ಸಾಂದರ್ಭಿಕ ಚಿತ್ರ 
ದೇಶ

ಆಂಧ್ರ ಪೊಲೀಸರ ಎನ್‌ಕೌಂಟರ್‌ಗೆ ಕೇಂದ್ರ ಸಮಿತಿ ಸದಸ್ಯ ಸೇರಿ ಮೂವರು ನಕ್ಸಲರು ಬಲಿ

ಪೊಲೀಸ್ ಮೂಲಗಳ ಪ್ರಕಾರ, ರಂಪಚೋಡವರಂ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಈ ಎನ್ಕೌಂಟರ್ ನಡೆದಿದೆ.

ವಿಶಾಖಪಟ್ಟಣಂ: ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿ ಅರಣ್ಯ ಪ್ರದೇಶದ ಅಕೂರು ಗ್ರಾಮದ ಬಳಿ ಬುಧವಾರ ಬೆಳಗ್ಗೆ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ(ಮಾವೋವಾದಿ) ಕೇಂದ್ರ ಸಮಿತಿಯ ಹಿರಿಯ ಸದಸ್ಯ ಸೇರಿದಂತೆ ಮೂವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ರಂಪಚೋಡವರಂ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಈ ಎನ್ಕೌಂಟರ್ ನಡೆದಿದೆ.

ಮೃತ ಮಾವೋವಾದಿಗಳನ್ನು ಸಿಪಿಐ(ಮಾವೋವಾದಿ) ಕೇಂದ್ರ ಸಮಿತಿ ಸದಸ್ಯ ಮತ್ತು ಆಂಧ್ರ ಒಡಿಶಾ ಗಡಿ ವಿಶೇಷ ವಲಯ ಸಮಿತಿ(ಎಒಬಿಎಸ್‌ಜೆಡ್‌ಸಿ) ಕಾರ್ಯದರ್ಶಿ ಗಜರ್ಲಾ ರವಿ ಅಲಿಯಾಸ್ ಉದಯ್ ಮತ್ತು ಇತ್ತೀಚೆಗೆ ಛತ್ತೀಸ್‌ಗಢದಲ್ಲಿ ಕೊಲ್ಲಲ್ಪಟ್ಟ ಕೇಂದ್ರ ಸಮಿತಿ ಸದಸ್ಯ ಚಲಪತಿ ಅವರ ಪತ್ನಿ, ದಕ್ಷಿಣ ವಲಯ ಸಮಿತಿ ಸದಸ್ಯೆ ಅರುಣಾ ಹಾಗೂ ಮತ್ತು ಇನ್ನೊಬ್ಬ ಸದಸ್ಯ ಎಂದು ಗುರುತಿಸಲಾಗಿದೆ.

ಆರಂಭಿಕ ವರದಿಗಳ ಪ್ರಕಾರ, ಭದ್ರತಾ ಪಡೆಗಳು ಎನ್‌ಕೌಂಟರ್ ಸ್ಥಳದಿಂದ ಮೂರು ಎಕೆ -47 ರೈಫಲ್‌ಗಳನ್ನು ವಶಪಡಿಸಿಕೊಂಡಿವೆ. ಪೊಲೀಸ್ ಸಿಬ್ಬಂದಿಗೆ ಯಾವುದೇ ಗಾಯಗಳಾದ ಬಗ್ಗೆ ಅಥವಾ ಸಾವುನೋವುಗಳು ವರದಿಯಾಗಿಲ್ಲ.

ಸ್ಥಳದಿಂದ ಶವಗಳನ್ನು ಹೊರತೆಗೆಯುವ ಪ್ರಯತ್ನಗಳು ನಡೆಯುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!