ವಿ.ಎಸ್. ಅಚ್ಯುತಾನಂದನ್ 
ದೇಶ

ಕೇರಳ ಮಾಜಿ ಮುಖ್ಯಮಂತ್ರಿ VS Achuthanandan ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

101 ವರ್ಷದ ರಾಜಕಾರಣಿ ಪ್ರಸ್ತುತ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬಕ್ಕೆ ಹತ್ತಿರವಿರುವ ಮೂಲಗಳ ಪ್ರಕಾರ, ಅವರ ಸ್ಥಿತಿ ಸ್ಥಿರವಾಗಿದೆ.

ತಿರುವನಂತಪುರಂ: ಹಿರಿಯ ಕಮ್ಯುನಿಸ್ಟ್ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಗೆ ಹೃದಯಾಘಾತವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

101 ವರ್ಷದ ರಾಜಕಾರಣಿ ಪ್ರಸ್ತುತ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬಕ್ಕೆ ಹತ್ತಿರವಿರುವ ಮೂಲಗಳ ಪ್ರಕಾರ, ಅವರ ಸ್ಥಿತಿ ಸ್ಥಿರವಾಗಿದೆ.

2019 ರಲ್ಲಿ ಪಾರ್ಶ್ವವಾಯುವಿಗೆ ಒಳಗಾದ ನಂತರ ಹಾಸಿಗೆ ಹಿಡಿದಿದ್ದ ಅಚ್ಯುತಾನಂದನ್ ಅವರಿಗೆ ಸೋಮವಾರ ಬೆಳಿಗ್ಗೆ ಹೃದಯಾಘಾತ ಸಂಭವಿಸಿ ಉಸಿರಾಟದ ತೊಂದರೆ ಉಂಟಾಗಿದೆ ಎಂದು ವರದಿಯಾಗಿದೆ. ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದ್ದು ವೈದ್ಯರು ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

1964 ರಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ರಚಿಸಲು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಯಿಂದ ಹೊರನಡೆದ 32 ಜನರಲ್ಲಿ ಅಚ್ಯುತಾನಂದನ್ ಮಾತ್ರ ಉಳಿದ ನಾಯಕರಾಗಿದ್ದರು. ಅವರು ಕೇರಳ ವಿಧಾನಸಭೆಯಲ್ಲಿ ಮೂರು ಬಾರಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದು ಹಲವು ವರ್ಷಗಳ ಕಾಲ ಸಿಪಿಎಂನ ರಾಜ್ಯ ಕಾರ್ಯದರ್ಶಿಯಾಗಿದ್ದರು. ಅವರು 2021 ರವರೆಗೆ ಕೇರಳ ವಿಧಾನಸಭೆಯ ಸಕ್ರಿಯ ಸದಸ್ಯರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

'ವಿರಾಟ್ ಕೊಹ್ಲಿ ಇದ್ದಿದ್ದರೆ ಫಲಿತಾಂಶ ಬೇರೆಯೇ ಆಗಿರುತ್ತಿತ್ತು'; ಗೌತಮ್ ಗಂಭೀರ್ ವಿರುದ್ಧ ಪಾಕ್ ಅನುಭವಿ ಆಟಗಾರ ಅಹ್ಮದ್ ಶೆಹಜಾದ್ ವಾಗ್ದಾಳಿ

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

SCROLL FOR NEXT