ಏರ್ ಇಂಡಿಯಾ  
ದೇಶ

ಪ್ರಯಾಣಿಕರೇ ಗಮನಿಸಿ: ಎಂಟು Air India ವಿಮಾನಗಳ ಹಾರಾಟ ರದ್ದು, ಇಲ್ಲಿದೆ ಮಾಹಿತಿ...!

ಜೂನ್ 12 ರಂದು 270 ಜನರ ಸಾವಿಗೆ ಕಾರಣವಾದ ಡ್ರೀಮ್ಲೈನರ್ನ ವಿಮಾನ ಅಪಘಾತದ ನಂತರ ನಿಯಂತ್ರಕ ಪರಿಶೀಲನೆ ಮತ್ತು ನಡೆಯುತ್ತಿರುವ ಸುರಕ್ಷತಾ ಪರಿಶೀಲನೆಗಳ ಹಿನ್ನೆಲೆಯಲ್ಲಿ ಈ ವಿಮಾನಗಳ ಹಾರಾಟ ರದ್ದಾಗಿದೆ.

ನವದೆಹಲಿ: ನಿರ್ವಹಣೆ ಮತ್ತು ಕಾರ್ಯಾಚರಣೆಯ ಕಾರಣಗಳನ್ನು ನೀಡಿರುವ ಏರ್ ಇಂಡಿಯಾ ಶುಕ್ರವಾರ ಕನಿಷ್ಠ ಎಂಟು ಅಂತರರಾಷ್ಟ್ರೀಯ ಹಾಗೂ ದೇಶೀಯ ವಿಮಾನಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಿದೆ.

ಜೂನ್ 12 ರಂದು 270 ಜನರ ಸಾವಿಗೆ ಕಾರಣವಾದ ಡ್ರೀಮ್ಲೈನರ್ನ ವಿಮಾನ ಅಪಘಾತದ ನಂತರ ನಿಯಂತ್ರಕ ಪರಿಶೀಲನೆ ಮತ್ತು ನಡೆಯುತ್ತಿರುವ ಸುರಕ್ಷತಾ ಪರಿಶೀಲನೆಗಳ ಹಿನ್ನೆಲೆಯಲ್ಲಿ ಈ ವಿಮಾನಗಳ ಹಾರಾಟ ರದ್ದಾಗಿದೆ.

ಅಂತರರಾಷ್ಟ್ರೀಯ ವಿಮಾನ

  • AI906 (ದುಬೈ-ಚೆನ್ನೈ)

  • AI308 (ದೆಹಲಿ-ಮೆಲ್ಬೋರ್ನ್)

  • AI309 (ಮೆಲ್ಬೋರ್ನ್-ದೆಹಲಿ)

  • AI2204 (ದುಬೈ-ಹೈದರಾಬಾದ್)

ದೇಶೀಯ ವಿಮಾನ

  • AI874 (ಪುಣೆ-ದೆಹಲಿಗೆ)

  • AI456 (ಅಹಮದಾಬಾದ್-ದೆಹಲಿಗೆ)

  • AI2872 (ಹೈದರಾಬಾದ್-ಮುಂಬೈಗೆ)

  • AI571 (ಚೆನ್ನೈ-ಮುಂಬೈಗೆ)

ಈ ವಿಮಾನಗಳ ಕಾರ್ಯಾಚರಣೆಯನ್ನು ರದ್ದುಗೊಂಡಿವೆ. ತೊಂದರೆಗೊಳಗಾದ ಪ್ರಯಾಣಿಕರಲ್ಲಿ ಏರ್ ಇಂಡಿಯಾ ಕ್ಷಮೆಯಾಚಿಸಿದ್ದು, ವಿಮಾನಗಳು, ಉಚಿತ ಮರು-ವೇಳಾಪಟ್ಟಿ ಮತ್ತು ಪೂರ್ಣ ಮರುಪಾವತಿಯಂತಹ ಆಯ್ಕೆಗಳನ್ನು ಒದಗಿಸುತ್ತಿದೆ ಎಂದು ಹೇಳಿದೆ.

ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಯನ್ನು ಅರಿಯಲು http://airindia.com/in/en/manage/flight-status.html ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು ಅಥವಾ 011 69329333, 011 69329999 ಈ ಗ್ರಾಹಕ ಸೇವಾ ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ. http://airindia.com ಗೆ ಭೇಟಿ ನೀಡಬಹುದಾಗಿದೆ ಎಂದು ತಿಳಿಸಿದೆ.

ಇದಕ್ಕೂ ಮೊದಲು, ಏರ್ ಇಂಡಿಯಾ ತನ್ನ ವೈಡ್-ಬಾಡಿ ವಿಮಾನಗಳ ಹಾರಾಟದಲ್ಲಿ ಶೇಕಡಾ 15 ರಷ್ಟು ಕಡಿತವನ್ನು ಘೋಷಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹತ್ಯೆಗೆ ಸಂಚು ರೂಪಿಸಿದರೆ ಇರಾನ್ 'ಈ ಭೂಮಿ ಮೇಲಿಂದ ನಾಶವಾಗುತ್ತದೆ': Donal Trump

ಧಾರವಾಡ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ; ಶವ ಬಿಸಾಡಿ ಹೋದ ದುಷ್ಕರ್ಮಿಗಳು!

ಸನಾತನ ಧರ್ಮ ಕುರಿತ ಉದಯನಿಧಿ ಹೇಳಿಕೆ ದ್ವೇಷ ಭಾಷಣಕ್ಕೆ ಸಮ: ಹಿಂದೂ ಧರ್ಮದ ಮೇಲಿನ ಸ್ಪಷ್ಟ ದಾಳಿ; ಮದ್ರಾಸ್ ಹೈಕೋರ್ಟ್ ತಪರಾಕಿ

ಯುಪಿಐ ಟಿಕೆಟ್ ಸ್ಕ್ಯಾನರ್ ದುರುಪಯೋಗ: ಮೂವರು ನಿರ್ವಾಹಕರನ್ನು ಅಮಾನತುಗೊಳಿಸಿದ BMTC

"ಹಣಕಾಸು ಯೋಜನೆಗಳನ್ನು ಉತ್ತೇಜಿಸಲು ನನ್ನ ಇಮೇಜ್, ಧ್ವನಿ ಬಳಸಿ ನಕಲಿ ವಿಡಿಯೋ, ನಂಬಬೇಡಿ"; ಸುಧಾ ಮೂರ್ತಿ ಸ್ಪಷ್ಟನೆ

SCROLL FOR NEXT