ಸಾಂದರ್ಭಿಕ ಚಿತ್ರ 
ದೇಶ

ಆಂಧ್ರ ಪೊಲೀಸರ ಎನ್‌ಕೌಂಟರ್‌ಗೆ ಕೇಂದ್ರ ಸಮಿತಿ ಸದಸ್ಯ ಸೇರಿ ಮೂವರು ನಕ್ಸಲರು ಬಲಿ

ಪೊಲೀಸ್ ಮೂಲಗಳ ಪ್ರಕಾರ, ರಂಪಚೋಡವರಂ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಈ ಎನ್ಕೌಂಟರ್ ನಡೆದಿದೆ.

ವಿಶಾಖಪಟ್ಟಣಂ: ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿ ಅರಣ್ಯ ಪ್ರದೇಶದ ಅಕೂರು ಗ್ರಾಮದ ಬಳಿ ಬುಧವಾರ ಬೆಳಗ್ಗೆ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ(ಮಾವೋವಾದಿ) ಕೇಂದ್ರ ಸಮಿತಿಯ ಹಿರಿಯ ಸದಸ್ಯ ಸೇರಿದಂತೆ ಮೂವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ರಂಪಚೋಡವರಂ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಈ ಎನ್ಕೌಂಟರ್ ನಡೆದಿದೆ.

ಮೃತ ಮಾವೋವಾದಿಗಳನ್ನು ಸಿಪಿಐ(ಮಾವೋವಾದಿ) ಕೇಂದ್ರ ಸಮಿತಿ ಸದಸ್ಯ ಮತ್ತು ಆಂಧ್ರ ಒಡಿಶಾ ಗಡಿ ವಿಶೇಷ ವಲಯ ಸಮಿತಿ(ಎಒಬಿಎಸ್‌ಜೆಡ್‌ಸಿ) ಕಾರ್ಯದರ್ಶಿ ಗಜರ್ಲಾ ರವಿ ಅಲಿಯಾಸ್ ಉದಯ್ ಮತ್ತು ಇತ್ತೀಚೆಗೆ ಛತ್ತೀಸ್‌ಗಢದಲ್ಲಿ ಕೊಲ್ಲಲ್ಪಟ್ಟ ಕೇಂದ್ರ ಸಮಿತಿ ಸದಸ್ಯ ಚಲಪತಿ ಅವರ ಪತ್ನಿ, ದಕ್ಷಿಣ ವಲಯ ಸಮಿತಿ ಸದಸ್ಯೆ ಅರುಣಾ ಹಾಗೂ ಮತ್ತು ಇನ್ನೊಬ್ಬ ಸದಸ್ಯ ಎಂದು ಗುರುತಿಸಲಾಗಿದೆ.

ಆರಂಭಿಕ ವರದಿಗಳ ಪ್ರಕಾರ, ಭದ್ರತಾ ಪಡೆಗಳು ಎನ್‌ಕೌಂಟರ್ ಸ್ಥಳದಿಂದ ಮೂರು ಎಕೆ -47 ರೈಫಲ್‌ಗಳನ್ನು ವಶಪಡಿಸಿಕೊಂಡಿವೆ. ಪೊಲೀಸ್ ಸಿಬ್ಬಂದಿಗೆ ಯಾವುದೇ ಗಾಯಗಳಾದ ಬಗ್ಗೆ ಅಥವಾ ಸಾವುನೋವುಗಳು ವರದಿಯಾಗಿಲ್ಲ.

ಸ್ಥಳದಿಂದ ಶವಗಳನ್ನು ಹೊರತೆಗೆಯುವ ಪ್ರಯತ್ನಗಳು ನಡೆಯುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT