ಸಾಂದರ್ಭಿಕ ಚಿತ್ರ  
ದೇಶ

ಒಡಿಶಾ: ಬೀಚ್‌ ಬಳಿ ಸ್ನೇಹಿತನ ಸಮ್ಮುಖದಲ್ಲೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, 8 ಮಂದಿ ಬಂಧನ

ಗೋಪಾಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪಂಥನಿವಾಸ್‌ನ ಹಿಂದಿನ ನಿರ್ಜನ ಪ್ರದೇಶದಲ್ಲಿ ಯುವಕರು ಅಪರಾಧ ಎಸಗಿದ್ದಾರೆ.

ಬೆರ್ಹಾಂಪುರ/ಭುವನೇಶ್ವರ: ಆಘಾತಕಾರಿ ಘಟನೆಯೊಂದರಲ್ಲಿ, 20 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಒಡಿಶಾ ರಾಜ್ಯದ ಭುವನೇಶ್ವರದ ಗೋಪಾಲ್‌ಪುರ ಬೀಚ್‌ನಲ್ಲಿ ಯುವಕರು ವಿದ್ಯಾರ್ಥಿನಿಯ ಸ್ನೇಹಿತನ ಮುಂದೆಯೇ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ನಡೆದಿದೆ.

ಗೋಪಾಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪಂಥನಿವಾಸ್‌ನ ಹಿಂದಿನ ನಿರ್ಜನ ಪ್ರದೇಶದಲ್ಲಿ ಯುವಕರು ಅಪರಾಧ ಎಸಗಿದ್ದಾರೆ. ಗಂಜಾಂ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಬಾಲಕಿಯ ಮೇಲೆ ಸರದಿಯಂತೆ ಎರಡು ಗಂಟೆಗಳಿಗೂ ಹೆಚ್ಚು ಸಮಯ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಧೈರ್ಯ ತೋರಿಸಿದ ಅತ್ಯಾಚಾರ ಸಂತ್ರಸ್ತೆ ರಾತ್ರಿ 11 ಗಂಟೆಗೆ ದೂರು ನೀಡಲು ಗೋಪಾಲಪುರ ಪೊಲೀಸ್ ಠಾಣೆಗೆ ಹೋದರು. ಪೊಲೀಸರು ತ್ವರಿತವಾಗಿ ಕ್ರಮ ಕೈಗೊಂಡು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಎಂಟು ಆರೋಪಿಗಳನ್ನು ಬಂಧಿಸಿದರು, ಎಲ್ಲಾ ಶಂಕಿತ ಆರೋಪಿಗಳು 19 ರಿಂದ 23 ವರ್ಷ ವಯಸ್ಸಿನವರಾಗಿದ್ದು, ಹಿಂಜಿಲಿಗೆ ಸೇರಿದವರಾಗಿದ್ದಾರೆ.

ಸಂತ್ರಸ್ತೆ ತನ್ನ ಸಹಪಾಠಿಯೊಂದಿಗೆ ಸಂಜೆ 6.30 ರ ಸುಮಾರಿಗೆ ಬೀಚ್ ನಲ್ಲಿ ಕುಳಿತು ಮಾತನಾಡುತ್ತಿದ್ದಾಗ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಆರೋಪಿಗಳು ಕುಕೃತ್ಯ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ದೂರದಲ್ಲಿ ಕುಳಿತಿದ್ದ ಯುವಕರನ್ನು ಗಮನಿಸಿದರು. ಕತ್ತಲಾದ ನಂತರ, ಯುವಕರು ಹುಡುಗಿಯ ಸ್ನೇಹಿತನ ಮೇಲೆ ದಾಳಿ ಮಾಡಿ ಆತನನ್ನು ಬಂಧಿಸಿ ನಂತರ ಅವರಲ್ಲಿ ಮೂವರು ಹುಡುಗಿಯನ್ನು ಎಳೆದೊಯ್ದು ಅತ್ಯಾಚಾರವೆಸಗಲು ಆರಂಭಿಸಿದರು.

ಸಂತ್ರಸ್ತೆ ಎಷ್ಟೇ ಕೂಗಿಕೊಂಡರೂ, ಬೇಡಿಕೊಂಡರೂ ಬಿಡಲಿಲ್ಲ. ಅಪರಾಧ ಎಸಗಿ ಸ್ಥಳದಿಂದ ಪರಾರಿಯಾದರು, ನಂತರ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿ, ಏಳು ಮಂದಿ ಶಂಕಿತರನ್ನು ಬಂಧಿಸಿದರು. ನಂತರ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಯಿತು. ಹೆಚ್ಚಿನ ಆರೋಪಿಗಳು ಶಾಲೆ ಮತ್ತು ಕಾಲೇಜು ಬಿಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.

ಉಳಿದ ಇಬ್ಬರು ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಬೆರ್ಹಾಂಪುರ್ ಎಸ್ಪಿ ಸರವಣ ವಿವೇಕ್ ಎಂ ಹೇಳಿದ್ದಾರೆ. ಸಂತ್ರಸ್ತೆ ಮತ್ತು ಬಂಧಿತ ಎಂಟು ಯುವಕರನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆರ್ಹಾಂಪುರ್‌ನ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT