ಡಿಎನ್ ಎ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಅವಶೇಷಗಳ ಹಸ್ತಾಂತರ 
ದೇಶ

Air India plane crash: ದುರಂತದಲ್ಲಿ ಮೃತಪಟ್ಟ 18 ಜನರ ಗುರುತು ಇನ್ನೂ ಪತ್ತೆಯಾಗಿಲ್ಲ!

ಇಲ್ಲಿಯವರೆಗೆ 272 ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಒಂಬತ್ತು ಸ್ಥಳೀಯ ನಿವಾಸಿಗಳು ಮತ್ತು ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ.

ಅಹಮದಾಬಾದ್: ಏರ್ ಇಂಡಿಯಾ-171 ವಿಮಾನ ಅಪಘಾತ ಸಂಭವಿಸಿ ಕೆಲವು ದಿನಗಳಾದರೂ, ಮೃತರ ಸಂಖ್ಯೆ ಮತ್ತು ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಿಲ್ಲ. ದುರದೃಷ್ಟಕರ ಏರ್ ಇಂಡಿಯಾ ವಿಮಾನದಲ್ಲಿ 242 ಮಂದಿ ಪ್ರಯಾಣಿಸುತ್ತಿದ್ದರೂ, ಅಹಮದಾಬಾದ್‌ನ ಬಿಜೆ ವೈದ್ಯಕೀಯ ಕಾಲೇಜು ಮತ್ತು ಸಿವಿಲ್ ಆಸ್ಪತ್ರೆಯ ಆವರಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾನೆ.

ಶನಿವಾರ, ಕಾಲೇಜಿನ ಜೂನಿಯರ್ ವೈದ್ಯರ ಸಂಘದ ಅಧ್ಯಕ್ಷ ಡಾ. ಧವಲ್ ಗಮೇಟಿ ಮಾತನಾಡಿ 270 ಶವಗಳನ್ನು ಸಿವಿಲ್ ಆಸ್ಪತ್ರೆಗೆ ಸ್ವೀಕರಿಸಲಾಗಿದೆ ಎಂದು ಹೇಳಿದರು. ಇಲ್ಲಿಯವರೆಗೆ 272 ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇದರಲ್ಲಿ 13ಮಂದಿ ಇತರರೂ ಸೇರಿದ್ದಾರೆ - ಒಂಬತ್ತು ಸ್ಥಳೀಯ ನಿವಾಸಿಗಳು ಮತ್ತು ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವನ್ನಪ್ಪಿದ್ದಾರೆ. ಇತರ 18 ವ್ಯಕ್ತಿಗಳು ಯಾರು (272 - [241 + 13]) ಏನು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

ಡಿಎನ್‌ಎ ಗುರುತಿನ ಪ್ರಕ್ರಿಯೆ ಮುಗಿದ ನಂತರವೇ ಸಾವಿನ ನಿಖರ ಸಂಖ್ಯೆ ತಿಳಿಯಬಹುದು ಎಂದು ಸರ್ಕಾರ ಹೇಳಿದೆ. ಇಲ್ಲಿಯವರೆಗೆ, ಡಿಎನ್‌ಎ ಪರೀಕ್ಷೆಯ ಮೂಲಕ 80 ಸಂತ್ರಸ್ತರನ್ನು ಗುರುತಿಸಲಾಗಿದೆ. ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 33 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ರೂಪಾನಿ ಅವರ ಗೌರವಾರ್ಥವಾಗಿ ಗುಜರಾತ್ ಸರ್ಕಾರ ಸೋಮವಾರ ರಾಜ್ಯ ಶೋಕಾಚರಣೆಯನ್ನು ಘೋಷಿಸಿತು.

ಏತನ್ಮಧ್ಯೆ, ಪ್ರಧಾನ ಕಾರ್ಯದರ್ಶಿ ಡಾ. ಪ್ರಮೋದ್ ಕುಮಾರ್ ಮಿಶ್ರಾ ನೇತೃತ್ವದ ಪ್ರಧಾನಿ ಕಚೇರಿಯ ಉನ್ನತ ಮಟ್ಟದ ತಂಡವು ನಡೆಯುತ್ತಿರುವ ಪರಿಹಾರ ಮತ್ತು ತನಿಖಾ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲು ಅಹಮದಾಬಾದ್‌ಗೆ ಆಗಮಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

SCROLL FOR NEXT