IndiGo ವಿಮಾನ 
ದೇಶ

'ನೀನು ವಿಮಾನ ಚಲಾಯಿಸಲು ಯೋಗ್ಯನಲ್ಲ, ಹೋಗಿ ಚಪ್ಪಲಿ ಹೊಲಿ': ಇಂಡಿಗೋ ಟ್ರೈನಿ ಪೈಲಟ್‌ಗೆ ಕಿರುಕುಳ

ದೂರುದಾರರು ಮೊದಲು ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಅಲ್ಲಿನ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಿದ್ದು, ಈ ಎಫ್‌ಐಆರ್ ಅನ್ನು ಈಗ ಇಂಡಿಗೋ ಪ್ರಧಾನ ಕಚೇರಿ ಇರುವ ಗುರುಗ್ರಾಮಕ್ಕೆ ವರ್ಗಾಯಿಸಲಾಗಿದೆ.

ನವದೆಹಲಿ: 'ನೀನು ವಿಮಾನ ಚಲಾಯಿಸಲು ಯೋಗ್ಯನಲ್ಲ' ಮತ್ತು 'ಹೋಗಿ ಚಪ್ಪಲಿಗಳನ್ನು ಹೊಲಿ' ಎಂದು ಹೇಳುವ ಮೂಲಕ ಮೂವರು ಹಿರಿಯ ಅಧಿಕಾರಿಗಳು ತನ್ನನ್ನು ಅವಮಾನಿಸಿದ್ದಾರೆ ಎಂದು ಇಂಡಿಗೋದ ತರಬೇತಿ ನಿರತ ಪೈಲಟ್ ಆರೋಪಿಸಿದ್ದಾರೆ.

35 ವರ್ಷದ ತರಬೇತಿನಿರತ ಪೈಲಟ್ ದಲಿತರಾಗಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ದೂರನ್ನು ಆಧರಿಸಿ ಪೊಲೀಸರು ಇಂಡಿಗೋ ಅಧಿಕಾರಿಗಳಾದ ತಪಸ್ ಡೇ, ಮನೀಶ್ ಸಾಹ್ನಿ ಮತ್ತು ಕ್ಯಾಪ್ಟನ್ ರಾಹುಲ್ ಪಾಟೀಲ್ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವರದಿಯ ಪ್ರಕಾರ, ದೂರುದಾರರು ಮೊದಲು ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಅಲ್ಲಿನ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಿದ್ದು, ಈ ಎಫ್‌ಐಆರ್ ಅನ್ನು ಈಗ ಇಂಡಿಗೋ ಪ್ರಧಾನ ಕಚೇರಿ ಇರುವ ಗುರುಗ್ರಾಮಕ್ಕೆ ವರ್ಗಾಯಿಸಲಾಗಿದೆ.

ದೂರುದಾರರು, ಏಪ್ರಿಲ್ 28 ರಂದು ಗುರುಗ್ರಾಮದ ಇಂಡಿಗೋ ಕಚೇರಿಯಲ್ಲಿ ನಡೆದ ಸಭೆಯನ್ನು ಉಲ್ಲೇಖಿಸಿದ್ದಾರೆ. 30 ನಿಮಿಷಗಳ ಕಾಲ ನಡೆದ ಸಭೆಯಲ್ಲಿ, 'ನೀನು ವಿಮಾನ ಚಲಾಯಿಸಲು ಯೋಗ್ಯನಲ್ಲ, ಹಿಂತಿರುಗಿ ಹೋಗಿ ಚಪ್ಪಲಿ ಹೊಲಿ. ನೀನು ಇಲ್ಲಿ ವಾಚ್‌ಮೆನ್ ಆಗಲು ಸಹ ಅರ್ಹನಲ್ಲ' ಎಂದು ಹೇಳಲಾಗಿದೆ ಎಂದು ದೂರಿದ್ದಾರೆ.

ನನಗೆ ಕಿರುಕುಳ ನೀಡಿದ್ದು, ನಾನು ರಾಜೀನಾಮೆ ನೀಡುವಂತೆ ಒತ್ತಾಯಿಸುವ ಗುರಿಯನ್ನು ಅವರು ಹೊಂದಿದ್ದಾರೆ. ಈ ರೀತಿಯ ಅವಹೇಳನಕಾರಿ ಹೇಳಿಕೆಗಳು ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯ ಗುರುತನ್ನು ಕುಗ್ಗಿಸುವ ಗುರಿಯನ್ನು ಹೊಂದಿವೆ ಎಂದು ತರಬೇತಿನಿರತ ಪೈಲಟ್ ಹೇಳಿದ್ದಾರೆ.

ಅನ್ಯಾಯದ ವೇತನ ಕಡಿತ, ಬಲವಂತದ ಮರುತರಬೇತಿ ಸೆಷನ್ಸ್‌ಗಳು ಮತ್ತು ಅನಗತ್ಯ ಎಚ್ಚರಿಕೆ ಪತ್ರಗಳ ಮೂಲಕ ತನ್ನನ್ನು 'ವೃತ್ತಿಪರ ಬಲಿಪಶು'ವನ್ನಾಗಿ ಮಾಡಲಾಗಿದೆ. ಉನ್ನತ ಅಧಿಕಾರಿಗಳು ಮತ್ತು ಇಂಡಿಗೋದ ನೈತಿಕ ಸಮಿತಿಯೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದರೂ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಕೊನೆಗೆ ಪೊಲೀಸರಿಗೆ ದೂರು ನೀಡಬೇಕಾಯಿತು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT