ಪ್ರಧಾನಿ ನರೇಂದ್ರ ಮೋದಿ  
ದೇಶ

ತುರ್ತು ಪರಿಸ್ಥಿತಿ ವಿರೋಧಿ ಚಳವಳಿ ನನಗೆ ಕಲಿಕೆಯ ಅನುಭವವಾಗಿತ್ತು: ಪ್ರಧಾನಿ ಮೋದಿ

"ಪ್ರಜಾಪ್ರಭುತ್ವದ ಆದರ್ಶಗಳಿಗಾಗಿ" ಮೋದಿಯವರ ಹೋರಾಟವನ್ನು ಎತ್ತಿ ತೋರಿಸುವ 'ದಿ ಎಮರ್ಜೆನ್ಸಿ ಡೈರೀಸ್ - ಇಯರ್ಸ್ ದಟ್ ಫೋರ್ಜ್ಡ್ ಎ ಲೀಡರ್' ನ್ನು ಬ್ಲೂಕ್ರಾಫ್ಟ್ ಪ್ರಕಟಿಸಿದೆ.

ನವದೆಹಲಿ: ದೇಶಕ್ಕೆ 1975ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಪರಿಸ್ಥಿತಿಯ ಕುರಿತಾದ ಪುಸ್ತಕ ಬಿಡುಗಡೆಗೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಪ್ರಸ್ತಾಪಿಸಿದ್ದು, ಈ ಅವಧಿ ತಮಗೆ ಕಲಿಕೆಯ ಅನುಭವ ಎಂದು ಹೇಳಿದ್ದು, ಪ್ರಜಾಪ್ರಭುತ್ವ ಚೌಕಟ್ಟನ್ನು ಸಂರಕ್ಷಿಸುವ ಚೈತನ್ಯವನ್ನು ಪುನರುಚ್ಚರಿಸಿದ್ದಾರೆ.

"ಪ್ರಜಾಪ್ರಭುತ್ವದ ಆದರ್ಶಗಳಿಗಾಗಿ" ಮೋದಿಯವರ ಹೋರಾಟವನ್ನು ಎತ್ತಿ ತೋರಿಸುವ 'ದಿ ಎಮರ್ಜೆನ್ಸಿ ಡೈರೀಸ್ - ಇಯರ್ಸ್ ದಟ್ ಫೋರ್ಜ್ಡ್ ಎ ಲೀಡರ್' ನ್ನು ಬ್ಲೂಕ್ರಾಫ್ಟ್ ಪ್ರಕಟಿಸಿದೆ. ಇದನ್ನು ಇಂದು ಸಂಜೆ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಲಿದ್ದಾರೆ.

ತುರ್ತು ಪರಿಸ್ಥಿತಿಯ ವರ್ಷಗಳಲ್ಲಿನ ಅವರ ಪ್ರಯಣವನ್ನು ಪುಸ್ತಕವು ವಿವರಿಸುತ್ತದೆ ಎಂದು ಮೋದಿ ಹೇಳಿದರು. "ಇದು ಆ ಕಾಲದ ಅನೇಕ ನೆನಪುಗಳನ್ನು ಮರಳಿ ತರುತ್ತದೆ. ತುರ್ತು ಪರಿಸ್ಥಿತಿಯ ಆ ಕರಾಳ ದಿನಗಳನ್ನು ನೆನಪಿಸಿಕೊಳ್ಳುವ ಎಲ್ಲರೂ ಅಥವಾ ಆ ಸಮಯದಲ್ಲಿ ತುರ್ತು ಪರಿಸ್ಥಿತಿ ಅನುಭವಿಸಿದ ಕುಟುಂಬಗಳು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ನಾನು ಕರೆ ನೀಡುತ್ತೇನೆ. ಇದು 1975 ರಿಂದ 1977 ರವರೆಗಿನ ಅವಧಿಯ ಸಮಯದ ಯುವಕರಲ್ಲಿ ಜಾಗೃತಿ ಮೂಡಿಸುತ್ತದೆ ಎಂದರು.

ಆ ಅವಧಿಯಲ್ಲಿ ತಾವು ಯುವ ಆರ್‌ಎಸ್‌ಎಸ್ ಪ್ರಚಾರಕನಾಗಿದ್ದೆ. ತುರ್ತುಸ್ಥಿತಿ ವಿರೋಧಿ ಚಳವಳಿ ನನಗೆ ಒಂದು ಕಲಿಕೆಯ ಅನುಭವವಾಗಿತ್ತು. ಇದು ನಮ್ಮ ಪ್ರಜಾಪ್ರಭುತ್ವ ಚೌಕಟ್ಟನ್ನು ಸಂರಕ್ಷಿಸುವ ಚೈತನ್ಯವನ್ನು ಪುನರುಚ್ಚರಿಸಿತು. ಅದೇ ಸಮಯದಲ್ಲಿ, ರಾಜಕೀಯ ವರ್ಣಪಟಲದಾದ್ಯಂತದ ಜನರಿಂದ ನಾನು ಬಹಳಷ್ಟು ಕಲಿಯಲು ಸಾಧ್ಯವಾಯಿತು ಎಂದು ಹೇಳಿದರು.

ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಆ ಅನುಭವಗಳಲ್ಲಿ ಕೆಲವನ್ನು ಪುಸ್ತಕದ ರೂಪದಲ್ಲಿ ಸಂಗ್ರಹಿಸಿದೆ. ಅದರ ಮುನ್ನುಡಿಯನ್ನು ಸ್ವತಃ ತುರ್ತುಸ್ಥಿತಿ ವಿರೋಧಿ ಚಳವಳಿಯ ಪ್ರಮುಖರಾದ ಹೆಚ್ ಡಿ ದೇವೇಗೌಡರು ಬರೆದಿದ್ದಾರೆ ಎಂದು ಪ್ರಧಾನಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT