ನಯಬ್ ಸಿಂಗ್ ಸೈನಿ - ಯೋಗ ಗುರು ಬಾಬಾ ರಾಮದೇವ್ 
ದೇಶ

ಸರ್ಕಾರಿ ಕಚೇರಿಗಳಲ್ಲಿ 5 ನಿಮಿಷ ಯೋಗ ಬ್ರೇಕ್: ಹರಿಯಾಣ ಸಿಎಂ ಘೋಷಣೆ

ಯೋಗ ಗುರು ರಾಮದೇವ್, ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ, ರಾಜ್ಯದ ಆಯುಷ್ ಮತ್ತು ಆರೋಗ್ಯ ಸಚಿವೆ ಕುಮಾರಿ ಆರತಿ ಸಿಂಗ್ ರಾವ್ ಮತ್ತು ಸಂಸದ ನವೀನ್ ಜಿಂದಾಲ್ ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕುರುಕ್ಷೇತ್ರ: ಯೋಗವು "ಜೀವನದ ಕಲೆ" ಎಂದು ಪ್ರತಿಪಾದಿಸಿದ ಹರಿಯಾಣ ಮುಖ್ಯಮಂತ್ರಿ ನಯಬ್ ಸಿಂಗ್ ಸೈನಿ ಅವರು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಐದು ನಿಮಿಷಗಳ ಯೋಗ ವಿರಾಮ ನೀಡಲಾಗುವುದು ಮತ್ತು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಏಕರೂಪದ ಯೋಗ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು ಎಂದು ಶನಿವಾರ ಘೋಷಿಸಿದರು.

ಇಂದು ಕುರುಕ್ಷೇತ್ರದ ಬ್ರಹ್ಮ ಸರೋವರದಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ(IDY) ಪ್ರಯುಕ್ತ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡಿದ ಸೈನಿ, ಈ ವರ್ಷದ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷ ವಾಕ್ಯವು ಯೋಗವು ಕೇವಲ ವೈಯಕ್ತಿಕ ಯೋಗಕ್ಷೇಮಕ್ಕಾಗಿ ಅಲ್ಲ, ಬದಲಾಗಿ ಎಲ್ಲಾ ಮಾನವೀಯತೆಯ ಕಲ್ಯಾಣಕ್ಕಾಗಿ ಎಂದು ಹೇಳಿದರು.

ಯೋಗ ಗುರು ಬಾಬಾ ರಾಮದೇವ್, ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ, ರಾಜ್ಯದ ಆಯುಷ್ ಮತ್ತು ಆರೋಗ್ಯ ಸಚಿವೆ ಕುಮಾರಿ ಆರತಿ ಸಿಂಗ್ ರಾವ್ ಮತ್ತು ಸಂಸದ ನವೀನ್ ಜಿಂದಾಲ್ ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಕಾರ್ಯಕ್ರಮದ ಸಂದರ್ಭದಲ್ಲಿ ನೇರ ಪ್ರಸಾರ ಮಾಡಲಾಯಿತು.

ರಾಜ್ಯಮಟ್ಟದ ಕಾರ್ಯಕ್ರಮಕ್ಕಾಗಿ ಪವಿತ್ರ ಬ್ರಹ್ಮ ಸರೋವರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರೆ, ರಾಜ್ಯದ 22 ಜಿಲ್ಲೆಗಳು ಮತ್ತು 121 ಬ್ಲಾಕ್‌ಗಳಲ್ಲಿ ನಡೆದ ಯೋಗ ಕಾರ್ಯಕ್ರಮಗಳಲ್ಲಿ ಸುಮಾರು 20 ಲಕ್ಷ ಜನರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT