ರೈಲಿನ ಕಸದ ಬುಟ್ಟಿಗೆ ಬೀಡಿ ಎಸೆದ ವ್ಯಕ್ತಿ online desk
ದೇಶ

ರೈಲಿನ ಕಸದ ಬುಟ್ಟಿಗೆ ಬೀಡಿ ಎಸೆದ ವ್ಯಕ್ತಿ, ಪುಣೆ-ದೌಂಡ್ ರೈಲಿನಲ್ಲಿ ಬೆಂಕಿ: ವಿಡಿಯೋ

ಘಟನೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ 55 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಪುಣೆ: ವ್ಯಕ್ತಿಯೋರ್ವ ಧೂಮಪಾನ ಮಾಡಿದ ನಂತರ ಬೀಡೀಯನ್ನು ರೈಲಿನ ಕಸದ ಬುಟ್ಟಿಗೆ ಎಸೆದ ಪರಿಣಾಮ ಪುಣೆ- ದೌಂಡ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಘಟನೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ 55 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸೋಮವಾರ ಬೆಳಿಗ್ಗೆ ಪುಣೆಯಿಂದ ದೌಂಡ್‌ಗೆ ಹೋಗುತ್ತಿದ್ದ ಡೀಸೆಲ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ (ಡೆಮು) ರೈಲಿನಲ್ಲಿ ಸಣ್ಣ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯನ್ನು ತ್ವರಿತವಾಗಿ ನಂದಿಸಲಾಯಿತು ಮತ್ತು ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ದೌಂಡ್ ರೈಲ್ವೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿರುವ ಪ್ರಕಾರ, ಬೆಳಿಗ್ಗೆ 8 ಗಂಟೆಗೆ ಚಲಿಸುವ ದೌಂಡ್-ಪುಣೆ ಷಟಲ್ ರೈಲಿನ ಶೌಚಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಭೀತಿ ಉಂಟು ಮಾಡಿದೆ.

ಕಸದ ಬುಟ್ಟಿಯಲ್ಲಿ ಕಾಗದಗಳು ಮತ್ತು ಇತರ ಕಸವಿತ್ತು, ಅದು ಬೆಂಕಿಯನ್ನು ಹೊತ್ತಿಕೊಂಡಿತು, ಇದರ ಪರಿಣಾಮವಾಗಿ ಶೌಚಾಲಯದಿಂದ ಹೊಗೆ ಬರಲು ಕಾರಣವಾಯಿತು ಮತ್ತು ಪ್ರಯಾಣಿಕರಲ್ಲಿ ಭಯಭೀತಿ ಉಂಟಾಯಿತು ಎಂದು ಅಧಿಕಾರಿ ಹೇಳಿದರು.

ಆ ಕೋಚ್‌ನಲ್ಲಿ ಕೆಲವೇ ಪ್ರಯಾಣಿಕರಿದ್ದರು. ಬೆಂಕಿಯನ್ನು ಬೇಗನೆ ನಂದಿಸಲಾಯಿತು, ಮತ್ತು ಅದೃಷ್ಟವಶಾತ್, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

ಮಹಾ ಅಚ್ಚರಿ: ಶರದ್ ಪವಾರ್ ಪುತ್ರಿ ಸುಪ್ರಿಯ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್!

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ, ಪುನರ್ ಪರಿಶೀಲನೆಗೆ ಒತ್ತಾಯ

'ರಾಜಕೀಯ ದ್ವೇಷ, ಪೊಲೀಸರ ವೈಫಲ್ಯ' ಬಳ್ಳಾರಿ ಹಿಂಸಾಚಾರ ಘಟನೆಗೆ ಕಾರಣ: ಕಾಂಗ್ರೆಸ್ ಸಮಿತಿ

SCROLL FOR NEXT