ಏರ್ ಇಂಡಿಯಾ ವಿಮಾನ ಪತನ 
ದೇಶ

Air India plane crash: ದುರಂತ ಸ್ಥಳದಲ್ಲಿ 70 ತೊಲ ಚಿನ್ನ, ನಗದು ಸಂಗ್ರಹಿಸಿ ಅಧಿಕಾರಿಗಳಿಗೆ ಹಸ್ತಾಂತರಿಸಿದ ಉದ್ಯಮಿ!

ರಾಜು ಪಟೇಲ್ ಅವರು ಸ್ಥಳಕ್ಕೆ ಆಗಮಿಸಿದಾಗ ಅಲ್ಲಿ ದಟ್ಟ ಹೊಗೆ ಆವರಿಸಿತ್ತು ಮತ್ತು ಬೆಂಕಿಯ ಜ್ವಾಲೆಯಲ್ಲಿ ಹಲವರು ಸಹಾಯಕ್ಕಾಗಿ ಕೂಗುತ್ತಿದ್ದರು.

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನ ಬಿ ಜೆ ವೈದ್ಯಕೀಯ ಕಾಲೇಜಿಗೆ ಏರ್ ಇಂಡಿಯಾ ವಿಮಾನ ಅಪ್ಪಳಿಸಿದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ 56 ವರ್ಷದ ನಿರ್ಮಾಣ ಉದ್ಯಮಿ ರಾಜು ಪಟೇಲ್ ಅವರು ಯಾವುದೇ ಹಿಂಜರಿಕೆ ಇಲ್ಲದೆ ರಕ್ಷಣಾ ಕಾರ್ಯಾಚರಣೆಗೆ ನೆರವಾದರು.

ರಾಜು ಪಟೇಲ್ ಅವರು ಸ್ಥಳಕ್ಕೆ ಆಗಮಿಸಿದಾಗ ಅಲ್ಲಿ ದಟ್ಟ ಹೊಗೆ ಆವರಿಸಿತ್ತು ಮತ್ತು ಬೆಂಕಿಯ ಜ್ವಾಲೆಯಲ್ಲಿ ಹಲವರು ಸಹಾಯಕ್ಕಾಗಿ ಕೂಗುತ್ತಿದ್ದರು.

ಬೆಂಕಿ ಜ್ವಾಲೆ ಮತ್ತು ಹೊಗೆಯ ನಡುವೆ ರಾಜು ಅವರು ಗಾಯಾಳುಗಳನ್ನು ಸ್ಥಳಾಂತರಿಸಲು ಸಹಾಯ ಮಾಡಿದರು. ನಂತರ ಅವಶೇಷಗಳಲ್ಲಿದ್ದ ಚಿನ್ನದ ಆಭರಣ, ನಗದು ಹಾಗೂ ಇತರೆ ದಾಖಲೆಗಳಿಗಾಗಿ ಶೋಧಿಸುವ ಕೆಲಸ ಮಾಡಿದರು ಮತ್ತು ಅದನ್ನು ತನಿಖಾ ಅಧಿಕಾರಿಗಳಿಗೆ ಹಸ್ತಾಂತರಿಸಿದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

"ಮೊದಲ 15 ರಿಂದ 20 ನಿಮಿಷಗಳ ಕಾಲ, ನಾವು ಹತ್ತಿರ ಬರಲು ಸಾಧ್ಯವಾಗಲಿಲ್ಲ. ಬೆಂಕಿ ತುಂಬಾ ತೀವ್ರವಾಗಿತ್ತು. ಆದರೆ ಅಗ್ನಿಶಾಮಕ ದಳ, ನಂತರ 108 ಆಂಬ್ಯುಲೆನ್ಸ್‌ಗಳು ಬಂದ ನಂತರ, ನಾವು ಸಹಾಯ ಮಾಡಲು ಧಾವಿಸಿದೆವು" ಎಂದು 56 ವರ್ಷದ ರಾಜು ಅವರು ನೆನಪಿಸಿಕೊಂಡಿದ್ದಾರೆ. ಅಲ್ಲದೆ ಸ್ಥಳದಲ್ಲಿ ಯಾವುದೇ ಸ್ಟ್ರೆಚರ್‌ಗಳು ಕಾಣಿಸದ ಕಾರಣ, ಗಾಯಾಳುಗಳನ್ನು ಆಂಬ್ಯುಲೆನ್ಸ್‌ಗಳಿಗೆ ಸಾಗಿಸಲು ಸೀರೆ ಮತ್ತು ಬೆಡ್‌ಶೀಟ್‌ಗಳನ್ನು ಬಳಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಸಂಜೆ 4 ಗಂಟೆಯ ಹೊತ್ತಿಗೆ ರಕ್ಷಣಾ ಕಾರ್ಯ ಬಹುತೇಕ ಪೂರ್ಣಗೊಂಡ ನಂತರ, ರಾಜು ಪಟೇಲ್ ಮತ್ತು ಅವರ ತಂಡವು ಮತ್ತೊಂದು ನಿರ್ಣಾಯಕ ಕಾರ್ಯಕ್ಕೆ ಕೈಹಾಕಿತು. ಅವರು ಎಲ್ಲೆಡೆ ಹರಡಿಕೊಂಡಿದ್ದ ಸುಟ್ಟ ಚೀಲಗಳನ್ನು ಶೋಧಿಸಲು ಆರಂಭಿಸಿದರು. ಈ ವೇಳೆ "ಬಳೆಗಳು ಮತ್ತು ಇತರ ಆಭರಣಗಳ ಜೊತೆಗೆ ಪೆಟ್ಟಿಗೆಗಳಲ್ಲಿ 70 ತೊಲ ಚಿನ್ನದ ಆಭರಣಗಳು ಸಿಕ್ಕಿವೆ. ಚೀಲಗಳಿಂದ ನಮಗೆ 80,000 ರೂ. ನಗದು, ಭಗವದ್ಗೀತೆಯ ಪ್ರತಿ ಮತ್ತು ಪಾಸ್‌ಪೋರ್ಟ್‌ಗಳು ಸಹ ಸಿಕ್ಕಿದ್ದು, ಅವುಗಳನ್ನು ಅಧಿಕಾರಿಗಳಿಗೆ ಒಪ್ಪಿಸಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ