ಮಾಡೆಲ್ ಶೀತಲ್ 
ದೇಶ

ಮಾಡೆಲ್ ಶೀತಲ್ ಕತ್ತು ಸೀಳಿ ಬರ್ಬರ ಹತ್ಯೆ: ಕಾಲುವೆಯಲ್ಲಿ ಶವ ಪತ್ತೆ; ಕೊನೆಯ ಕ್ಷಣದ Vidoe Viral!

ಖಾಂಡಾ ಗ್ರಾಮದ ಮೂಲಕ ಹಾದುಹೋಗುವ ರಿಲಯನ್ಸ್ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು ಹರಿಯಾಣದ ಸೋನಿಪತ್‌ನಲ್ಲಿ ಸಂಚಲನ ಮೂಡಿಸಿದೆ.

ಚಂಡೀಗಢ: ಖಾಂಡಾ ಗ್ರಾಮದ ಮೂಲಕ ಹಾದುಹೋಗುವ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು ಹರಿಯಾಣದ ಸೋನಿಪತ್‌ನಲ್ಲಿ ಸಂಚಲನ ಮೂಡಿಸಿದೆ. ಯುವತಿ ಶವವನ್ನು ಹೊರತೆಗೆಯಲಾಗಿದ್ದು ಆಕೆಯ ಕತ್ತು ಸೀಳಿ ಕೊಲೆ ಮಾಡಿರುವುದು ಪತ್ತೆಯಾಗಿದೆ. ಆ ಯುವತಿ ಪಾಣಿಪತ್ ನಿವಾಸಿ ಶೀತಲ್ ಎಂದು ಗುರುತಿಸಲಾಗಿದೆ.

ಶೀತಲ್ ಹತ್ತಿರದ ಖಲೀಲಾ ಮಜ್ರಾ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಮೃತ ಶೀತಲ್ ಹರಿಯಾಣವಿ ಸಂಗೀತ ಉದ್ಯಮದಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದಳು. ಆಕೆಯ ಕುಟುಂಬ ಮತ್ತು ಪಾಣಿಪತ್ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಈಗ ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ.

ಮೃತ ಮಾಡೆಲ್ ಇತ್ತೀಚೆಗೆ ತನ್ನ ಸಹೋದರಿ ನೇಹಾ ಜೊತೆ ಪಾಣಿಪತ್‌ನ ಸತ್ಕರ್ತನ್ ಕಾಲೋನಿಯಲ್ಲಿ ವಾಸಿಸುತ್ತಿದ್ದರು. ಭಾನುವಾರವೇ ಮೃತ ಶೀತಲ್ ಅವರ ಸಹೋದರಿ ಪಾಣಿಪತ್‌ನ ಹಳೆಯ ಕೈಗಾರಿಕಾ ಪೊಲೀಸ್ ಠಾಣೆಯಲ್ಲಿ ಶೀತಲ್ ನಾಪತ್ತೆ ದೂರು ದಾಖಲಿಸಿದ್ದರು.

ಶೀತಲ್ ಅವರ ಕುತ್ತಿಗೆಯಲ್ಲಿ ಹರಿತವಾದ ಆಯುಧದ ಗುರುತುಗಳಿವೆ. ಪೊಲೀಸರು ಶವವನ್ನು ತಮ್ಮ ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪೊಲೀಸ್ ತಂಡವು ಈ ವಿಷಯವನ್ನು ಗಂಭೀರವಾಗಿ ತನಿಖೆ ನಡೆಸುತ್ತಿದೆ. ಪಾಣಿಪತ್ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಸೋನಿಪತ್ ಪೊಲೀಸರು ಈಗ ಪಾಣಿಪತ್ ಪೊಲೀಸರು ಮತ್ತು ಆಕೆಯ ಕುಟುಂಬ ಸದಸ್ಯರ ಮಾಹಿತಿಗಾಗಿ ಕಾಯುತ್ತಿದ್ದಾರೆ.

ಈ ಸಂಪೂರ್ಣ ವಿಷಯದ ಬಗ್ಗೆ ಮಾಹಿತಿ ನೀಡಿದ ಎಸಿಪಿ ಅಜಿತ್ ಸಿಂಗ್, ಖಾರ್ಖೋಡಾ ಪೊಲೀಸ್ ಠಾಣೆ ಪ್ರದೇಶದ ಕಾಲುವೆಯಿಂದ ಯುವತಿಯ ಶವ ಪತ್ತೆಯಾಗಿದೆ ಎಂದು ಹೇಳಿದರು. ಪಾಣಿಪತ್‌ನಲ್ಲಿ ನಾಪತ್ತೆಯಾದ ಪ್ರಕರಣ ದಾಖಲಾಗಿದೆ. ಪೊಲೀಸ್ ತಂಡವು ಇಡೀ ವಿಷಯದ ತನಿಖೆಯಲ್ಲಿ ತೊಡಗಿದೆ.

ಇನ್ನು ಕೊನೆಗೂ ಮುನ್ನ ಶೀತಲ್ ಚೌಧರಿ ಬಾಯ್ ಫ್ರೆಂಡ್ ಜೊತೆ ಕಾರಿನಲ್ಲಿ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT