ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ ಭೂಮಿ ಚೌಹಾಣ್ 
ದೇಶ

ಅಹಮದಾಬಾದ್ ವಿಮಾನ ದುರಂತ ಪ್ರಕರಣ: ಟ್ರಾಫಿಕ್ ಜಾಮ್‌ನಿಂದ ತಡ; ಸ್ವಲ್ಪದರಲ್ಲೆ ಮಹಿಳೆ ಬಚಾವ್! Video

ಏರ್ ಇಂಡಿಯಾದಲ್ಲಿ ತೆರಳಬೇಕಿದ್ದ ಭೂಮಿ ಏರ್ಪೋರ್ಟ್ ಗೆ ತಲುಪುವುದು 10 ನಿಮಿಷ ತಡವಾಗಿದ್ದಕ್ಕೆ ಜೀವ ಉಳಿಸಿಕೊಂಡಿದ್ದಾರೆ. ಮತ್ತೊಂದೆಡೆ ಹಾಸ್ಟೆಲ್ ಮೆಸ್‌ನಿಂದ 15 ನಿಮಿಷ ಮುಂಚೆ ತೆರಳಿದ್ದಕ್ಕೆ ರೋಹನ್ ಬದುಕುಳಿದಿದ್ದಾರೆ.

ಅಹಮದಾಬಾದ್: ಆಯಸ್ಸು ಗಟ್ಟಿಗಿದ್ದರೆ ಎಷ್ಟೇ ದೊಡ್ಡ ಅಪಾಯ ಎದುರಾದರೂ ಕೂದಲೆಳೆ ಅಂತರದಲ್ಲಿ ಪಾರಾಗ್ತಾರೆ ಎಂಬ ಮಾತು ಅನೇಕ ಸಲ ಸತ್ಯವೆನಿಸಿಕೊಂಡಿದೆ. ಇದೀಗ ಈ ಮಾತಿಗೆ ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ದುರಂತದ ವೇಳೆ ಕೂದಲೆಳೆ ಅಂತರದಲ್ಲಿ ಬದುಕುಳಿದ ಭೂಮಿ ಚೌಹಾಣ್ ಮತ್ತು ರೋಹನ್ ಬಗಾಡೆಯೇ ನಿದರ್ಶನವಾಗಿದ್ದಾರೆ.

ಏರ್ ಇಂಡಿಯಾದಲ್ಲಿ ತೆರಳಬೇಕಿದ್ದ ಭೂಮಿ ಏರ್ಪೋರ್ಟ್ ಗೆ ತಲುಪುವುದು 10 ನಿಮಿಷ ತಡವಾಗಿದ್ದಕ್ಕೆ ಜೀವ ಉಳಿಸಿಕೊಂಡಿದ್ದಾರೆ. ಮತ್ತೊಂದೆಡೆ ಹಾಸ್ಟೆಲ್ ಮೆಸ್‌ನಿಂದ 15 ನಿಮಿಷ ಮುಂಚೆ ತೆರಳಿದ್ದಕ್ಕೆ ರೋಹನ್ ಬದುಕುಳಿದಿದ್ದಾರೆ.

ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳಬೇಕಿದ್ದ ಭೂಮಿ ಟ್ರಾಫಿಕ್ ಕಾರಣದಿಂದ ವಿಮಾನ ನಿಲ್ದಾಣಕ್ಕೆ 10 ನಿಮಿಷ ತಡವಾಗಿ ಬಂದಿದ್ದರು. ಇದು ಅವರ ಜೀವ ಉಳಿಯಲು ಕಾರಣವಾಗಿದೆ.

ಈ ಬಗ್ಗೆ ಸ್ವತಃ ಭೂಮಿಯವರೇ ಪ್ರತಿಕ್ರಿಯಿಸಿದ್ದು, 'ಆ 10 ನಿಮಿಷ ತಡವಾಗಿದ್ದ ಕಾರಣಕ್ಕೆ ವಿಮಾನ ಹತ್ತಲು ಆಗಲಿಲ್ಲ. ಇದನ್ನು ಹೇಗೆ ವಿವರಿಸಬೇಕೆಂದು ತಿಳಿಯುತ್ತಿಲ್ಲ. ನನ್ನ ದೇಹ ಅಕ್ಷರಶಃ ನಡುಗುತ್ತಿದೆ. ದೇವರಿಗೆ ಕೃತಜ್ಞತೆ ಸಲ್ಲಿಸುವೆ' ಎಂದು ಹೇಳಿದ್ದಾರೆ.

ಇನ್ನು ಮತ್ತೊಂದು ಘಟನೆಯಲ್ಲಿ ಬಿ.ಜೆ ಆಸ್ಪತ್ರೆಯ ಇಂಟರ್ನಿ ರೋಹನ್ ಬಗಾಡೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ರೋಹನ್ ದುರಂತ ನಡೆದ ಹಾಸ್ಟೆಲ್‌ನಲ್ಲಿದ್ದರು. ದುರಂತಕ್ಕೂ ಕೇವಲ 15 ನಿಮಿಷದ ಮುನ್ನ ಊಟ ಮಾಡಿ ಮೆಸ್‌ನಿಂದ ತೆರಳಿ ಜೀವ ಉಳಿಸಿಕೊಂಡಿದ್ದಾರೆ.

ಈ ಬಗ್ಗೆ ರೋಹನ್ ಪ್ರತಿಕ್ರಿಯಿಸಿದ್ದು, 'ನಾನು ಇನ್ನು 15 ನಿಮಿಷಗಳ ಕಾಲ ಆ ಸ್ಥಳದಲ್ಲೇ ಇದ್ದಿದ್ದರೆ ಗಾಯಗೊಂಡ ಅನೇಕರಲ್ಲಿ ನಾನೂ ಒಬ್ಬನಾಗುತ್ತಿದ್ದೆ. ಆಗಷ್ಟೇ ಮೆಸ್‌ನಲ್ಲಿ ಊಟ ಮುಗಿಸಿ ಹಾಸ್ಟೆಲ್‌ಗೆ ತೆರಳಿದ್ದೆ. ಆಗ ದೊಡ್ಡ ಶಬ್ದ ಕೇಳಿಸಿತು. ಹೊರಬಂದು ನೋಡಿದಾಗ ವಿಮಾನ ಪತನವಾಗಿ ಆಕಾಶ ಕಪ್ಪು ಹೊಗೆಯಿಂದ ತುಂಬಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

SCROLL FOR NEXT