ಉತ್ತರ ಪ್ರದೇಶ ಪೊಲೀಸರ ಸಾಂದರ್ಭಿಕ ಚಿತ್ರ 
ದೇಶ

ಕಾನೂನು ಸುವ್ಯವಸ್ಥೆಗೆ ಧಕ್ಕೆ ಸಾಧ್ಯತೆ: ಅಯೋಧ್ಯೆಯಲ್ಲಿ ವಾರ್ಷಿಕ ಉರುಸ್ ಸಮಾರಂಭ ನಿಷೇಧ

ಕಳೆದ ಎರಡು ದಶಕಗಳಿಂದ ಅಯೋಧ್ಯೆಯಲ್ಲಿ ನಡೆಯುತ್ತಿರುವ ಉರುಸ್ ಸಮಾರಂಭವನ್ನು ಶನಿವಾರ ಮತ್ತು ಭಾನುವಾರ ನಿಗದಿಪಡಿಸಲಾಗಿತ್ತು.

ಅಯೋಧ್ಯೆ: ಅಯೋಧ್ಯೆಯಲ್ಲಿ ಶಾಂತಿ ಭಂಗ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳೀಯ ಆಡಳಿತವು ವಾರ್ಷಿಕ ಉರುಸ್ ಸಮಾರಂಭವನ್ನು ನಿಷೇಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಎರಡು ದಶಕಗಳಿಂದ ಅಯೋಧ್ಯೆಯಲ್ಲಿ ನಡೆಯುತ್ತಿರುವ ಉರುಸ್ ಸಮಾರಂಭವನ್ನು ಶನಿವಾರ ಮತ್ತು ಭಾನುವಾರ ನಿಗದಿಪಡಿಸಲಾಗಿತ್ತು.

ಆದರೆ ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ದೂರಿನ ನಂತರ, ಅಯೋಧ್ಯಾ ಆಡಳಿತವು, ಖಾನ್‌ಪುರ ಮಸೋಧಾ ಪ್ರದೇಶದ ದಾದಾ ಮಿಯಾ ಬಜಾರ್‌ನಲ್ಲಿ ಪ್ರತಿ ವರ್ಷ ನಡೆಯುವ 'ದಾದಾ ಮಿಯಾ ಉರುಸ್'ಗೆ ಅನುಮತಿ ನಿರಾಕರಿಸಲಾಗಿದೆ.

ಮೂಲಗಳ ಪ್ರಕಾರ, ಸ್ಥಳೀಯ ವಿಎಚ್‌ಪಿ ಸದಸ್ಯರಾದ ಲಾಲ್ಜಿ ಶರ್ಮಾ ಮತ್ತು ಸೂರ್ಯಕಾಂತ್ ಪಾಂಡೆ ಅವರು ಖಾನ್‌ಪುರ ಮಸೋಧಾದಲ್ಲಿ "ಘಾಜಿ ಬಾಬಾ" ಹೆಸರಿನಲ್ಲಿ ಸಭೆ ಆಯೋಜಿಸಲಾಗುತ್ತಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

"ಉರುಸ್ ದಾದಾ ಮಿಯಾ" ಹೆಸರಿನಲ್ಲಿ ಉರುಸ್ ಆಯೋಜಿಸಲು ಆಯೋಜಕರು ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿದ್ದಾರೆ. ಆದರೆ ಅವರು "ಘಾಜಿ ಬಾಬಾ ಉರುಸ್" ಹೆಸರಿನಲ್ಲಿ ರಶೀದಿಗಳನ್ನು ಮುದ್ರಿಸುವ ಮೂಲಕ ದೇಣಿಗೆ ಸಂಗ್ರಹಿಸುತ್ತಿರುವುದು ಪೊಲೀಸ್ ತನಿಖೆಯಲ್ಲಿ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅನುಮತಿಯನ್ನು ರದ್ದುಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉರುಸ್ ಸಮಯದಲ್ಲಿ, ಆಯೋಜಕರು "ಮಾಟಮಂತ್ರ" ಮಾಡುವ ಮತ್ತು ಜನರನ್ನು "ದಾರಿ ತಪ್ಪಿಸುವ" ಕೆಲವು ಧರ್ಮಗುರುಗಳನ್ನು ಆಹ್ವಾನಿಸುತ್ತಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

SCROLL FOR NEXT