಲೈಮ್ ಸೆಟಲ್‌ಮೆಂಟ್ ಪ್ರಕ್ರಿಯೆಯನ್ನು ಸಡಿಲಗೊಳಿಸಿದೆ ಮತ್ತು ಪ್ರಕ್ರಿಯೆಯನ್ನು ತ್ವರಿತಗೊಳಿಸಿರುವುದಾಗಿ ತಿಳಿಸಿದೆ.

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 265 ಜನ ಮೃತಪಟ್ಟಿದ್ದಾರೆ.

ಭಾರತೀಯ ಜೀವ ವಿಮಾ ನಿಗಮ(LIC) ಶುಕ್ರವಾರ ಏರ್ ಇಂಡಿಯಾ ವಿಮಾನ ಅಪಘಾತ ಸಂತ್ರಸ್ತರಿಗೆ ಕ್ಲೈಮ್ ಸೆಟಲ್‌ಮೆಂಟ್ ಪ್ರಕ್ರಿಯೆಯನ್ನು ಸಡಿಲಗೊಳಿಸಿದೆ ಮತ್ತು ಪ್ರಕ್ರಿಯೆಯನ್ನು ತ್ವರಿತಗೊಳಿಸಿರುವುದಾಗಿ ತಿಳಿಸಿದೆ.

ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಬೆಂಬಲಿಸಲು ನಿಗಮವು ಬದ್ಧವಾಗಿದೆ ಮತ್ತು ಕ್ಲೈಮ್ ಸೆಟಲ್‌ಮೆಂಟ್ ಪ್ರಕ್ರಿಯೆ ತ್ವರಿತಗೊಳಿಸುವುದಾಗಿ ಎಲ್ ಐಸಿ ಹೇಳಿದೆ.

"LIC ಪಾಲಿಸಿಗಳ ಹಕ್ಕುದಾರರ ಕಷ್ಟಗಳನ್ನು ತಗ್ಗಿಸಲು LIC ಅನೇಕ ರಿಯಾಯಿತಿಗಳನ್ನು ಘೋಷಿಸಿದೆ. ಮರಣ ಪ್ರಮಾಣಪತ್ರಗಳಿಗೆ ಬದಲಾಗಿ, ವಿಮಾನ ಅಪಘಾತದಲ್ಲಿ ಮೃತಪಟ್ಟ ಬಗ್ಗೆ ಯಾವುದೇ ಸರ್ಕಾರಿ ದಾಖಲೆಗಳಲ್ಲಿರುವ ಪುರಾವೆಗಳು ಅಥವಾ ಕೇಂದ್ರ/ರಾಜ್ಯ ಸರ್ಕಾರ/ವಿಮಾನಯಾನ ಅಧಿಕಾರಿಗಳು ಪಾವತಿಸಿದ ಯಾವುದೇ ಪರಿಹಾರವನ್ನು ಸಾವಿನ ಪುರಾವೆಯಾಗಿ ಸ್ವೀಕರಿಸಲಾಗುತ್ತದೆ" ಎಂದು ವಿಮಾ ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಸಹಾಯಕ್ಕಾಗಿ, ಪಾಲಿಸಿದಾರರು LIC ಯ ಹತ್ತಿರದ ಶಾಖೆ ಅಥವಾ ವಿಭಾಗವನ್ನು ಸಂಪರ್ಕಿಸಬಹುದು ಮತ್ತು LIC ಯ ಕಾಲ್ ಸೆಂಟರ್ 022-68276827 ಗೆ ಸಹ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಏತನ್ಮಧ್ಯೆ, ಈ ದುರಂತದಲ್ಲಿ ಮೃತಪಟ್ಟ ತನ್ನ ಗ್ರಾಹಕರ ನೆರವಿಗೆ ಧಾವಿಸಲು, ಸಾವು ಮತ್ತು ಅಂಗವೈಕಲ್ಯ ಕ್ಲೈಮ್‌ಗಳ ಪ್ರಕ್ರಿಯೆಗೆ ಆದ್ಯತೆ ನೀಡಲು ಮೀಸಲಾದ ವಿಶೇಷ ಕ್ಲೈಮ್ ಇತ್ಯರ್ಥ ಡೆಸ್ಕ್ ಅನ್ನು ಸ್ಥಾಪಿಸಲಾಗಿದೆ ಎಂದು ಬಜಾಜ್ ಅಲಿಯಾನ್ಸ್ ಲೈಫ್ ಇನ್ಶುರೆನ್ಸ್ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT