ಗೋದಾವರಿ ನದಿ 
ದೇಶ

ತೆಲಂಗಾಣ: ಗೋದಾವರಿ ನದಿಯಲ್ಲಿ ಮುಳುಗಿ ಹದಿಹರೆಯದ ಐವರು ಯುವಕರ ಸಾವು!

ಪ್ರಸಿದ್ಧ ಜ್ಞಾನ ಸರಸ್ವತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಹೈದರಾಬಾದಿನಿಂದ ಬಸರಾಕ್ಕೆ ಸುಮಾರು ಜನರ ತಂಡವು ಬಸರಾಕ್ಕೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ: ಐವರು ಹದಿಹರೆಯದ ಯುವಕರು ಗೋದಾವರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕರೀಂ ನಗರದ ಬಸರಾ ಬಳಿ ಭಾನುವಾರ ನಡೆದಿದೆ.

ಪ್ರಸಿದ್ಧ ಜ್ಞಾನ ಸರಸ್ವತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಹೈದರಾಬಾದಿನಿಂದ ಬಸರಾಕ್ಕೆ ಸುಮಾರು ಜನರ ತಂಡವು ಬಸರಾಕ್ಕೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವಾಲಯಕ್ಕೆ ತೆರಳುವ ಮುನ್ನಾ ಐವರು ಹದಿಹರೆಯದ ಯುವಕರು ಗೋದಾವರಿ ನದಿಯಲ್ಲಿ ಪವಿತ್ರ ಸ್ನಾನ ಮಾಡುವಾಗ ಇದ್ದಕ್ಕಿಂತ ನೀರಿನ ಮಟ್ಟದಲ್ಲಿ ಹೆಚ್ಚಾಗಿದ್ದು, ಆ ಯುವಕರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಭೈಂಸಾದ ಸಹಾಯಕ ಪೊಲೀಸ್ ಅಧೀಕ್ಷಕ ಅವಿನಾಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ನಂತರ ರಕ್ಷಣಾ ತಂಡಗಳು ಐವರನ್ನು ಹೊರತೆಗೆದು ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಗೆ ಆಗಮಿಸುವ ಮುನ್ನವೇ ಐವರೂ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಧಿಕಾರಿಗಳು ಅಧಿಕೃತ ವರದಿಗಾಗಿ ಕಾಯುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT