ಅಮಿತಾಬ್ ಕಾಂತ್ 
ದೇಶ

ಜಿ20 ಶೆರ್ಪಾ ಹುದ್ದೆಗೆ ಅಮಿತಾಬ್ ಕಾಂತ್ ರಾಜೀನಾಮೆ

ನಿವೃತ್ತ ಐಎಎಸ್ ಅಧಿಕಾರಿಯಾಗಿರುವ ಅಮಿತಾಬ್ ಕಾಂತ್ ಅವರನ್ನು ಜುಲೈ 2022 ರಲ್ಲಿ ಭಾರತದ G20 ಶೆರ್ಪಾ ಆಗಿ ನೇಮಿಸಲಾಗಿತ್ತು.

ನವದೆಹಲಿ: 45 ವರ್ಷಗಳ ಸರ್ಕಾರಿ ಸೇವೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಅಮಿತಾಭ್ ಕಾಂತ್ ಅವರು ಸೋಮವಾರ ಭಾರತದ G20 ಶೆರ್ಪಾ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಕೇರಳ ಕೇಡರ್‌ನ 1980ನೇ ಬ್ಯಾಚ್‌ನ ನಿವೃತ್ತ ಐಎಎಸ್ ಅಧಿಕಾರಿಯಾಗಿರುವ ಅಮಿತಾಬ್ ಕಾಂತ್ ಅವರನ್ನು ಭಾರತವು G20 ಅಧ್ಯಕ್ಷತೆ ವಹಿಸಿಕೊಳ್ಳುವ ಕೆಲವೇ ತಿಂಗಳುಗಳ ಮೊದಲು ಜುಲೈ 2022 ರಲ್ಲಿ ಭಾರತದ G20 ಶೆರ್ಪಾ ಆಗಿ ನೇಮಿಸಲಾಗಿತ್ತು.

'ನನ್ನ ಹೊಸ ಪ್ರಯಾಣ' ಎಂಬ ಶೀರ್ಷಿಕೆಯ ಲಿಂಕ್ಡ್‌ಇನ್ ಪೋಸ್ಟ್‌ನಲ್ಲಿ ಅಮಿತಾಬ್ ಕಾಂತ್ ಹೀಗೆ ಹೇಳಿದ್ದಾರೆ.... "45 ವರ್ಷಗಳ ಸಮರ್ಪಿತ ಸರ್ಕಾರಿ ಸೇವೆಯ ನಂತರ, ನಾನು ಹೊಸ ಅವಕಾಶಗಳನ್ನು ಸ್ವೀಕರಿಸಲು ಮತ್ತು ಜೀವನದಲ್ಲಿ ಅಧ್ಯಾಯವನ್ನು ಆರಂಭಿಸಲು ನಿರ್ಧರಿಸಿದ್ದೇನೆ. G20 ಶೆರ್ಪಾ ಹುದ್ದೆಗೆ ನನ್ನ ರಾಜೀನಾಮೆ ಸ್ವೀಕರಿಸಿದ್ದಕ್ಕಾಗಿ ಮತ್ತು ಹಲವಾರು ಅಭಿವೃದ್ಧಿ ಉಪಕ್ರಮಗಳನ್ನು ಮುನ್ನೆಡೆಸಲು ಮತ್ತು ಭಾರತದ ಬೆಳವಣಿಗೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕೊಡುಗೆ ನೀಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಕೃತಜ್ಞನಾಗಿದ್ದೇನೆ" ಎಂದು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT