ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇವಾಲಯದ ಬಳಿ ಹೆಲಿಕಾಪ್ಟರ್ ಅಪಘಾತಕ್ಕೀಡಾದ ನಂತರ ಸ್ಥಳದಲ್ಲಿದ್ದ ಕಾರ್ಯಾಚರಣೆ ನಡೆಸುತ್ತಿರುವುದು NDRF ಪಡೆ. 
ದೇಶ

ಕೇದಾರನಾಥ ಹೆಲಿಕಾಪ್ಟರ್ ಪತನ ಪ್ರಕರಣ: ಖಾಸಗಿ ಹೆಲಿಕಾಪ್ಟರ್ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲು

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜೀವ್ ನಖೋಲಿಯಾ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದಬಂದಿದೆ.

ಡೆಹ್ರಾಡೂನ್: ಭಾನುವಾರ ಕೇದಾರನಾಥ ಬಳಿ ಎರಡು ವರ್ಷದ ಮಗು, ಪೈಲಟ್ ಸೇರಿದಂತೆ ಏಳು ಜನರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ಪತನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಹೆಲಿಕಾಪ್ಟರ್ ಸಂಸ್ಥೆಯ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ.

ಹೆಲಿಕಾಪ್ಟರ್ ಸೇವಾ ನಿರ್ವಹಣಾ ಸಂಸ್ಥೆ ಆರ್ಯನ್ ಏವಿಯೇಷನ್ ​​ಪ್ರೈವೇಟ್ ಲಿಮಿಟೆಡ್ ವಿರುದ್ಧ ನಿರ್ಲಕ್ಷ್ಯದ ಆರೋಪದಡಿ ಪ್ರಕರಣ ದಾಖಲಾಗಿದೆ.

ಆರ್ಯನ್ ಏವಿಯೇಷನ್‌ನ ಜವಾಬ್ದಾರಿಯುತ ವ್ಯವಸ್ಥಾಪಕ ಕೌಶಿಕ್ ಪಾಠಕ್ ಮತ್ತು ವ್ಯವಸ್ಥಾಪಕ ವಿಕಾಸ್ ತೋಮರ್ ವಿರುದ್ಧ ಸೋನ್‌ಪ್ರಯಾಗ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಮತ್ತು ವಿಮಾನ ಕಾಯ್ದೆ 1934ರ ಸೆಕ್ಷನ್ 10 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜೀವ್ ನಖೋಲಿಯಾ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದಬಂದಿದೆ.

ದುರಂತವು ಬೆಳಿಗ್ಗೆ 5.30ರ ಸುಮಾರಿಗೆ ಸಂಭವಿಸಿದೆ. ಆದರೆ, ಆರ್ಯನ್ ಏವಿಯೇಷನ್‌ಗೆ ಹೆಲಿಕಾಪ್ಟರ್ ಸಂಸ್ಥೆಗೆ ಜೂನ್ 15 ರಂದು ಕಾರ್ಯಾಚರಣೆಗಾಗಿ ಬೆಳಿಗ್ಗೆ 6 ರಿಂದ 7 ರವರೆಗೆ ಮೊದಲ ಸ್ಲಾಟ್ ನೀಡಲಾಗಿತ್ತು, ಆದರೆ, ಅದಕ್ಕೂ ಮೊದಲೇ ಕಾರ್ಯಾಚರಣೆ ಆರಂಭಿಸಲಾಗಿದ್ದು, ಇದರಿಂದ ದುರಂತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದಲ್ಲದೆ, ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದರೂ, ಹೆಲಿಕಾಪ್ಟರ್ ಹಾರುವ ಮೊದಲು ಹವಾಮಾನ ಪರಿಸ್ಥಿತಿಗಳನ್ನು ಪರಿಶೀಲಿಸಲಾಗಿಲ್ಲ. ಡಿಜಿಸಿಎ ಮತ್ತು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ ಹೊರಡಿಸಿದ ಎಸ್‌ಒಪಿಯನ್ನು ನಿರ್ಲಕ್ಷಿಸಲಾಗಿದೆ. ಇಂತಹ ಕ್ರಮಗಳು ಜೀವ ಮತ್ತು ಆಸ್ತಿಪಾಸ್ತಿಗಳ ನಷ್ಟಕ್ಕೆ ಕಾರಣವಾಗುತ್ತದೆ ಎಂದು ಕಂಪನಿಯ ವ್ಯವಸ್ಥಾಪಕರಿಗೆ ಚೆನ್ನಾಗಿ ತಿಳಿದಿತ್ತು. ಆದರೂ ನಿರ್ಲಕ್ಷ್ಯ ತೋರಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT