ನಯಬ್ ಸಿಂಗ್ ಸೈನಿ - ಯೋಗ ಗುರು ಬಾಬಾ ರಾಮದೇವ್ 
ದೇಶ

ಸರ್ಕಾರಿ ಕಚೇರಿಗಳಲ್ಲಿ 5 ನಿಮಿಷ ಯೋಗ ಬ್ರೇಕ್: ಹರಿಯಾಣ ಸಿಎಂ ಘೋಷಣೆ

ಯೋಗ ಗುರು ರಾಮದೇವ್, ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ, ರಾಜ್ಯದ ಆಯುಷ್ ಮತ್ತು ಆರೋಗ್ಯ ಸಚಿವೆ ಕುಮಾರಿ ಆರತಿ ಸಿಂಗ್ ರಾವ್ ಮತ್ತು ಸಂಸದ ನವೀನ್ ಜಿಂದಾಲ್ ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕುರುಕ್ಷೇತ್ರ: ಯೋಗವು "ಜೀವನದ ಕಲೆ" ಎಂದು ಪ್ರತಿಪಾದಿಸಿದ ಹರಿಯಾಣ ಮುಖ್ಯಮಂತ್ರಿ ನಯಬ್ ಸಿಂಗ್ ಸೈನಿ ಅವರು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಐದು ನಿಮಿಷಗಳ ಯೋಗ ವಿರಾಮ ನೀಡಲಾಗುವುದು ಮತ್ತು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಏಕರೂಪದ ಯೋಗ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು ಎಂದು ಶನಿವಾರ ಘೋಷಿಸಿದರು.

ಇಂದು ಕುರುಕ್ಷೇತ್ರದ ಬ್ರಹ್ಮ ಸರೋವರದಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ(IDY) ಪ್ರಯುಕ್ತ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡಿದ ಸೈನಿ, ಈ ವರ್ಷದ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷ ವಾಕ್ಯವು ಯೋಗವು ಕೇವಲ ವೈಯಕ್ತಿಕ ಯೋಗಕ್ಷೇಮಕ್ಕಾಗಿ ಅಲ್ಲ, ಬದಲಾಗಿ ಎಲ್ಲಾ ಮಾನವೀಯತೆಯ ಕಲ್ಯಾಣಕ್ಕಾಗಿ ಎಂದು ಹೇಳಿದರು.

ಯೋಗ ಗುರು ಬಾಬಾ ರಾಮದೇವ್, ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ, ರಾಜ್ಯದ ಆಯುಷ್ ಮತ್ತು ಆರೋಗ್ಯ ಸಚಿವೆ ಕುಮಾರಿ ಆರತಿ ಸಿಂಗ್ ರಾವ್ ಮತ್ತು ಸಂಸದ ನವೀನ್ ಜಿಂದಾಲ್ ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಕಾರ್ಯಕ್ರಮದ ಸಂದರ್ಭದಲ್ಲಿ ನೇರ ಪ್ರಸಾರ ಮಾಡಲಾಯಿತು.

ರಾಜ್ಯಮಟ್ಟದ ಕಾರ್ಯಕ್ರಮಕ್ಕಾಗಿ ಪವಿತ್ರ ಬ್ರಹ್ಮ ಸರೋವರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರೆ, ರಾಜ್ಯದ 22 ಜಿಲ್ಲೆಗಳು ಮತ್ತು 121 ಬ್ಲಾಕ್‌ಗಳಲ್ಲಿ ನಡೆದ ಯೋಗ ಕಾರ್ಯಕ್ರಮಗಳಲ್ಲಿ ಸುಮಾರು 20 ಲಕ್ಷ ಜನರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT