IndiGo ವಿಮಾನ 
ದೇಶ

'ನೀನು ವಿಮಾನ ಚಲಾಯಿಸಲು ಯೋಗ್ಯನಲ್ಲ, ಹೋಗಿ ಚಪ್ಪಲಿ ಹೊಲಿ': ಇಂಡಿಗೋ ಟ್ರೈನಿ ಪೈಲಟ್‌ಗೆ ಕಿರುಕುಳ

ದೂರುದಾರರು ಮೊದಲು ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಅಲ್ಲಿನ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಿದ್ದು, ಈ ಎಫ್‌ಐಆರ್ ಅನ್ನು ಈಗ ಇಂಡಿಗೋ ಪ್ರಧಾನ ಕಚೇರಿ ಇರುವ ಗುರುಗ್ರಾಮಕ್ಕೆ ವರ್ಗಾಯಿಸಲಾಗಿದೆ.

ನವದೆಹಲಿ: 'ನೀನು ವಿಮಾನ ಚಲಾಯಿಸಲು ಯೋಗ್ಯನಲ್ಲ' ಮತ್ತು 'ಹೋಗಿ ಚಪ್ಪಲಿಗಳನ್ನು ಹೊಲಿ' ಎಂದು ಹೇಳುವ ಮೂಲಕ ಮೂವರು ಹಿರಿಯ ಅಧಿಕಾರಿಗಳು ತನ್ನನ್ನು ಅವಮಾನಿಸಿದ್ದಾರೆ ಎಂದು ಇಂಡಿಗೋದ ತರಬೇತಿ ನಿರತ ಪೈಲಟ್ ಆರೋಪಿಸಿದ್ದಾರೆ.

35 ವರ್ಷದ ತರಬೇತಿನಿರತ ಪೈಲಟ್ ದಲಿತರಾಗಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ದೂರನ್ನು ಆಧರಿಸಿ ಪೊಲೀಸರು ಇಂಡಿಗೋ ಅಧಿಕಾರಿಗಳಾದ ತಪಸ್ ಡೇ, ಮನೀಶ್ ಸಾಹ್ನಿ ಮತ್ತು ಕ್ಯಾಪ್ಟನ್ ರಾಹುಲ್ ಪಾಟೀಲ್ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವರದಿಯ ಪ್ರಕಾರ, ದೂರುದಾರರು ಮೊದಲು ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಅಲ್ಲಿನ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಿದ್ದು, ಈ ಎಫ್‌ಐಆರ್ ಅನ್ನು ಈಗ ಇಂಡಿಗೋ ಪ್ರಧಾನ ಕಚೇರಿ ಇರುವ ಗುರುಗ್ರಾಮಕ್ಕೆ ವರ್ಗಾಯಿಸಲಾಗಿದೆ.

ದೂರುದಾರರು, ಏಪ್ರಿಲ್ 28 ರಂದು ಗುರುಗ್ರಾಮದ ಇಂಡಿಗೋ ಕಚೇರಿಯಲ್ಲಿ ನಡೆದ ಸಭೆಯನ್ನು ಉಲ್ಲೇಖಿಸಿದ್ದಾರೆ. 30 ನಿಮಿಷಗಳ ಕಾಲ ನಡೆದ ಸಭೆಯಲ್ಲಿ, 'ನೀನು ವಿಮಾನ ಚಲಾಯಿಸಲು ಯೋಗ್ಯನಲ್ಲ, ಹಿಂತಿರುಗಿ ಹೋಗಿ ಚಪ್ಪಲಿ ಹೊಲಿ. ನೀನು ಇಲ್ಲಿ ವಾಚ್‌ಮೆನ್ ಆಗಲು ಸಹ ಅರ್ಹನಲ್ಲ' ಎಂದು ಹೇಳಲಾಗಿದೆ ಎಂದು ದೂರಿದ್ದಾರೆ.

ನನಗೆ ಕಿರುಕುಳ ನೀಡಿದ್ದು, ನಾನು ರಾಜೀನಾಮೆ ನೀಡುವಂತೆ ಒತ್ತಾಯಿಸುವ ಗುರಿಯನ್ನು ಅವರು ಹೊಂದಿದ್ದಾರೆ. ಈ ರೀತಿಯ ಅವಹೇಳನಕಾರಿ ಹೇಳಿಕೆಗಳು ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯ ಗುರುತನ್ನು ಕುಗ್ಗಿಸುವ ಗುರಿಯನ್ನು ಹೊಂದಿವೆ ಎಂದು ತರಬೇತಿನಿರತ ಪೈಲಟ್ ಹೇಳಿದ್ದಾರೆ.

ಅನ್ಯಾಯದ ವೇತನ ಕಡಿತ, ಬಲವಂತದ ಮರುತರಬೇತಿ ಸೆಷನ್ಸ್‌ಗಳು ಮತ್ತು ಅನಗತ್ಯ ಎಚ್ಚರಿಕೆ ಪತ್ರಗಳ ಮೂಲಕ ತನ್ನನ್ನು 'ವೃತ್ತಿಪರ ಬಲಿಪಶು'ವನ್ನಾಗಿ ಮಾಡಲಾಗಿದೆ. ಉನ್ನತ ಅಧಿಕಾರಿಗಳು ಮತ್ತು ಇಂಡಿಗೋದ ನೈತಿಕ ಸಮಿತಿಯೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದರೂ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಕೊನೆಗೆ ಪೊಲೀಸರಿಗೆ ದೂರು ನೀಡಬೇಕಾಯಿತು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT