ಏರ್‌ ಇಂಡಿಯಾ ವಿಮಾನ 
ದೇಶ

ಅಹಮದಾಬಾದ್ ವಿಮಾನ ದುರಂತ: ಏರ್‌ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಶೇ.15 ರಷ್ಟು ಕಡಿತ

ಹೆಚ್ಚುವರಿ ಸುರಕ್ಷತಾ ತಪಾಸಣೆ ದೃಷ್ಟಿಯಿಂದ ದೊಡ್ಡ ಗಾತ್ರದ ಕೆಲವು ವಿಮಾನಗಳ ಹಾರಾಟವನ್ನು ಕಡಿಮೆ ಮಾಡಲಾಗಿದೆ. ಕಳೆದ 6 ದಿನಗಳಲ್ಲಿ 83 ಅಂತರರಾಷ್ಟ್ರೀಯ ವಿಮಾನ ಹಾರಾಟವನ್ನು ರದ್ದುಪಡಿಸಲಾಗಿದೆ.

ಮುಂಬೈ: ಅಹಮದಾಬಾದ್‌ ವಿಮಾನ ದುರಂತದ ಬೆನಲ್ಲೇ ಏರ್‌ಇಂಡಿಯಾವು ಬೋಯಿಂಗ್‌ ಡ್ರೀಮ್‌ಲೈನರ್‌ ಸೇರಿದಂತೆ ಕೆಲವು ದೊಡ್ಡ ಗಾತ್ರದ, ಅಂತರರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಶೇ 15ರಷ್ಟು ಕಡಿತಗೊಳಿಸಿದೆ.

ಈ ನಿರ್ಧಾರ ಈಗಿನಿಂದಲೇ ಜಾರಿಗೆ ಬರಲಿದ್ದು, ಜುಲೈ ಮಧ್ಯದವರೆಗೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿವೆ.

ಏರ್ ಇಂಡಿಯಾ ಎದುರಿಸುತ್ತಿರುವ ಸಂಕೀರ್ಣ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಕಾರ್ಯಾಚರಣೆಗಳ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಉತ್ತಮ ದಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರಯಾಣಿಕರಿಗೆ ಅನಾನುಕೂಲತೆಯನ್ನು ಕಡಿಮೆ ಮಾಡಲು, ಮುಂದಿನ ಕೆಲವು ವಾರಗಳವರೆಗೆ ದೊಡ್ಡ ಗಾತ್ರದ ವಿಮಾನಗಳಲ್ಲಿ ಅಂತರರಾಷ್ಟ್ರೀಯ ಸೇವೆಗಳನ್ನು ಶೇ.15 ರಷ್ಟು ಕಡಿಮೆ ಮಾಡಲು ನಿರ್ಧರಿಸಲಾಗಿದೆ ಎಂದು ಏರ್ ಇಂಡಿಯಾ ಹೇಳಿದೆ.

ಹೆಚ್ಚುವರಿ ಸುರಕ್ಷತಾ ತಪಾಸಣೆ ದೃಷ್ಟಿಯಿಂದ ದೊಡ್ಡ ಗಾತ್ರದ ಕೆಲವು ವಿಮಾನಗಳ ಹಾರಾಟವನ್ನು ಕಡಿಮೆ ಮಾಡಲಾಗಿದೆ. ಕಳೆದ 6 ದಿನಗಳಲ್ಲಿ 83 ಅಂತರರಾಷ್ಟ್ರೀಯ ವಿಮಾನ ಹಾರಾಟವನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ಬೋಯಿಂಗ್ 787 ಡ್ರೀಮ್‌ಲೈನರ್ (ವಿಮಾನ ಸಂಖ್ಯೆ AI171) ವಿಮಾನ ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಅಪಘಾತಕ್ಕೀಡಾಗಿತ್ತು. ಘಟನೆ ನಡೆದು ಒಂದು ವಾರದ ನಂತರ ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯು ಈ ನಿರ್ಧಾರಕ್ಕೆ ಬಂದಿದೆ.

ಕಳೆದ ಆರು ದಿನಗಳಲ್ಲಿ ಅಂತರರಾಷ್ಟ್ರೀಯ ಕಾರ್ಯಾಚರಣೆಗಳಲ್ಲಿನ ಅಡಚಣೆಗಳಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

ಈ ಕಡಿತಗಳಿಂದ ತೊಂದರೆಗೊಳಗಾದ ಪ್ರಯಾಣಿಕರಿಗೆ ಏರ್ ಇಂಡಿಯಾ ಕ್ಷಮೆಯಾಚಿಸುತ್ತದೆ ಮತ್ತು ಅವರಿಗೆ ಮುಂಚಿತವಾಗಿ ತಿಳಿಸುತ್ತದೆ. ಪರ್ಯಾಯ ವಿಮಾನಗಳಲ್ಲಿ ಅವರಿಗೆ ಅವಕಾಶ ಕಲ್ಪಿಸಲು ನಾವು ನಮ್ಮ ಅತ್ಯುತ್ತಮ ಪ್ರಯತ್ನಗಳನ್ನು ಮಾಡುತ್ತೇವೆ. ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ತಮ್ಮ ಪ್ರಯಾಣವನ್ನು ಮರುಹೊಂದಿಸಲು ಅಥವಾ ಅವರ ಆಯ್ಕೆಯ ಪ್ರಕಾರ ಪೂರ್ಣ ಮರುಪಾವತಿಯನ್ನು ಪಡೆಯುವ ಆಯ್ಕೆಯನ್ನೂ ಕೂಡ ನೀಡಲಾಗುವುದು. ಜೂನ್ 20, 2025 ರಿಂದ ಜಾರಿಗೆ ಬರುವ ನಮ್ಮ ಅಂತರರಾಷ್ಟ್ರೀಯ ಸೇವೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT