ಅಹಮದಾಬಾದ್ ಸಿವಿಲ್ ಆಸ್ಪತ್ರೆ 
ದೇಶ

Air India crash: 247 ಜನರ ಗುರುತು ಪತ್ತೆ, 232 ಮೃತದೇಹ ಹಸ್ತಾಂತರ

ಮೃತ ದೇಹಗಳನ್ನು ಗುರುತಿಸುವ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು, ಜೂನ್ 21 ರಂದು ಸಂಜೆ 6 ಗಂಟೆಯ ಹೊತ್ತಿಗೆ, 247 ಮೃತ ವ್ಯಕ್ತಿಗಳ ಡಿಎನ್‌ಎ ಹೊಂದಾಣಿಕೆ ದೃಢಪಟ್ಟಿದೆ.

ಅಹಮದಾಬಾದ್: ದೇಶವನ್ನೇ ಬೆಚ್ಚಿಬೀಳಿಸಿದ ಭೀಕರ ಏರ್ ಇಂಡಿಯಾ ವಿಮಾನ ದುರಂತ ಸಂಭವಿಸಿ 9 ದಿನಗಳ ನಂತರ, ಡಿಎನ್‌ಎ ಹೊಂದಾಣಿಕೆಯ ಮೂಲಕ ಇದುವರೆಗೆ 147 ಜನರನ್ನು ಗುರುತಿಸಲಾಗಿದೆ ಮತ್ತು 232 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಮೃತ ದೇಹಗಳನ್ನು ಗುರುತಿಸುವ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು, ಜೂನ್ 21 ರಂದು ಸಂಜೆ 6 ಗಂಟೆಯ ಹೊತ್ತಿಗೆ, 247 ಮೃತ ವ್ಯಕ್ತಿಗಳ ಡಿಎನ್‌ಎ ಹೊಂದಾಣಿಕೆ ದೃಢಪಟ್ಟಿದೆ. ಈ ಪೈಕಿ 232 ಶವಗಳನ್ನು ಈಗಾಗಲೇ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

23 ಶವಗಳನ್ನು ವಿಮಾನದ ಮೂಲಕ ಕಳುಹಿಸಲಾಗಿದೆ ಮತ್ತು 209 ಶವಗಳನ್ನು ಆಂಬ್ಯುಲೆನ್ಸ್ ಮೂಲಕ ಸ್ವಗ್ರಾಮಗಳಿಗೆ ಕರೆದೊಯ್ಯಲಾಗಿದೆ.

ಶೀಘ್ರದಲ್ಲೇ ಉಳಿದ ಶವಗಳನ್ನು ಅವರ ಪ್ರೀತಿಪಾತ್ರರಿಗೆ ಹಸ್ತಾಂತರಿಸಲಾಗುವುದು. ಇನ್ನು 12 ಕುಟುಂಬಗಳು ನಂತರದ ಸಮಯದಲ್ಲಿ ಶವಗಳನ್ನು ಪಡೆಯಲು ಆಯ್ಕೆ ಮಾಡಿಕೊಂಡಿವೆ. ಹೆಚ್ಚುವರಿಯಾಗಿ ಮೂರು ಕುಟುಂಬಗಳು ಡಿಎನ್‌ಎ ವಿಶ್ಲೇಷಣೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜೂನ್ 12 ರಂದು ಮಧ್ಯಾಹ್ನ 1.39ಕ್ಕೆ 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

ಮಹಾ ಅಚ್ಚರಿ: ಶರದ್ ಪವಾರ್ ಪುತ್ರಿ ಸುಪ್ರಿಯ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್!

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ, ಪುನರ್ ಪರಿಶೀಲನೆಗೆ ಒತ್ತಾಯ

'ರಾಜಕೀಯ ದ್ವೇಷ, ಪೊಲೀಸರ ವೈಫಲ್ಯ' ಬಳ್ಳಾರಿ ಹಿಂಸಾಚಾರ ಘಟನೆಗೆ ಕಾರಣ: ಕಾಂಗ್ರೆಸ್ ಸಮಿತಿ

SCROLL FOR NEXT