ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಭೈರೋ ಸಿಂಗ್ 
ದೇಶ

ಕಾಂಗ್ರೆಸ್'ನಲ್ಲೇ ಇದ್ದರೂ RSS ಪರ ಕೆಲಸ ಮಾಡುತ್ತೇನೆ: ಮಧ್ಯಪ್ರದೇಶ ಶಾಸಕ ಹೇಳಿಕೆ; 'ಕೈ'ಕಮಾಂಡ್ ಶಾಕ್!

ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದರೂ, ನಾನೂ ಕೂಡ ಆರ್‌ಎಸ್‌ಎಸ್ ಪರ ಕೆಲಸ ಮಾಡುತ್ತಿದ್ದೇನೆ. ಆರ್‌ಎಸ್‌ಎಸ್ ಜೊತೆ ನಂಟು ಹೊಂದಿದ್ದೇನೆ.

ಭೋಪಾಲ್: ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದರೂ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಪರವಾಗಿ ಕೆಲಸ ಮಾಡುತ್ತೇನೆಂದು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರೊಬ್ಬರು ಹೇಳಿಗೆ ನೀಡಿದ್ದು, ಈ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವನ್ನು ತಂದಿದೆ.

ಅಗರ್-ಮಾಲ್ವಾ ಜಿಲ್ಲೆಯ ಸುಸ್ನರ್ ಸ್ಥಾನದಿಂದ ಮೊದಲ ಬಾರಿಗೆ ಕಾಂಗ್ರೆಸ್ ಶಾಸಕರಾಗಿರುವ ಭೈರೋ ಸಿಂಗ್ ಅವರ ವೀಡಿಯೊವನ್ನು ರಾಜ್ಯ ಬಿಜೆಪಿ ವಕ್ತಾರ ಪಂಕಜ್ ಚತುರ್ವೇದಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಈ ವಿಡಿಯೋ ಸುಮಾರು 10 ದಿನಗಳ ಹಿಂದಿನದ್ದು ಎನ್ನಲಾಗಿದ್ದು, ಸೋಂಧಿಯಾ ಜಾತಿ ಮಹಾಸಭಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಭೈರೋ ಸಿಂಗ್ ಈ ಹೇಳಿಕೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

ವಿಡಿಯೋದಲ್ಲಿ ಸಿಂಗ್ ಅವರು, ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದರೂ, ನಾನೂ ಕೂಡ ಆರ್‌ಎಸ್‌ಎಸ್ ಪರ ಕೆಲಸ ಮಾಡುತ್ತಿದ್ದೇನೆ. ಆರ್‌ಎಸ್‌ಎಸ್ ಜೊತೆ ನಂಟು ಹೊಂದಿದ್ದೇನೆಂದು ಹೇಳಿದ್ದಾರೆ.

ಈ ವಿಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪಂಕಜ್ ಚತುರ್ವೇದಿ ಅವರು, ರಾಹುಲ್ ಗಾಂಧಿ, ನೀವು ಅನಗತ್ಯವಾಗಿ ಆರ್‌ಎಸ್‌ಎಸ್ ಅನ್ನು ಶಪಿಸುತ್ತೀರಿ. ನಿಮ್ಮ ಪಕ್ಷದ ಶಾಸಕ ಭೈರೋ ಸಿಂಗ್ ಅವರು ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿರುವುದಾಗಿ ಬಹಿರಂಗವಾಗಿ ಹೇಳಿದ್ದಾರೆ. ಈಗಲಾದರೂ ನೀವು ನಿದ್ರೆಯಿಂದ ಎಚ್ಚರಗೊಳ್ಳಬೇಕು. ನಿಮ್ಮ ಪಕ್ಷದಲ್ಲಿನ ಸ್ಲೀಪರ್ ಸೆಲ್‌ಗಳು, ಕುದುರೆಗಳನ್ನು ಹುಡುಕಬೇಡಿ. ನಿಮ್ಮ ಪಕ್ಷದಲ್ಲಿ ಅನೇಕ ಒಳ್ಳೆಯ ಜನರು ಇರಬಹುದು, ಹೌದು ಆ ಒಳ್ಳೆಯ ಜನರು ನಿಮ್ಮ ಹೃದಯದಲ್ಲಿ ಇಲ್ಲದಿರಬಹುದು ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಧ್ಯಪ್ರದೇಶ ರಾಜ್ಯ ಕಾಂಗ್ರೆಸ್ ವಕ್ತಾರ ಭೂಪೇಂದ್ರ ಗುಪ್ತಾ ಅವರು, ಶಾಸಕರು 'ಸಂಘ' ಎಂದರೆ ಆರ್‌ಎಸ್‌ಎಸ್ ಎಂದು ಹೇಳಿಲ್ಲ, ತಮ್ಮ ಸೋಂಧಿಯಾ ಸಮಾಜದ ಸಂಘದ ಕುರಿತು ಮಾತನಾಡಿದ್ದಾರೆ. ಆದರೆ, ಇದನ್ನೇ ಬಿಜೆಪಿ ದೊಡ್ಡದಾಗಿ ಬಿಂಬಿಸುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ