ಭಾರತೀಯ ವಿದ್ಯಾರ್ಥಿಗಳ ಹೊತ್ತು ದೆಹಲಿಗೆ ಬಂದಿಳಿದ ವಿಶೇಷ ವಿಮಾನ ANI
ದೇಶ

Iran vs Israel War: ವಾಯುಪ್ರದೇಶ ತೆರೆದ ಇರಾನ್; 290 ಭಾರತೀಯ ವಿದ್ಯಾರ್ಥಿಗಳ ಹೊತ್ತ ವಿಶೇಷ ವಿಮಾನ ದೆಹಲಿಗೆ ಆಗಮನ!

ಸಂಘರ್ಷ ಪೀಡಿತ ಇರಾನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಕರೆದೊಯ್ಯುವ ಮೂರು ಚಾರ್ಟರ್ಡ್ ಸ್ಥಳಾಂತರಿಸುವ ವಿಮಾನಗಳ ಪೈಕಿ ಮೊದಲನೆಯದು ಭಾರತದ ಆಪರೇಷನ್ ಸಿಂಧು ರಕ್ಷಣಾ ಪ್ರಯತ್ನದ ಭಾಗವಾಗಿ ಶುಕ್ರವಾರ ತಡರಾತ್ರಿ ದೆಹಲಿಯಲ್ಲಿ ಸುರಕ್ಷಿತವಾಗಿ ಬಂದಿಳಿದಿದೆ.

ನವದೆಹಲಿ: ಸಂಘರ್ಷ ಪೀಡಿತ ಇರಾನ್ ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ರವಾನೆಗೆ ಸ್ಪಂದಿಸಿರುವ ಇರಾನ್ ಸರ್ಕಾರ ತನ್ನ ವಾಯುಪ್ರದೇಶ ತೆರೆದಿದ್ದು ಪರಿಣಾಮ ಇರಾನ್ ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳ ಹೊತ್ತ ವಿಶೇಷ ವಿಮಾನ ಇಂದು ದೆಹಲಿಗೆ ಬಂದಿಳಿದೆ.

ಸಂಘರ್ಷ ಪೀಡಿತ ಇರಾನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಕರೆದೊಯ್ಯುವ ಮೂರು ಚಾರ್ಟರ್ಡ್ ಸ್ಥಳಾಂತರಿಸುವ ವಿಮಾನಗಳ ಪೈಕಿ ಮೊದಲನೆಯದು ಭಾರತದ ಆಪರೇಷನ್ ಸಿಂಧು ರಕ್ಷಣಾ ಪ್ರಯತ್ನದ ಭಾಗವಾಗಿ ಶುಕ್ರವಾರ ತಡರಾತ್ರಿ ದೆಹಲಿಯಲ್ಲಿ ಸುರಕ್ಷಿತವಾಗಿ ಬಂದಿಳಿದಿದೆ.

ಮಹಾನ್ ಏರ್ ನಿರ್ವಹಿಸುವ ಈ ವಿಮಾನವು ರಾತ್ರಿ 11.40 ರ ಸುಮಾರಿಗೆ 290 ಭಾರತೀಯ ಪ್ರಜೆಗಳೊಂದಿಗೆ ಬಂದಿಳಿದಿದೆ, ಅವರಲ್ಲಿ ಹೆಚ್ಚಿನವರು ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಭಾರತದ 'ಆಪರೇಷನ್ ಸಿಂಧು' ಗಾಗಿ ಇರಾನ್ ತನ್ನ ವಾಯುಪ್ರದೇಶದ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ತೆಗೆದುಹಾಕಿದೆ. ಸುಮಾರು 1,000 ಭಾರತೀಯರನ್ನು ಸ್ಥಳಾಂತರಿಸಲು ಮೂರು ವಿಮಾನಗಳಿಗೆ ಇರಾನ್ ದೇಶವು ತನ್ನ ವಾಯುಪ್ರದೇಶವನ್ನು ತೆರೆದಿದ್ದು, ಮೂರು ವಿಮಾನಗಳಲ್ಲಿ ಭಾರತೀಯರನ್ನು ಭಾರತಕ್ಕೆ ಸ್ಥಳಾಂತರಿಸುವ ಕಾರ್ಯಾಚರಣೆ ಚಾಲ್ತಿಯಲ್ಲಿದೆ. ಈ ಪೈಕಿ ಜಮ್ಮು ಮತ್ತು ಕಾಶ್ಮೀರದ 290 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಶುಕ್ರವಾರ ತಡರಾತ್ರಿ ದೆಹಲಿಗೆ ಬಂದಿಳಿದಿದೆ.

ಆಪರೇಷನ್ ಸಿಂಧು

ಇರಾನ್ ಮತ್ತು ಇಸ್ರೇಲ್ ನಡುವಿನ ಹಗೆತನ ತೀವ್ರಗೊಳ್ಳುತ್ತಿರುವಾಗ ಇರಾನ್‌ನಲ್ಲಿ ಸಿಲುಕಿರುವ ಸುಮಾರು 1,000 ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಈ ವಾರದ ಆರಂಭದಲ್ಲಿ ಆಪರೇಷನ್ ಸಿಂಧುವನ್ನು ಪ್ರಾರಂಭಿಸಲಾಯಿತು.

ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಇರಾನ್ ಸರ್ಕಾರದ ಸಮನ್ವಯದೊಂದಿಗೆ ಟೆಹ್ರಾನ್‌ನಿಂದ ವಿದ್ಯಾರ್ಥಿಗಳನ್ನು ಕೋಮ್ ಮತ್ತು ಮಷಾದ್‌ನಂತಹ ಸುರಕ್ಷಿತ ನಗರಗಳಿಗೆ ಸ್ಥಳಾಂತರಿಸಲು ಅನುಕೂಲ ಮಾಡಿಕೊಟ್ಟಿತು, ಅಲ್ಲಿಂದ ಅವರನ್ನು ಭಾರತಕ್ಕೆ ಹಿಂತಿರುಗಿಸಲಾಗುತ್ತಿದೆ.

ಶನಿವಾರ ಇನ್ನೂ ಎರಡು ಸ್ಥಳಾಂತರಿಸುವ ವಿಮಾನಗಳನ್ನು ನಿಗದಿಪಡಿಸಲಾಗಿದೆ. ಒಂದು ತುರ್ಕಮೆನಿಸ್ತಾನದ ಅಶ್ಗಾಬಾತ್‌ನಿಂದ ಬೆಳಿಗ್ಗೆ ಮತ್ತು ಇನ್ನೊಂದು ಸಂಜೆ ಮಷಾದ್‌ನಿಂದ. ಅಗತ್ಯವಿದ್ದರೆ ವಾರಾಂತ್ಯದಲ್ಲಿ ಹೆಚ್ಚುವರಿ ವಿಮಾನಗಳನ್ನು ಆಯೋಜಿಸಬಹುದು ಎಂದು ಇರಾನಿನ ಹಿರಿಯ ರಾಜತಾಂತ್ರಿಕರೊಬ್ಬರು ಸೂಚಿಸಿದ್ದಾರೆ.

ಅದೇ ರೀತಿ, ಟೆಹ್ರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲಾದ 110 ಭಾರತೀಯ ಪ್ರಜೆಗಳ ಪ್ರತ್ಯೇಕ ಬ್ಯಾಚ್ ಗುರುವಾರ ಯೆರೆವಾನ್‌ನಿಂದ ವಿಮಾನದಲ್ಲಿ ದೆಹಲಿ ತಲುಪಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT