ಸಿಎಂ ಯೋಗಿ ಆದಿತ್ಯನಾಥ್ 
ದೇಶ

ಯೋಗಿ ನಾಡಲ್ಲಿ ಮುಂದುವರೆದ ಹೆಸರು ಬದಲಾವಣೆ ರಾಜಕೀಯ! ಫತೇಹಾಬಾದ್ ಗೆ 'ಸಿಂಧೂರಪುರಂ' ಮರುನಾಮಕರಣ

ಫತೇಹಾಬಾದ್ ಪಟ್ಟಣದ ಹೆಸರನ್ನು ಸಿಂಧೂರಪುರಂ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಬ್ರಹ್ಮಪುರಂ ಎಂದು ಮರು ನಾಮಕರಣ ಮಾಡಲಾಗುತ್ತಿದೆ.

ಲಖನೌ: ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಹೆಸರು ಬದಲಾವಣೆ ರಾಜಕೀಯ ಮುಂದುವರೆದಿದೆ. ಇದೀಗ ಆಗ್ರಾದ ಫತೇಹಾಬಾದ್ ಪಟ್ಟಣ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಹೆಸರನ್ನು ಬದಲಾಯಿಸಲು ನಿರ್ಧರಿಸಲಾಗಿದೆ.

ಫತೇಹಾಬಾದ್ ಪಟ್ಟಣದ ಹೆಸರನ್ನು ಸಿಂಧೂರಪುರಂ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಬ್ರಹ್ಮಪುರಂ ಎಂದು ಮರು ನಾಮಕರಣ ಮಾಡಲಾಗುತ್ತಿದೆ.

ಸೋಮವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಂಜು ಭಡೋರಿಯಾ ಅವರು ಈ ಕುರಿತು ಪ್ರಸ್ತಾವನೆಯನ್ನು ಮಂಡಿಸಿ ಸರ್ವಾನುಮತದಿಂದ ಅಂಗೀಕರಿಸಿದರು. ಇದೀಗ ಅನುಮೋದನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗುತ್ತಿದೆ.

ಈ ಪ್ರದೇಶಗಳು ಗುಲಾಮಗಿರಿ ಸಂಕೇತಿಸುವುದರಿಂದ ಹೆಸರು ಬದಲಾವಣೆಗಳನ್ನು ನಿರ್ಣಯ ಕೈಗೊಳ್ಳಲಾಗಿದೆ ಎಂದು ಭಡೋರಿಯಾ ಹೇಳಿದರು. ಫತೇಹಾಬಾದ್ ಪಟ್ಟಣವನ್ನು ಹಿಂದೆ ಸಮುಘರ್ ಎಂದು ಕರೆಯಲಾಗುತ್ತಿತ್ತು. ಇದನ್ನು ಸಿಂಧೂರಪುರಂ ಎಂದು ಮರುನಾಮಕರಣ ಮಾಡಲು ಸೂಚಿಸಲಾಗಿದೆ.

ಫತೇಹಾಬಾದ್‌ನಲ್ಲಿರುವ ಬಾದಶಾಹಿ ಬಾಗ್ ಪ್ರದೇಶವನ್ನು ಬ್ರಹ್ಮೋಸ್ ಕ್ಷಿಪಣಿ ಮತ್ತು ಬ್ರಹ್ಮನ ಹೆಸರಿನಲ್ಲಿ ಬ್ರಹ್ಮಪುರಂ ಎಂದು ಮರುನಾಮಕರಣಕ್ಕೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ