ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ 
ದೇಶ

ಮಣಿಪುರ: 328 ಬಂದೂಕು ಸೇರಿದಂತೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ

ಮಣಿಪುರ ಪೊಲೀಸ್, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ ಜಂಟಿ ತಂಡಗಳು ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

ಗುವಾಹಟಿ: ಜೂನ್ 13 ಮತ್ತು 14 ರ ಮಧ್ಯರಾತ್ರಿ ಇಂಫಾಲ್ ಕಣಿವೆಯ ಐದು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮಣಿಪುರ ಪೊಲೀಸರು ಮತ್ತು ಭದ್ರತಾ ಪಡೆಗಳು 300ಕ್ಕೂ ಹೆಚ್ಚು ಬಂದೂಕುಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.

ಒಟ್ಟಾರೆಯಾಗಿ 328 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪೈಕಿಎಸ್‌ಎಲ್‌ಆರ್ 151, ಐಎನ್‌ಎಸ್‌ಎಎಸ್ 65, ಇತರ ರೀತಿಯ ರೈಫಲ್‌ಗಳು 73, ಕಾರ್ಬೈನ್‌ಗಳು 5, ಎಂಪಿ5 ಎರಡು, ಎಲ್‌ಎಂಜಿ 12, ಎಕೆ ಸರಣಿ ರೈಫಲ್‌ಗಳು 6, ಅಮೋಘ ರೈಫಲ್‌ಗಳು ಎರಡು, ಮಾರ್ಟರ್ ಒಂದು, ಪಿಸ್ತೂಲ್‌ಗಳು 6, ಬ್ಯಾರೆಲ್‌ಗಳು ಎರಡು, ಎಆರ್ 15 ಗನ್ ಒಂದು ಮತ್ತು ಫ್ಲೇರ್ ಗನ್‌ಗಳು ಎರಡು ಸೇರಿವೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಲಾರಿ ದೋರ್ಜಿ ಲಾಟೂ ಅವರ ಪ್ರಕಾರ, ಇಂಫಾಲ್ ಕಣಿವೆ ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ದೊಡ್ಡ ಸಂಗ್ರಹದ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಮಣಿಪುರ ಪೊಲೀಸ್, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ ಜಂಟಿ ತಂಡಗಳು ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

"ಗುಪ್ತಚರ ಮಾಹಿತಿ ಆಧಾರಿತ ಈ ಕಾರ್ಯಾಚರಣೆ, ಮಣಿಪುರ ಪೊಲೀಸ್ ಮತ್ತು ಭದ್ರತಾ ಪಡೆಗಳು ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಲು, ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು, ನಾಗರಿಕರು ಮತ್ತು ಅವರ ಆಸ್ತಿಯ ಸುರಕ್ಷತೆ ಹಾಗೂ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಿರಂತರ ಪ್ರಯತ್ನಗಳಲ್ಲಿ ಪ್ರಮುಖ ಸಾಧನೆಯನ್ನು ಗುರುತಿಸುತ್ತದೆ" ಎಂದು ಮಣಿಪುರ ಪೊಲೀಸರು ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

ATM Robbery: 'ನಾನೇ ಬರ್ಬೇಕು ಅಂದ್ಕೊಡಿದ್ದೆ.. ನೀವೇ ಬಂದ್ರಿ..': ಪೊಲೀಸರ ಬಳಿ ಕಿಂಗ್ ಪಿನ್ ರವಿ ಪತ್ನಿ ಸ್ಫೋಟಕ ಹೇಳಿಕೆ, ರಿಕವರಿ ಹಣ ಏನಾಯ್ತು?

nehruarchive: ನೆಹರು ಬರಹಗಳು ಕೇವಲ ಇತಿಹಾಸವಲ್ಲ, ಅವು ವಿಕಸನ ಭಾರತದ ಆತ್ಮಸಾಕ್ಷಿಯ ದಾಖಲೆಗಳು!

ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆ; ಶಾಸಕರಿಗೆ ಡಿಸಿಎಂ ಗಾಳ?: ಪರಪ್ಪನ ಅಗ್ರಹಾರಕ್ಕೆ ಡಿಕೆ ಶಿವಕುಮಾರ್ ಭೇಟಿ!

ಖಾತೆ ಹಂಚಿದ ನಿತೀಶ್ ಕುಮಾರ್; 20 ವರ್ಷಗಳಲ್ಲಿ ಇದೇ ಮೊದಲ ಬಾರಿ ಬಿಜೆಪಿಗೆ ಗೃಹ ಖಾತೆ

SCROLL FOR NEXT