ಆರೋಪಿ ತೌಫಿಕ್-ನೇಹಾ 
ದೇಶ

ದೆಹಲಿ: ಬುರ್ಕಾ ಧರಿಸಿದ್ದ ತೌಫಿಕ್ ನನ್ನ ಕಣ್ಣೇದುರೆ ನನ್ನ ಮಗಳನ್ನು 5ನೇ ಮಹಡಿಯಿಂದ ತಳ್ಳಿದ; ತಂದೆ ಆಕ್ರಂದನ!

ದೆಹಲಿಯ ಜ್ಯೋತಿ ನಗರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 19 ವರ್ಷದ ಯುವತಿಯನ್ನು 5ನೇ ಮಹಡಿಯಿಂದ ಎಸೆದು ಕೊಲ್ಲಲಾಗಿದೆ.

ನವದೆಹಲಿ: ದೆಹಲಿಯ ಜ್ಯೋತಿ ನಗರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 19 ವರ್ಷದ ಯುವತಿಯನ್ನು 5ನೇ ಮಹಡಿಯಿಂದ ಎಸೆದು ಕೊಲ್ಲಲಾಗಿದೆ. ಬುರ್ಖಾ ಧರಿಸಿ ಬಂದ ಯುವಕ ಯುವತಿಯ ಜೊತೆ ವಾಗ್ವಾದ ನಡೆಸಿದ ನಂತರ ಆಕೆಯನ್ನು ಮಹಡಿಯಿಂದ ಕೆಳಗೆ ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ.

ಅಶೋಕ್ ನಗರ ಪ್ರದೇಶದಲ್ಲಿ ಯುವತಿಯೊಬ್ಬಳು ಮಹಡಿಯಿಂದ ಬಿದ್ದಿದ್ದಾಳೆ ಎಂಬ ಮಾಹಿತಿ ದೆಹಲಿ ಪೊಲೀಸರಿಗೆ ಸಿಕ್ಕಿತ್ತು. ಮಾಹಿತಿ ಬಂದ ತಕ್ಷಣ, ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು. ಅದಾಗಲೇ ಗಾಯಗೊಂಡ ಬಾಲಕಿಯನ್ನು ಆಕೆಯ ತಂದೆ ತಕ್ಷಣವೇ ಜಿಟಿಬಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಾಲಕಿಯನ್ನು 19 ವರ್ಷದ ನೇಹಾ ಎಂದು ಗುರುತಿಸಲಾಗಿದೆ. ಚಿಕಿತ್ಸೆಯ ಸಮಯದಲ್ಲಿ ನೇಹಾ ಸಾವನ್ನಪ್ಪಿದ್ದಾಳೆ. ಮೊದಲಿಗೆ ಇದನ್ನು ಅಪಘಾತವೆಂದು ಪರಿಗಣಿಸಲಾಗಿತ್ತು. ಆದರೆ ನೇಹಾಳ ತಂದೆ ಮಾಹಿತಿ ನೀಡಿದ ಬಳಿಕ ಈ ಇಡೀ ಪ್ರಕರಣವು ಕೊಲೆಯಾಗಿ ಮಾರ್ಪಟ್ಟಿತು.

ನೇಹಾಳ ತಂದೆಯ ಪ್ರಕಾರ, 'ನನ್ನ ಮಗಳು ನೀರು ತುಂಬಿಸಲು ಮಹಡಿಗೆ ಹೋಗಿದ್ದಳು. ಆಗ ಬುರ್ಖಾ ಧರಿಸಿದ ವ್ಯಕ್ತಿ ಮಹಡಿಯ ಮೇಲೆ ಇರುವುದನ್ನು ನಾನು ನೋಡಿದೆ. ಅವನ ಮುಖ ಕಾಣುತ್ತಿತ್ತು. ಆತ ನನ್ನ ಮಗಳ ಕತ್ತು ಹಿಸುಕುತ್ತಿದ್ದನು. ಅದನ್ನು ತಡೆಯಲು ನಾನು ಮುಂದಾದಾಗ ಆತ ಗಾಬರಿಗೊಂಡು ನನ್ನ ಮಗಳನ್ನು ಮಹಡಿಯಿಂದ ತಳ್ಳಿದನು. ನಾನು ಅವನನ್ನು ಹಿಡಿಯಲು ಪ್ರಯತ್ನಿಸಿದೆ ಆದರೆ ಅವನು ನನ್ನನ್ನೂ ತಳ್ಳಿ ಓಡಿಹೋದನು ಎಂದು ಹೇಳಿದರು.

ತಂದೆಯ ಈ ಹೇಳಿಕೆಯು ಈ ಘಟನೆಯನ್ನು ಯೋಜಿತ ಕೊಲೆ ಎಂದು ನೇರವಾಗಿ ಸೂಚಿಸುತ್ತದೆ. ವಿಷಯದ ಗಂಭೀರತೆಯನ್ನು ಅರಿತ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ, ಜ್ಯೋತಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 109(1)/351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತನಿಖೆಯ ಸಮಯದಲ್ಲಿ ಪೊಲೀಸರಿಗೆ ಹಲವು ಸುಳಿವುಗಳು ಸಿಕ್ಕಿದ್ದು ಅದರ ಆಧಾರದ ಮೇಲೆ ಆರೋಪಿಯನ್ನು ತೌಫಿಕ್ ಎಂದು ಗುರುತಿಸಲಾಗಿದೆ. ಆರೋಪಿಯು ಬುರ್ಖಾ ಧರಿಸಿ ನೇಹಾಳ ಮನೆಗೆ ಪ್ರವೇಶಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊಲೆಗೆ ಕಾರಣ ಸದ್ಯಕ್ಕೆ ಸ್ಪಷ್ಟವಾಗಿಲ್ಲವಾದರೂ, ನೇಹಾ ಮತ್ತು ತೌಫಿಕ್ ಒಬ್ಬರಿಗೊಬ್ಬರು ಮೊದಲೇ ಪರಿಚಯವಿತ್ತು ಎನ್ನಲಾಗಿದೆ. ಘಟನೆಯ ಬಳಿಕ ತೌಫಿಕ್ ಎಂಬ ಆರೋಪಿಯನ್ನು ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ತಾಂಡಾದಿಂದ ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT