ಅಪಘಾತಕ್ಕೀಡಾದ ಬೊಲೆರೊ 
ದೇಶ

ಜಾರ್ಖಂಡ್: ಬೊಲೆರೊ-ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 9 ಮಂದಿ ಸಾವು

ಇಂದು ಬೆಳಗ್ಗೆ ಜಾರ್ಖಂಡ್-ಪಶ್ಚಿಮ ಬಂಗಾಳ ಗಡಿಯಲ್ಲಿ ಈ ಅಪಘಾತ ನಡೆದಿದ್ದು, ಬೊಲೆರೊದಲ್ಲಿದ್ದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

ರಾಂಚಿ: ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿ ಶುಕ್ರವಾರ ಮದುವೆ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಬೊಲೆರೊ ವಾಹನ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂಬತ್ತು ಜನ ಸಾವನ್ನಪ್ಪಿದ್ದಾರೆ.

ಇಂದು ಬೆಳಗ್ಗೆ ಜಾರ್ಖಂಡ್-ಪಶ್ಚಿಮ ಬಂಗಾಳ ಗಡಿಯಲ್ಲಿ ಈ ಅಪಘಾತ ನಡೆದಿದ್ದು, ಬೊಲೆರೊದಲ್ಲಿದ್ದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ನೀಮ್ದಿಹ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಸಂತನ್ ತಿವಾರಿ ಅವರು ತಿಳಿಸಿದ್ದಾರೆ.

ಜಾರ್ಖಂಡ್‌ನ ಸೆರೈಕೆಲಾ-ಖರ್ಸವಾನ್ ಜಿಲ್ಲೆಯ ಚಾಂಡಿಲ್ ಉಪವಿಭಾಗದ ಗಡಿಯಲ್ಲಿರುವ ಪಶ್ಚಿಮ ಬಂಗಾಳದ ಬಲರಾಂಪುರ ಪೊಲೀಸ್ ಠಾಣೆ ಪ್ರದೇಶದ ನಾಮ್ಶೋಲ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹೀಂದ್ರಾ ಬೊಲೆರೊದಲ್ಲಿ ಪ್ರಯಾಣಿಸುತ್ತಿದ್ದ ಒಂಬತ್ತು ಜನ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಮದುವೆ ಸಮಾರಂಭದಲ್ಲಿ ಭಾಗವಹಿಸಿದ ಹಿಂತಿರುಗುತ್ತಿದ್ದರು ಎಂದು ತಿವಾರಿ ಹೇಳಿದ್ದಾರೆ.

ಡಿಕ್ಕಿಯ ರಭಸಕ್ಕೆ ಟ್ರಕ್​ ಭತ್ತದ ಗದ್ದೆಗೆ ನುಗ್ಗಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಒಂಬತ್ತೂ ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಎಲ್ಲರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪುರುಲಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಸ್ಥಳೀಯರು ಹೇಳುವಂತೆ ಟ್ರಕ್ ಅತಿ ವೇಗದಲ್ಲಿ ಚಲಿಸುತ್ತಿತ್ತು ಮತ್ತು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ, ಬಲರಾಂಪುರ ಮತ್ತು ಚಾಂಡಿಲ್ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ನಜ್ಜುಗುಜ್ಜಾದ ವಾಹನದಿಂದ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಮತ್ತು ಪ್ರಸ್ತುತ ಚಾಲಕನ ಪತ್ತೆಗೆ ಹುಡುಕಾಟ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT